ಉತ್ತಮ ಸೇವೆಗೆ ಎಲ್‍ಐಸಿ ಮಾದರಿ

ಸಿದ್ದಾಪುರ;ಸೆ.02- ಇಂದು ನಾವು ಬಹುತೇಕ ಯಾವುದೇ ಆಫೀಸಿಗೆ ಹೋದರೂ ಅಲ್ಲಿ ನಮ್ಮನ್ನು ಯಾರೂ ಗಮನಿಸುವುದಿಲ್ಲ. ವಯಸ್ಸಾದವರಿಗೂ ಏನಾಗಬೇಕೆಂದು ಕೇಳಿ ಸಹಕರಿಸುವುದಿಲ್ಲ. ಆದರೆ ಭಾರತೀಯ ಜೀವವಿಮಾ ನಿಗಮದ ಕಾರ್ಯಾಲಯಗಳಲ್ಲಿಯ ಅಧಿಕಾರಿಗಳು, ಸಿಬ್ಬಂದಿಗಳು ಗ್ರಾಹಕರನ್ನು ಉತ್ತಮವಾಗಿ ನಡೆಸಿಕೊಳ್ಳುತ್ತಾರೆ. ನಿಗಮದಿಂದ ನಮಗೆ ಎಷ್ಟೇ ಹಣ ಮರಳಿ ಬರುವುದಿದ್ದರೂ ಅದನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ನ್ಯಾಯಯುತವಾಗಿ ದೊರೆಯುವಂತೆ ಮಾಡುತ್ತಾರೆ ಎಂದು ವಯೋವೃದ್ಧ ನಿವೃತ್ತ ಶಿಕ್ಷಕ ಈರಾ ಕನ್ನಾ ನಾಯ್ಕ ಶಿರಳಗಿ ಹೇಳಿದ್ದಾರೆ.
ಅವರು ಭಾರತೀಯ ಜೀವವಿಮಾ ನಿಗಮದ ಸ್ಥಳೀಯ ಸಂಪರ್ಕ ಶಾಖೆಯಲ್ಲಿ ನಿಗಮದ 63 ನೇ ವಾರ್ಷಿಕೋತ್ಸವವನ್ನು ರವಿವಾರ ಉದ್ಘಾಟಿಸಿ ಮಾತನಾಡುತ್ತಿದ್ದರು. ದೇಶದ ಅಭಿವೃದ್ಧಿಯಲ್ಲಿ ತನ್ನ ಕೈ ಜೋಡಿಸುತ್ತಿರುವ ಎಲ್‍ಐಸಿ ಸಂಸ್ಥೆಯು ಸೂರ್ಯಚಂದ್ರರಿರುವವರೆಗೂ ಬೆಳಗಲಿ ಎಂದು ಅವರು ಹಾರೈಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಪರ್ಕ ಶಾಖೆಯ ಶಾಖಾಧಿಕಾರಿ ರಘುಕುಲೇಂದ್ರ ಎಸ್.ಆರ್. ಎಲ್‍ಐಸಿ ಇಂದು ಪ್ರಪಂಚದ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದಿದೆ. ತನ್ನಲ್ಲಿಯ ಹೆಚ್ಚಿನ ಹಣವನ್ನು ಕೇಂದ್ರ ಸರಕಾರದ ವಿವಿಧ ಯೋಜನೆಗಳಲ್ಲಿ ತೊಡಗಿಸುತ್ತಿದೆಯಲ್ಲದೆ, ಪ್ರತಿವರ್ಷವೂ ಕೇಂದ್ರಕ್ಕೆ ಸಹಸ್ರಾರು ಕೋಟಿ ರೂ.ಗಳ ತನ್ನ ಲಾಭಾಂಶವನ್ನು ನೀಡುತ್ತಾ ಬಂದಿದೆ. ಕಳೆದ ತಿಂಗಳ ಕೊನೆಯಲ್ಲಿ ಜೀವನ ಶಾಂತಿ ಪಾಲಿಸಿಯ ಮೂಲಕ ನಿಗಮವು 50 ಸಾವಿರ ಕೋಟಿ ರೂ.ಗಳಿಗೂ ಮೀರಿ ಪ್ರಥಮ ಪ್ರೀಮಿಯಂ ಆದಾಯಗಳಿಸುವ ಮೂಲಕ ದಾಖಲೆ ನಿರ್ಮಿಸಿದೆ. ಸಿದ್ದಾಪುರ ಸಂಪರ್ಕ ಶಾಖೆ ಸಹ ಉತ್ತಮ ಪ್ರಗತಿ ತೋರಿದ್ದು ವಿಭಾಗದಲ್ಲಿ ಪ್ರಥಮ ಸ್ಥಾನದ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು. ನಿಗಮದ 63 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಮ್ಮೆಲ್ಲಾ ಗ್ರಾಹಕರಿಗೂ ಸುಖ ಸಮೃದ್ಧಿ ದೊರೆಯಲೆಂದು ಪ್ರಾರ್ಥಿಸುತ್ತೇವೆ ಎಂದರು. ಅಭಿವೃದ್ಧಿ ಅಧಿಕಾರಿ ಎಸ್.ಜಿ.ಶಾನಭಾಗ, ಸಿಬ್ಬಂದಿ ಭರತ ಶಹಾ, ಹಿರಿಕಿರಿಯ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅಭಿವೃದ್ಧಿ ಅಧಿಕಾರಿ ದೀಪಕ ಹೆಗಡೆ ವಂದನಾರ್ಪಣೆ ಮಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *