ಉದ್ಘಾಟನೆ,ಶಂಕುಸ್ಥಾಪನೆ ಶಾಸಕರಿಗೆ ಮನವಿ ನೀಡಿಪರಿಹಾರ ಕೋರಿದ ವಿದ್ಯಾರ್ಥಿಗಳು

ಉದ್ಘಾಟನೆ,ಶಂಕುಸ್ಥಾಪನೆ ಶಾಸಕರಿಗೆ ಮನವಿ ನೀಡಿಪರಿಹಾರ ಕೋರಿದ ವಿದ್ಯಾರ್ಥಿಗಳು
ಸರಕಾರಿ ಕಾಲೇಜ್ ಹೆಚ್ಚುವರಿ ಕೊಠಡಿಗೆ ಶಿಲಾನ್ಯಾಸ
ಸಿದ್ಧಾಪುರ ತಾಲೂಕಿನ ಬೇಡ್ಕಣಿ ಸರಕಾರಿ ಪ್ರಥಮದರ್ಜೆ ಕಾಲೇಜ್‍ಗೆ 4.55ಕೋಟಿರೂ.ವೆಚ್ಚದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಇಲ್ಲಿಯ ಕಾಲೇಜ್‍ಗೆ ವಿಶಾಲವಾದ ಜಾಗವಿದೆ ಇಲ್ಲಿ ಸಾಕಷ್ಟು ಸಮಸ್ಯೆ ಇದೆ ಹೊಸ ಜಾಗದಲ್ಲಿ ಯಾವುದೇ ಸಂಸ್ಥೆಪ್ರಾರಂಭವಾದರೂ ಸಮಸ್ಯೆ ಇರುವುದು ಸಹಜ ಇದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು ಕಾಲೇಜ್ ಪ್ರಾರಂಭವಾದ ನಂತರ ಹೊಸ ಸರಕಾರ ಬಂದಿದ್ದ ಕಾರಣ ಕೆಲವು ಸಮಸ್ಯೆ ಬಗೆಹರಿಸಲು ಆಗಿಲ್ಲ ಇಲ್ಲಿಯ ಬಸ್‍ಗಳ ಸಮಸ್ಯೆ, ರಸ್ತೆಯ ಸಮಸ್ಯೆ,ಗ್ರಂಥಾಲಯದ ಸಮಸ್ಯೆ ಇದೆ 2 ಕೋಟಿರೂ.ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದ್ದು ಪುನಃ 4.55ಕೋಟಿರೂ. ವೆಚ್ಚದಲ್ಲಿ ಇನ್ನೂ 10 ಕೊಠಡಿಗಳು ನಿರ್ಮಾಣವಾಗುತ್ತಿವೆ. ಇಲ್ಲಿಯ ಸಮಸ್ಯೆಯನ್ನು ರಾಜಕೀಯವಾಗಿ ಬಳಿಸಿಕೊಳ್ಳುವ ಪ್ರಯತ್ನ ಬೇಡ ಎಲ್ಲರೂ ಸೇರಿ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ತಾಪಂ ಅಧ್ಯಕ್ಷ ಸುಧೀರ್ ಗೌಡರ್ ಮಾತನಾಡಿದರು.ಸಭೆಯಲ್ಲಿ ಜಿಪಂ ಸದಸ್ಯ ನಾಗರಾಜ ನಾಯ್ಕ,ಎಂ.ಜಿ.ಹೆಗಡೆ ಗೆಜ್ಜೆ,ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ತಹಸೀಲ್ದಾರ ಗೀತಾ ಸಿ.ಜಿ.,ಪ್ರಾಚಾರ್ಯ ಎಸ್.ಜಿ.ಹೆಗಡೆ ಮುಂತಾದವರು ಉಪಸ್ಥಿತರಿದ್ದರು. ಪ್ರೋ.ಅರುಣ ಪ್ರಸಾದ ಸ್ವಾಗತಿಸಿದರು.
ಇದಕ್ಕೂ ಮೊದಲು ಕಾಲೇಜ್ ವಿದ್ಯಾರ್ಥಿಗಳು ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ಇಲ್ಲಿಯ ಬಸ್‍ಸಮಸ್ಯೆಯ ಬಗ್ಗೆ,ಗ್ರಂಥಾಲಯ ಇಲ್ಲದಿರುವುದು,ಕ್ಯಾಂಟಿನ್ ಹಾಗೂ ಬಸ್‍ನಿಲ್ದಾಣದ ಸಮಸ್ಯೆ ಬಗೆಹರಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾಗೇರಿ ಇಲ್ಲಿಯ ಸಮಸ್ಯೆಯ ಬಗ್ಗೆ ನನಗೆ ಅರಿವಿದೆ ಇನ್ನು ಕೆಲವೇ ದಿನದಲ್ಲಿ ಇಲ್ಲಿಯ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *