
ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿಗಳಿಂದ ಬೇಸತ್ತು ಐ.ಎ.ಎಸ್. ಅಧಿಕಾರಿಗಳು ರಾಜೀನಾಮೆ ನೀಡುತ್ತಿರುವ ವಿದ್ಯಮಾನ ವಿಸ್ತರಿಸತೊಡಗಿದೆ.
ಇಂದು ತಮ್ಮ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಮಂಗಳೂರು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ದೇಶದಲ್ಲಿ ಪ್ರಜಾಪ್ರಭುತ್ವ, ನ್ಯಾಯ, ವಿವಿಧತೆಯಲ್ಲಿ ಏಕತೆ ನಾಶವಾಗುತ್ತಿದೆ. ಈಗಾಗಲೇ ಪ್ರಾರಂಭವಾಗಿರುವ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವದ ವಿರೋಧಿ ನೀತಿಗಳು ವಿಸ್ತರಿಸುವ ಅಪಾಯಗಳು ಹೆಚ್ಚಿವೆ. ಈ ವ್ಯವಸ್ಥೆಯಲ್ಲಿದ್ದು ಈ ಅನಾಹುತಗಳಿಗೆ ಸಾಕ್ಷಿಯಾಗುವುದಕ್ಕಿಂತ ಇಲ್ಲಿಂದ ಹೊರನಡೆದು ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಒಪ್ಪುವ ರೀತಿಯ ಮೂಲಕ ಹೋರಾಟದಿಂದ ಜನತೆಗೆ ನ್ಯಾಯ ಕೊಡಿಸಬಹುದು. ಇದು ನನ್ನ ವೈಯಕ್ತಿಕ ತೀರ್ಮಾನ ಮಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಜನತೆ ನನಗೆ ಸಹಕಾರ ನೀಡಿದ್ದಾರೆ. ಆದರೆ ಈಗ ದೇಶದಲ್ಲಿ ಸೌಹಾರ್ದತೆ,ಬಹುತ್ವಕ್ಕೆ ವಿರುದ್ಧವಾದ ಆಡಳಿತ ವ್ಯವಸ್ಥೆ ಜಾರಿ ಮಾಡುವ ಗುಪ್ತ ಅಜೆಂಡಾ ವಿವಿಧತೆ, ಸಹಜತೆ, ಸಾಮರಸ್ಯಗಳಿಗೆ ವಿರುದ್ಧವಾಗಿದೆ.
ಸಾಧ್ಯವಾದರೆ ಇಂಥ ಸಂವಿಧಾನವಿರೋಧಿ ಶಕ್ತಿಗಳಿಗೆ ಸೆಡ್ಡು ಹೊಡೆದು ಬದುಕುವುದು ಇಲ್ಲಿದ್ದು ವಿವೇಕಯುತವಲ್ಲದ ವ್ಯವಸ್ಥಗೆ ಒಪ್ಪಿಕೊಂಡು ಜನದ್ರೋಹ ಮಾಡುವುದಕ್ಕಿಂತ ಸೂಕ್ತ ಆಯ್ಕೆ ಎಂದು ಭಾವಿಸಿದ್ದೇನೆ ಎಂದು ಅವರು ಜನತೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.ಇವರು ಹಿಂದೆ ಶಿವಮೊಗ್ಗದಲ್ಲಿ ಜಿ.ಪಂ. ಮುಖ್ಯ ಕಾರ್ಯದರ್ಶಿಯಾಗಿ, ಈಗ ಮಂಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
