ಪ.ಪೂ.ಶಿ.ಇ.ಉಪನಿರ್ಧೇಶಕ ಎಂ.ಜಿ.ಪೋಳ ನಿವೃತ್ತಿ


ಸನ್ಮಾನದೊಂದಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಆತಂಕದಿಂದ ಬಂದು ಆನಂದದಿಂದ ಹೋಗುತ್ತಿದ್ದೇನೆ. ಕಳೆದ ಹನ್ನೆರಡು ವರ್ಷಗಳ ಸೇವೆಯ ಸಾರ್ಥಕದ ಕ್ಷಣ ಇದು ಎಂದುಕೊಳ್ಳುತ್ತೇನೆ. ನೌಕರರೆಲ್ಲರಿಗೂ ಈ ಅವಕಾಶ ಸಿಗುವುದಿಲ್ಲ. ಇದು ನನ್ನ ಭಾಗ್ಯ ಎಂದು ಸೇವಾನಿವೃತ್ತಿ ಹೊಂದಿದ ಪ್ರಾಚಾರ್ಯ ಎಂ.ಜಿ.ಪೋಳ ಹೇಳಿದರು. ಅವರು ನಾಣಿಕಟ್ಟಾ ಕಾಲೇಜಿನ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾಲೇಜು ಅಭಿವೃದ್ಧಿ ಸಮಿತಿ, ಸ್ಥಳೀಯ ಸೇವಾ ಸಹಕಾರಿ ಸಂಘ, ಗಜಾನನ ವಿದ್ಯಾವರ್ಧಕ ಸಂಘ ಹಾಗೂ ಪ್ರೌಢಶಾಲಾ ವಿಭಾಗದ ಸಿಬ್ಬಂದಿಗಳು ಶನಿವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಕೃತÀಜ್ಞತೆ ಸಲ್ಲಿಸಿ ಮಾತನಾಡಿದರು. ದೂರದ ಮುಧೋಳದವನಾದ ನಾನು, ಜೇವರ್ಗಿಯಲ್ಲಿ ಉಪನ್ಯಾಸಕನಾಗಿ ಸೇವೆ ಪ್ರಾರಂಭಿಸಿದರೂ, ಮಲೆನಾಡಿನ ಮಂಚಿಕೇರಿಯಲ್ಲಿ 17 ವರ್ಷ ಉಪನ್ಯಾಸಕನಾಗಿ ಸೇವೆಸಲ್ಲಿಸಿದ್ದೇನೆ. ಪ್ರಾಚಾರ್ಯನಾಗಿ ನಾಣಿಕಟ್ಟಾ ಕಾಲೇಜಿನಲ್ಲಿ 12ವರ್ಷಗಳ ತೃಪ್ತಿಯ ಸೇವೆ ಸಲ್ಲಿಸಿದ್ದೇನೆ.ಈ ಅವಧಿಯಲ್ಲಿ ಉಪನ್ಯಾಸಕರು, ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಸ್ಥಳೀಯರ ಉತ್ತಮ ಸಹಕಾರಸಿಕ್ಕಿದೆ. ಕಳೆದ ಮಾರ್ಚದಿಂದ ಉ.ಕ.ಜಿಲ್ಲೆಯ ಪ.ಪೂ.ಶಿ.ಇಲಾಖೆಯ ಉಪನಿರ್ದೇಶಕನಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿದ್ದು ಮತ್ತಷ್ಟು ಖುಷಿಕೊಟ್ಟಿದೆ. ಪ್ರೀತಿಯ ಸನ್ಮಾನ, ಬೀಳ್ಕೊಡುಗೆಯಿಂದ ಹೃದಯ ತುಂಬಿಬಂದಿದೆ ಎಂದರು.
ಅವರ ಪತ್ನಿ ರೇಣುಕಾ ಜೊತೆಯಲ್ಲಿದ್ದು ಗೌರವ ಸ್ವೀಕರಿಸಿದರು. ಉಪನ್ಯಾಸಕ ಎಂ.ಆಯ್ ಹೆಗಡೆ ಅಭಿನಂದನಾ ನುಡಿಗಳನ್ನಾಡಿದರು. ಸಾಹಿತಿ ಸುಬ್ರಾಯ ಮತ್ತಿಹಳ್ಳಿ ಮಾತನಾಡಿ ಒಬ್ಬ ಅಧಿಕಾರಿ ಆಡಳಿತ ಹಾಗೂ ಸಾಮಾಜಿಕ ಸ್ಪಂದನೆಯಿಂದ ಗುರುತಿಸಿಕೊಳ್ಳುತ್ತಾನೆ. ಎಂ.ಜಿ.ಪೋಳ ಅವರು ನಮ್ಮೊಂದಿಗೆ ಮನೆಯ ಸದಸ್ಯರಂತೆ ಹೊಂದಿಕೊಂಡಿದ್ದರು ಎಂದರು.
ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ಬಿ.ಹೆಗಡೆ ಮತ್ತಿಹಳ್ಳಿ, ತಾ.ಪಂ.ಸ್ಥಾಯಿ ಸಮಿತಿಯ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ಗ್ರಾ.ಪಂ.ಉಪಾಧ್ಯಕ್ಷ ವಸಂತ ಹೆಗಡೆ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಸ್.ಜಿ.ಹೆಗಡೆ ಬೆಳ್ಳೆಕೇರಿ, ಗಜಾನನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪಿ.ವಿ.ಹೆಗಡೆ ಗೋರನಮನೆ, ಸಾಮಾಜಿಕ ಕಾರ್ಯಕರ್ತ ವಿ.ಎಂ.ಹೆಗಡೆ ತ್ಯಾಗಲಿ, ಪ್ರೌಢಶಾಲಾ ಮುಖ್ಯಸ್ಥೆ ಸಾವಿತ್ರಿ ನಾಯಕ್, ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ದತ್ತಾತ್ರೇಯ ಆರ್ ಹೆಗಡೆ ಎಂ.ಜಿ.ಪೋಳರ ಸೇವೆ ಹಾಗೂ ಕ್ರಿಯಾಶೀಲತೆಯನ್ನು ಶ್ಲಾಘಿಸಿ ಶುಭಕೋರಿದರು.
ಅಧ್ಯಕ್ಷತೆವಹಿಸಿದ್ದ ಪ್ರಾಚಾರ್ಯ ಎಂ.ಕೆ.ನಾಯ್ಕ ಮಾತನಾಡಿ ಎಂ.ಜಿ.ಪೋಳರ ದೂರದರ್ಶಿತ್ವ, ಆಡಳಿತ ವೈಖರಿ ಮಾರ್ಗದರ್ಶಕವಾಗಿತ್ತು ಎಂದರು. ವಿದ್ಯಾರ್ಥಿಗಳಾದ ಸೌಮ್ಯ ನಾಯ್ಕ, ರಮಾನಂದ ಗೌಡ, ತನುಶ್ರೀ.ಕೆ. ಉಪನ್ಯಾಸಕರಾದ ಓಂಕಾರಪ್ಪ, ಶ್ರೀನಿವಾಸ ನಾಗರಕಟ್ಟೆ, ಎಂ.ಎಂ.ಭಟ್ಟ, ತನುಜಾ ನಾಯ್ಕ ಅನಿಸಿಕೆ ವ್ಯಕ್ತಪಡಿಸಿದರು.ಎ.ಎಲ್.ನಾಯ್ಕ ಸನ್ಮಾನಪತ್ರ ವಾಚಿಸಿದರು. ನಾಗವೇಣಿ ಎಚ್ ನಾಯ್ಕ ಸ್ವಾಗತಿಸಿದರು. ಕು.ಮಧುರಾ ಮತ್ತು ಸಂಗಡಿಗರು ಪ್ರಾರ್ಥನಾಗೀತೆ ಹಾಡಿದರು. ಆನಂದ.ಡಿ.ಕೆ. ವಂದಿಸಿದರು. ಮಾಲಾ.ಎ. ಮತ್ತು ಶೈಲಾ ಹೆಗಡೆ ಕಾರ್ಯಕ್ರಮವನ್ನು ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *