ರಾಜ್ಯ ವಿಧಾನಸಭಾ ಅಧ್ಯಕ್ಷರ ಉಡಾಫೆ?


ಸರಳ,ಸಜ್ಜನ ಎನ್ನುವ ಆರೋಪವಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಕ್ಷಕರ ದಿನಾಚರಣೆ ಮತ್ತು ಬೇಡ್ಕಣಿ ಸರ್ಕಾರಿ ಪದವಿ ಕಾಲೇಜು ಹೆಚ್ಚುವರಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಡಾಫೆಯ ಮಾತನಾಡಿದರೆ ಎನ್ನುವ ಚರ್ಚೆ ನಡೆಯುತ್ತಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಹಿಂದೆ ಶಾಸಕರಾಗಿದ್ದಾಗ ನಾನು ವಿರೋಧ ಪಕ್ಷದಲ್ಲಿದ್ದೆ, ನಮಗೆ ಆಡಳಿತ, ಅನುಕೂಲ, ಅವಕಾಶಗಳಿರಲಿಲ್ಲ ಎಂದು ತೇಪೆಹಚ್ಚುತ್ತಾ ವಿರೋಧ ಪಕ್ಷಗಳನ್ನು ಗುರಿ ಮಾಡುತಿದ್ದರು.
ಈಗ ಬಿ.ಜೆ.ಪಿ.ಯ ಸರ್ಕಾರ ರಾಜ್ಯ, ರಾಷ್ಟ್ರದಲ್ಲಿದೆ. ಆದರೆ ಕೆಲಸಗಳೂ ಆಗುತ್ತಿಲ್ಲ, ಪರಿಸ್ಥಿತಿ-ವಾತಾವರಣ ಹದಗೆಡುತ್ತಿದೆ. ಇಂಥ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಬೀದಿ-ಬೀದಿಯಲ್ಲಿ ಗಣೇಶೋತ್ಸವ ಆಚರಣೆ ಸಮರ್ಥಿಸಿದ ಕಾಗೇರಿ ಬಾಲಗಂಗಾಧರ ಟಿಲಕ್ ರ ಪ್ರಯತ್ನದಿಂದ ಸಾರ್ವಜನಿಕ ಗಣೇಶೋತ್ಸವಗಳು ನಡೆಯುವಂತಾಯಿತು ಎಂದು ಅದನ್ನು ಬೇರೆ ಅರ್ಥ ಬರುವ ರೀತಿಯಲ್ಲಿ ವ್ಯಾಖ್ಯಾನಿಸಿದರು. (ದೇವರು ಧರ್ಮ, ದೇಶಪ್ರೇಮ ಬಿ.ಜೆ.ಪಿ.ಗೆ ಮತತರುವ ತಂತ್ರ-ಮಂತ್ರಗಳು)
ಸಿದ್ಧಾಪುರ ಬೇಡ್ಕಣಿ ಸರ್ಕಾರಿ ಪದವಿ ಮಹಾವಿದ್ಯಾಲಯವನ್ನು ದೂರದ ಬೇಡ್ಕಣಿ ಪಂಚಾಯತ್ ವ್ಯಾಪ್ತಿಗೆ ದೂಡಿದವರೇ ಶಾಸಕ ಕಾಗೇರಿ,ಅಲ್ಲಿ ಕಳೆದ ಕೆಲವು ವರ್ಷಗಳಿಂದಲೂ ವಿಶೇಶ ಹೊಸ ಆಯ್ಕೆಗಳಿಗೆ ಅವಕಾಶವಿಲ್ಲ, ಬಸ್ ವ್ಯವಸ್ಥೆ,ಬಸ್ ನಿಲ್ಧಾಣ, ರಸ್ತೆ, ಗ್ರಂಥಾಲಯ ಇತ್ಯಾದಿ ತೊಂದರೆಗಳನ್ನು ಕೇಳುವವರಿಲ್ಲ. ಅಲ್ಲಿಯ ವಿದ್ಯಾರ್ಥಿಗಳು ಕಳೆದ 2-3 ವರ್ಷಗಳಿಂದ ಅವರ ತೊಂದರೆ ಪರಿಹಾರಕ್ಕೆ ಬೇಡಿಕೆ ಸಲ್ಲಿಸುತ್ತಾ ಬರುತಿದ್ದಾರೆ. ಆದರೆ ಈ ಕ್ಷೇತ್ರದ ಶಾಸಕ ಕಾಗೇರಿ ಮತ್ತು ಸಂಸದ ಅನಂತಕುಮಾರ ಹೆಗಡೆ ಸ್ಫಂದಿಸಿದ್ದೇ ಇಲ್ಲ. ಚುನಾವಣಾ ಸಮಯದಲ್ಲಿ ದೇವರು, ಜಾತಿ-ಧರ್ಮಗಳ ನೆರವಿನಿಂದ ಆಯ್ಕೆಯಾಗುವ ಈ ಶಾಸಕ, ಸಂಸದರಿಗೆ ಬಹುಸಂಖ್ಯಾತರಿಗಿಂತ ಅಲ್ಫಸಂಖ್ಯಾತ ತಮ್ಮವರು ಆಪ್ತ ಎನ್ನುವುದಕ್ಕೆ ಅವರ ಕ್ಷೇತ್ರಾಭಿವೃದ್ಧಿ ನಿಧಿ ಹಂಚಿಕೆಗಳೇ ಸಾಕ್ಷಿ. ಶಿಕ್ಷಕರ ದಿನಾಚರಣೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಉತ್ತೇಜನ, ಕಾಲೇಜಿನ ಕಾರ್ಯಕ್ರಮದಲ್ಲೂ ಅನ್ಯರನ್ನೇ ದೂಷಿಸಿ, ತಮ್ಮ ಅಸಮರ್ಥತೆಯನ್ನು ಎತ್ತಿತೋರಿಸಿದ್ದು ಸ್ಪೀಕರ್ ಸ್ಥಾನದ ಘನತೆಗೆ ತಕ್ಕುದಲ್ಲದ ನಡವಳಿಕೆ ಎನ್ನುವ ಟೀಕೆ ಕೇಳಿಬಂದಿದೆ.

sdr

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *