ಟಿ.ಎಸ್.ಎಸ್.ವಾರ್ಷಿಕ ಸಭೆ ಹಿರಿಯ ಸದಸ್ಯರಿಗೆ ಸನ್ಮಾನ


ಸಾವಯವ, ಜೈವಿಕ ಕೃಷಿ ಮಾಡದೆ ನಮ್ಮಅಡಿಕೆ ಮರಗಳು ರೋಗಕ್ಕೆತುತ್ತಾಗುತ್ತಿವೆ. ನಾವು ತಾತ್ಕಾಲಿಕ ಹೆಚ್ಚಿಗೆ ಇಳುವರಿ ತೆಗೆಯುವಕಡೆ ಗಮನ ಹರಿಸದೆ, ಮರಗಳ ಆರೋಗ್ಯ, ಬಾಳಿಕೆಯ ಬಗ್ಗೆ ಯೋಚನೆ ಮಾಡಬೇಕುಎಂದು ತೋಟಗಾರ್ಸ್‍ಕೋ-ಆಪರೇಟಿವ್ ಸೇಲ್ಸ್ ಸೋಸೈಟಿಯ ಪ್ರಧಾನ ವ್ಯವಸ್ಥಾಪಕ ರವೀಶ ಎ ಹೆಗಡೆ ಹೇಳಿದರು.
ಅವರು ಸಿದ್ಧಾಪುರ ತೋಟಗಾರ್ಸ್‍ಕೋ-ಆಪರೇಟಿವ್ ಸೇಲ್ಸ್ ಸೋಸೈಟಿಯ ಪ್ರಾಂಗಣದಲ್ಲಿ ನಡೆದ ವಾರ್ಷಿಕ ಸಹಕಾರಿ ಸಭೆಯಲ್ಲಿ ಮಾತನಾಡಿದರು.
ಇಂದು ಕೂಲಿ ಸಮಸ್ಯೆಯಿಂದಲೂ ಇಳುವರಿಯ ಮೇಲೆ ಪ್ರಭಾವಉಂಟಾಗಿದೆ. ಮಳೆ ಪ್ರಾರಂಭದಲ್ಲಿ ಮತ್ತು ಮಳೆಗಾಲದ ನಂತರಗೊಬ್ಬರ ಹಾಕಿದರೆ ಹೆಚ್ಚು ಇಳುವರಿ ಪಡೆಯಬಹುದು. ಸೊಸೈಟಿಯಲ್ಲಿ ಕೃಷಿ ತಜ್ಞರ ಲಭ್ಯತೆಇದೆ.ಸದಸ್ಯರು ಪ್ರಯೋಜನ ಪಡೆದುಕೊಳ್ಳಬೇಕು.ತುತ್ತ ಸುಣ್ಣ ಪ್ರಯೋಗ ಶಾಲೆಗಳಲ್ಲಿ ಪರೀಕ್ಷಿಸಿ ಮಾರಾಟ ಮಾಡುವುದರಿಂದಯಾವುದೆತೊಂದರೆಇಲ್ಲಾ. ಸಂಘದಎಲ್ಲಾ ಸದಸ್ಯರಿಗೆಆರೋಗ್ಯ, ಬೆಳೆ ವಿಮೆಯನ್ನುಕಡ್ಡಾಯ ಮಾಡಲಾಗಿದೆ.
ಶಿರಸಿ, ಸಿದ್ದಾಪುರ, ಯಲ್ಲಾಪುರದಅಡಿಕೆಯನ್ನು ಸ್ಪೇಷಲ್ ಬ್ರಾಂಡ್ ಆಗಿ ಮಾಡಲು ಪ್ರಯತ್ನಗಳು ನಡೆದಿದೆ. ಕೃಷಿ ಪ್ರಯೋಗ ಶಾಲೆ (ಲ್ಯಾಬೊರೇಟರಿ)ಯನ್ನು ಪ್ರಾರಂಭಿಸಲಾಗಿದೆ. ಸದಸ್ಯರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕುಎಂದಅವರು ಈ ವರ್ಷಅತೀವೃಷ್ಠಿಯಿಂದ ಹೆಚ್ಚಿನ ಬೆಳೆ ಹಾನಿಯಾಗಿ ಇಳುವರಿ ಕಡಿಮೆಇರುವುದರಿಂದದೊಡ್ಡದೊಡ್ಡ ವೆಚ್ಚದ ಕಾರ್ಯಕ್ರಮಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು ಎಂಬ ಕಿವಿಮಾತು ಹೇಳಿದರು.
ಸಂಸ್ಥೆಯಅಧ್ಯಕ್ಷ ಶಾಂತರಾಮ ಹೆಗಡೆ ಶೀಗೇಹಳ್ಳಿ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ಅನೇಕ ವರ್ಷಗಳ ಕಾಲ ಪ್ರಾಮಾಣಿಕವಾಗಿ ವ್ಯವಹಾರ ಮಾಡಿದ ಹಿರಿಯ ಸದಸ್ಯರಾದ ಭೈರಚೌಡ ನಾಯ್ಕ ಬೇಡ್ಕಣಿ, ದಿವಾಕರ ಹೆಗಡೆ ಹೂವಿನಮನೆ, ಗಣಪತಿ ಹೆಗಡೆ ಗೋಳಿಕೈ, ಪರಮೇಶ್ವರ ಹೆಗಡೆ ಮಟ್ಟೇರಮನೆ, ಪ್ರಭಾಕರ ಹೆಗಡೆಕಲ್ಲಾರೆಮನೆ, ಸೀತಾರಾಮ ಭಟ್‍ಅಡವಿತೋಟ, ಗಣೇಶ ಭಟ್ ಹುತ್ಗಾರ, ಪರಮೇಶ್ವರ ಹೆಗಡೆ ಸಣ್ಮನೆ, ಪಾರ್ವತಿ ಹೆಗಡೆಚನ್ನಖಂಡ, ಕೆರೆಸ್ವಾಮಿಗೌಡ ಶಿರಳಗಿ, ಗಣೇಶ ಹೆಗಡೆ ಇಳಿಮನೆ, ಶ್ಯಾಮಯ್ಯ ಹೆಗಡೆತಾರಗೋಡ ರನ್ನು ಸನ್ಮಾನಿಸಲಾಯಿತು.
ಸನ್ಮಾನಿತರ ಪರವಾಗಿಪರಮೇಶ್ವರ ಹೆಗಡೆ ಮಟ್ಟೇರಮನೆ ಸಂಸ್ಥೆಯಒಡನಾಟದಕುರಿತುತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ತೇಜಸ್ವಿ ಹೆಗಡೆ ಮತ್ತುಅಕ್ಷತಾ ಹೆಗಡೆ ಪ್ರಾರ್ಥಿಸಿದರು. ಆರ್.ಟಿ.ಹೆಗಡೆ ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕರಾಜೀವ್ ಹೆಗಡೆ ವರದಿ ವಾಚಿಸಿದರು. ಶ್ರೀಕಾಂತ ಹೆಗಡೆ ನಿರೂಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *