ಟಿ.ಎಸ್.ಎಸ್.ವಾರ್ಷಿಕ ಸಭೆ ಹಿರಿಯ ಸದಸ್ಯರಿಗೆ ಸನ್ಮಾನ


ಸಾವಯವ, ಜೈವಿಕ ಕೃಷಿ ಮಾಡದೆ ನಮ್ಮಅಡಿಕೆ ಮರಗಳು ರೋಗಕ್ಕೆತುತ್ತಾಗುತ್ತಿವೆ. ನಾವು ತಾತ್ಕಾಲಿಕ ಹೆಚ್ಚಿಗೆ ಇಳುವರಿ ತೆಗೆಯುವಕಡೆ ಗಮನ ಹರಿಸದೆ, ಮರಗಳ ಆರೋಗ್ಯ, ಬಾಳಿಕೆಯ ಬಗ್ಗೆ ಯೋಚನೆ ಮಾಡಬೇಕುಎಂದು ತೋಟಗಾರ್ಸ್‍ಕೋ-ಆಪರೇಟಿವ್ ಸೇಲ್ಸ್ ಸೋಸೈಟಿಯ ಪ್ರಧಾನ ವ್ಯವಸ್ಥಾಪಕ ರವೀಶ ಎ ಹೆಗಡೆ ಹೇಳಿದರು.
ಅವರು ಸಿದ್ಧಾಪುರ ತೋಟಗಾರ್ಸ್‍ಕೋ-ಆಪರೇಟಿವ್ ಸೇಲ್ಸ್ ಸೋಸೈಟಿಯ ಪ್ರಾಂಗಣದಲ್ಲಿ ನಡೆದ ವಾರ್ಷಿಕ ಸಹಕಾರಿ ಸಭೆಯಲ್ಲಿ ಮಾತನಾಡಿದರು.
ಇಂದು ಕೂಲಿ ಸಮಸ್ಯೆಯಿಂದಲೂ ಇಳುವರಿಯ ಮೇಲೆ ಪ್ರಭಾವಉಂಟಾಗಿದೆ. ಮಳೆ ಪ್ರಾರಂಭದಲ್ಲಿ ಮತ್ತು ಮಳೆಗಾಲದ ನಂತರಗೊಬ್ಬರ ಹಾಕಿದರೆ ಹೆಚ್ಚು ಇಳುವರಿ ಪಡೆಯಬಹುದು. ಸೊಸೈಟಿಯಲ್ಲಿ ಕೃಷಿ ತಜ್ಞರ ಲಭ್ಯತೆಇದೆ.ಸದಸ್ಯರು ಪ್ರಯೋಜನ ಪಡೆದುಕೊಳ್ಳಬೇಕು.ತುತ್ತ ಸುಣ್ಣ ಪ್ರಯೋಗ ಶಾಲೆಗಳಲ್ಲಿ ಪರೀಕ್ಷಿಸಿ ಮಾರಾಟ ಮಾಡುವುದರಿಂದಯಾವುದೆತೊಂದರೆಇಲ್ಲಾ. ಸಂಘದಎಲ್ಲಾ ಸದಸ್ಯರಿಗೆಆರೋಗ್ಯ, ಬೆಳೆ ವಿಮೆಯನ್ನುಕಡ್ಡಾಯ ಮಾಡಲಾಗಿದೆ.
ಶಿರಸಿ, ಸಿದ್ದಾಪುರ, ಯಲ್ಲಾಪುರದಅಡಿಕೆಯನ್ನು ಸ್ಪೇಷಲ್ ಬ್ರಾಂಡ್ ಆಗಿ ಮಾಡಲು ಪ್ರಯತ್ನಗಳು ನಡೆದಿದೆ. ಕೃಷಿ ಪ್ರಯೋಗ ಶಾಲೆ (ಲ್ಯಾಬೊರೇಟರಿ)ಯನ್ನು ಪ್ರಾರಂಭಿಸಲಾಗಿದೆ. ಸದಸ್ಯರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕುಎಂದಅವರು ಈ ವರ್ಷಅತೀವೃಷ್ಠಿಯಿಂದ ಹೆಚ್ಚಿನ ಬೆಳೆ ಹಾನಿಯಾಗಿ ಇಳುವರಿ ಕಡಿಮೆಇರುವುದರಿಂದದೊಡ್ಡದೊಡ್ಡ ವೆಚ್ಚದ ಕಾರ್ಯಕ್ರಮಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು ಎಂಬ ಕಿವಿಮಾತು ಹೇಳಿದರು.
ಸಂಸ್ಥೆಯಅಧ್ಯಕ್ಷ ಶಾಂತರಾಮ ಹೆಗಡೆ ಶೀಗೇಹಳ್ಳಿ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ಅನೇಕ ವರ್ಷಗಳ ಕಾಲ ಪ್ರಾಮಾಣಿಕವಾಗಿ ವ್ಯವಹಾರ ಮಾಡಿದ ಹಿರಿಯ ಸದಸ್ಯರಾದ ಭೈರಚೌಡ ನಾಯ್ಕ ಬೇಡ್ಕಣಿ, ದಿವಾಕರ ಹೆಗಡೆ ಹೂವಿನಮನೆ, ಗಣಪತಿ ಹೆಗಡೆ ಗೋಳಿಕೈ, ಪರಮೇಶ್ವರ ಹೆಗಡೆ ಮಟ್ಟೇರಮನೆ, ಪ್ರಭಾಕರ ಹೆಗಡೆಕಲ್ಲಾರೆಮನೆ, ಸೀತಾರಾಮ ಭಟ್‍ಅಡವಿತೋಟ, ಗಣೇಶ ಭಟ್ ಹುತ್ಗಾರ, ಪರಮೇಶ್ವರ ಹೆಗಡೆ ಸಣ್ಮನೆ, ಪಾರ್ವತಿ ಹೆಗಡೆಚನ್ನಖಂಡ, ಕೆರೆಸ್ವಾಮಿಗೌಡ ಶಿರಳಗಿ, ಗಣೇಶ ಹೆಗಡೆ ಇಳಿಮನೆ, ಶ್ಯಾಮಯ್ಯ ಹೆಗಡೆತಾರಗೋಡ ರನ್ನು ಸನ್ಮಾನಿಸಲಾಯಿತು.
ಸನ್ಮಾನಿತರ ಪರವಾಗಿಪರಮೇಶ್ವರ ಹೆಗಡೆ ಮಟ್ಟೇರಮನೆ ಸಂಸ್ಥೆಯಒಡನಾಟದಕುರಿತುತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ತೇಜಸ್ವಿ ಹೆಗಡೆ ಮತ್ತುಅಕ್ಷತಾ ಹೆಗಡೆ ಪ್ರಾರ್ಥಿಸಿದರು. ಆರ್.ಟಿ.ಹೆಗಡೆ ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕರಾಜೀವ್ ಹೆಗಡೆ ವರದಿ ವಾಚಿಸಿದರು. ಶ್ರೀಕಾಂತ ಹೆಗಡೆ ನಿರೂಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *