ಬೆಂಗಳೂರಿನಲ್ಲಿ ಗಯನಿಗಾಗಿ ಕೃಷ್ಣಾರ್ಜುನರ ಕಾಳಗ

;
ಗಮನ ಸೆಳೆದ ಆಟ
ಸಿದ್ದಾಪುರದ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನದ ಕಲಾವಿದರು ರಾಜಧಾನಿಯಲ್ಲಿ ಸಂಸ್ಥೆಯ ದಶಮಾನೋತ್ಸವದ ಸಂಭ್ರಮದ ಪ್ರಥಮ ಯಕ್ಷಗಾನ ಪ್ರದರ್ಶನ ನೀಡಿದರು.
ಸಮಾಜಮುಖಿ ಬಳಗ ಹಾಗೂ ಬೆಂಗಳೂರು ಅಂತರಾಷ್ಟ್ರೀಯ ಕೇಂದ್ರದಿಂದ ಶ್ರೀಕೃಷ್ಣಾರ್ಜುನ ಯಕ್ಷಗಾನ ಆಖ್ಯಾನ ಆಯೋಜಿತ್ತು.
ಗಯನಿಗಾಗಿ ಕೃಷ್ಣ ಹಾಗೂ ಅರ್ಜುನರ ಯುದ್ಧ ನಡೆದದ್ದು, ಭಾವಂದಿರ ನಡುವೆ ನಡೆದ ಸಂಘರ್ಷದಲ್ಲಿ ಸುಭದ್ರೆಯ ನೋವು, ಸಂಕಟ, ಅಭಿಮನ್ಯುವಿನ ಕ್ಷಾತ್ರ ಉಮೇದಿ, ದಾರುಕನ ಹಾಸ್ಯ, ಭೀಮನ ಗಂಭೀರತೆಗಳ ನಡುವೆ ಕೃಷ್ಣಾರ್ಜುನ ಪ್ರಸಂಗ ಕಳೆ ಕಟ್ಟಿತು.
ಹಿಮ್ಮೇಳದಲ್ಲಿ ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ, ಮದ್ದಲೆಯಲ್ಲಿ ಎ.ಪಿ.ಪಾಠಕ, ಚಂಡೆಯಲ್ಲಿ ಆದಿತ್ಯ ಕೇಶೈನ್, ಮುಮ್ಮೇಳದಲ್ಲಿ ಅರ್ಜುನನಾಗಿ ವಿನಾಯಕ ಹೆಗಡೆ ಕಲಗದ್ದೆ, ಕೃಷ್ಣನಾಗಿ ಅಶೋಕ ಭಟ್ಟ ಸಿದ್ದಾಪುರ, ಸುಭದ್ರೆಯಾಗಿ ನಾಗಶ್ರೀ ಜಿ.ಎಸ್., ದಾರುಕನಾಗಿ ನಾಗೇಂದ್ರ ಭಟ್ಟ ಮೂರೂರು, ಭೀಮನಾಗಿ ವೆಂಕಟೇಶ ಬೊಗ್ರಿಮಕ್ಕಿ, ಅಭಿಮನ್ಯುವಾಗಿ ತುಳಸಿ ಹೆಗಡೆ ಪಾತ್ರ ಮಾಡಿದರು.
ಶಂಕರ ಹೊಸೂರು ಪ್ರಸಾದನಕ್ಕೆ ಸಹಕರಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಪ್ರಜಾವಾಣಿ ಬಳಗದ ನಿರ್ದೇಶಕ ಕೆ.ಎನ್.ಶಾಂತಕುಮಾರ, ಕರ್ನಾಟಕದ ಜನಪದ ಲೋಕವನ್ನು ಸಮಾಜಮುಖಿ ಬಳಗ ಹಾಗೂ ಈ ಕೇಂದ್ರದ ಮೂಲಕ ಜನರಿಗ ತೋರಿಸಬೇಕು ಎಂಬುದು ನಮ್ಮ ಆಶಯವಾಗಿದೆ. ಈ ಕಾರಣಕ್ಕೋಸ್ಕರ ಗ್ರಾಮೀಣ ಭಾಗದಿಂದ ಕಲಾ ತಂಡಗಳನ್ನು ಆಹ್ವಾನಿಸಿ ಪ್ರದರ್ಶನ ನೀಡಲಾಗುತ್ತದೆ ಎಂದು ವಿವರಿಸಿದರು.
ಈ ವೇಳೆ ಲೇಖಕ ಜಯರಾಮ್ ರಾಯಪೂರ ಸಮಾಜಮುಖಿ ಬಳಗದಿಂದ ಕಲಾವಿದರನ್ನು, ಭಾಗವತ ಕೇಶವ ಹೆಗಡೆ ಕೊಳಗಿ ಅವರನ್ನು ಗೌರವಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ರವೀಂದ್ರ ಭಟ್ಟ ಐನಕೈ, ಚಂದ್ರಕಾಂತ ವಡ್ಡು, ರಂಗಕರ್ಮಿ ಶಶಿಧರ ಭಾರಿಘಾಟ, ಡಾ.ಟಿ.ಆರ್.ಚಂದ್ರಶೇಖರ, ಆನಂದರಾಜ್ ಅರಸ್, ಪೃಥ್ವಿದತ್ತ ಚಂದ್ರಶೋಭಿ, ಚಂದ್ರಶೇಖರ ಬೆಳಗೆರೆ, ಡಾ. ಕೆ.ಎಂ. ಬೋಜಪ್ಪ, ಲೇಖಕಿ ಭುವನೇಶ್ವರಿ ಹೆಗಡೆ ಇತರರು ಇದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *