
ಹಿಂದಿ ವಿವಾದ ಸ್ವಾರ್ಥಿಗಳ ಯತ್ನ
-ವಿಧಾನಸಭಾಧ್ಯಕ್ಷರು
ಕಾಂಗ್ರೆಸ್ ವಿರುದ್ಧವೋ?
ಕನ್ನಡ ಸಂಘಟನೆಗಳ ವಿರುದ್ಧವೋ
ಹಿಂದಿ ದಿವಸ ಆಚರಣೆ ಮತ್ತು ಹಿಂದಿ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಭಾಷಣದುದ್ದಕ್ಕೂ ಹಿಂದಿ, ಹಿಂದಿ ವಿಚಾರದ ವಿವಾದದ ಬಗ್ಗೆ ಮಾತನಾಡುತ್ತಾ ಬಿ.ಜೆ.ಪಿ. ನಿಲುವನ್ನು ಸಮರ್ಥಿಸಿದರು.
ನಂಬಿಕೆ, ಭಾಷೆ, ಗಡಿ, ನೀರು ಆಹಾರದ ಹಿನ್ನೆಲೆಯಲ್ಲಿ ಸ್ವಾರ್ಥಕ್ಕಾಗಿ ವಿವಾದ ಎಬ್ಬಿಸುತ್ತಾರೆ ಎಂದು ದೂರಿದರು. ವಿಧಾನಸಭಾಧ್ಯಕ್ಷರು ಪಕ್ಷಾತೀತ ನಿಲುವು ತಾಳದೆ ಲೋಪ ಎಸಗುವ ಜೊತೆಗೆ ಹಿಂದಿ ಭಾಷೆಯ ವಿವಾದಕ್ಕೆ ನೆಲ, ಜಲ, ಗಡಿ, ಆಹಾರ,ಭಾಷೆ ಬಳಸಿಕೊಳ್ಳುವ ಕೆಲವು ಸ್ವಾರ್ಥಿಗಳು ಕಾರಣ ಎಂದು ಕಾಂಗ್ರೆಸ್ ಅಥವಾ ರಾಜ್ಯದ ಕನ್ನಡ ಸಂಘಟನೆಗಳನ್ನು ಹೆಸರು ಹೇಳದೆ ತಿವಿದರು.
ವಿಧಾನಸಭೆಯ ಅಧ್ಯಕ್ಷರಾಗಿ ಕಾಂಗ್ರೆಸ್ ಅಥವಾ ಕನ್ನಡ ಸಂಘಟನೆಗಳ ಅಭಿಮಾನ, ಕನ್ನಡಪರ ಹೋರಾಟವನ್ನು ಸ್ವಾರ್ಥಿಗಳ ಪ್ರಯತ್ನ ಎಂದ ಹೇಳಿಕೆಯನ್ನು ಕೆಲವು ಮಾಧ್ಯಮ ಪ್ರತಿನಿಧಿಗಳು ದಾಖಲೆಮಾಡಿಕೊಂಡಿದ್ದು ಇದು ವಿವಾದವಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
ಸಿದ್ಧಾಪುರ,ಸೆ.17- ಪ್ರಾದೇಶಿಕ ಭಾಷೆಗಳಿಗೆತೊಂದರೆಯಾಗುತ್ತಿರುವುದು ಇಂಗ್ಲೀಷ್ನಿಂದಲೇ ಹೊರತು ಹಿಂದಿಯಿಂದಲ್ಲ ಎಂದು ಬಿ.ಜೆ.ಪಿ. ಅಭಿಪ್ರಾಯವನ್ನು ಪುನರುಚ್ಚರಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿವಿಧತೆಯಲ್ಲಿ ಏಕತೆ ಕಾಣುವ ಸಂವಿಧಾನದ ಆಶಯದಂತೆ ರಾಷ್ಟ್ರದಲ್ಲಿ ಆಡಳಿತ ಭಾಷೆಯಾಗಿ ಹಿಂದಿ, ರಾಜ್ಯದಲ್ಲಿ ಕನ್ನಡ ಅಸ್ಥಿತ್ವದಲ್ಲಿವೆ ಇವುಗಳಿಗಿಂತ ಪ್ರತಿಯೊಬ್ಬರಿಗೂ ಇರುವ ಮಾತ್ರ ಭಾಷೆಯ ಸ್ಥಾನ ದೊಡ್ಡದು ಎಂದು ಪ್ರತಿಪಾದಿಸಿದ್ದಾರೆ.
ಸಿದ್ಧಾಪುರದ ಶಂಕರಮಠ ಸಭಾಭವನದಲ್ಲಿ ನಡೆದ ಹಿಂದಿ ದಿನ ಆಚರಣೆ ಮತ್ತು ಹಿಂದಿ ಭಾಷಾ ಶಿಕ್ಷಕರ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಮಾತೃಭಾಷೆಗೆ ಮೊದಲ ಆದ್ಯತೆ ನಂತರ ರಾಷ್ಟ್ರದ ಆಡಳಿತ ಭಾಷೆಗೂ ಗೌರವ ನೀಡಬೇಕು ಎಂದರು.
ವಿವಾದ ಯಾವುದೇ ವಿಷಯಕ್ಕೂ ಮಾಡಬಹುದು. ಇಂಗ್ಲೀಷ ವ್ಯಾಮೋಹ ಬೆಳೆಸಿಕೊಂಡವರು ಹಿಂದಿ ವಿಷಯದಲ್ಲಿ ವಿವಾದ ಮಾಡುವುದೇಕೆ? ಎಂದು ಪ್ರಶ್ನಿಸಿದ ಕಾಗೇರಿ ಗಡಿ,ನೀರು, ಭಾಷೆ, ಆಹಾರ, ನಂಬಿಕೆ ಗಳ ಹಿನ್ನೆಲೆಯಲ್ಲಿ ಸ್ವಾರ್ಥ ಸಾಧಿಸಿಕೊಳ್ಳುವವರು ವಿವಾದ ಮಾಡುತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಹಿಂದಿ ಭಾಷೆಯ ಬೆಳವಣಿಗೆಗೆ ಸೇವೆ ಸಲ್ಲಿಸಿದ ಕೆಲವು ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು.




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________

ನಿವ್ ಬಿಡಿ ಸಾರ್ ನೆಲ ಜಲ ಗಡಿ ಆಹಾರ ಬಳಸಿಕೊಳ್ಳುವ ಸ್ವಾರ್ಥಿ ಅಲ್ಲಾ, ನೀವು ಸ್ವಲ್ಪ ಸ್ವಾರ್ಥಿ ಆಗಿದ್ದರೆ ಇವತ್ತು ನಮ್ಮ ಕ್ಷೇತ್ರ ಇಷ್ಟು ಹಿಂದುಳಿತಿರ್ಲಿಲ್ಲ ಸದನದಲ್ಲಿ ಕೂಗಾಡಿ ಹೆಚ್ಚಿನ ಅನುದಾನ ತರಬಹುದಿತ್ತು ನೀವು ಜಲ ಪ್ರಳಯ ಆದಾಗಲೇ ಕ್ಷೇತ್ರ ಕಡೆ ತಲೆ ಹಾಕಿಲ್ಲ. ಬರೋಕೆ ಐದರಿಂದ ಆರು ದಿನ ಲೇಟಾಯ್ತು, ಕರ್ನಾಟಕ ಭಾರತ ಎಲ್ಲಾ ಒಂದೆ ಏಕತೆ ಇರಬೇಕು ಅನ್ನುವ ನೀವು ದಲಿತರು ಬ್ರಾಹ್ಮಣರು ಒಂದೇ ಅಂತ ಯಾಕೆ ಹೇಳಲ್ಲ. ಅಲ್ಲಾ ಸರ್ ಹಿಂದಿ ಕಲಿ ಬೇಡಿ ಹಿಂದಿ ಸಿನಿಮಾ ನೋಡಬೇಡಿ ಹಿಂದಿ ಮಾತಾಡಬೇಡಿ ಅಂತ ಹೇಳಿದಿವಾ ನಮ್ಮ ಮೇಲೆ ನೀವು ಒತ್ತಾಯವಾಗಿ ಯಾಕೆ ಹಿಂದಿ ಹೇರಿಕೆಯನ್ನು ಮಾಡುತ್ತಿದ್ದೀರಾ ಅನ್ನುವುದಕ್ಕೆ ನಮ್ಮ ಹೋರಾಟ