breaking news- ಹಿಂದಿ ಸಾಧಕರಿಗೆ ಸನ್ಮಾನ,ಕನ್ನಡಿಗರಿಗೆ ಅವಮಾನ visit- samajamukhi.net

breaking news-
visit- samajamukhi.net
ಹಿಂದಿ ಸಾಧಕರಿಗೆ ಸನ್ಮಾನ,ಕನ್ನಡಿಗರಿಗೆ ಅವಮಾನ
ಹಿಂದಿ ವಿವಾದ ಸ್ವಾರ್ಥಿಗಳ ಯತ್ನ
-ವಿಧಾನಸಭಾಧ್ಯಕ್ಷರು
ಕಾಗೇರಿ ಕಾಂಗ್ರೆಸ್ ವಿರುದ್ಧವೋ?
ಕನ್ನಡ ಸಂಘಟನೆಗಳ ವಿರುದ್ಧವೋ

ಹಿಂದಿ ವಿವಾದ ಸ್ವಾರ್ಥಿಗಳ ಯತ್ನ
-ವಿಧಾನಸಭಾಧ್ಯಕ್ಷರು
ಕಾಂಗ್ರೆಸ್ ವಿರುದ್ಧವೋ?
ಕನ್ನಡ ಸಂಘಟನೆಗಳ ವಿರುದ್ಧವೋ
ಹಿಂದಿ ದಿವಸ ಆಚರಣೆ ಮತ್ತು ಹಿಂದಿ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಭಾಷಣದುದ್ದಕ್ಕೂ ಹಿಂದಿ, ಹಿಂದಿ ವಿಚಾರದ ವಿವಾದದ ಬಗ್ಗೆ ಮಾತನಾಡುತ್ತಾ ಬಿ.ಜೆ.ಪಿ. ನಿಲುವನ್ನು ಸಮರ್ಥಿಸಿದರು. visit-samajamukhi.net
ನಂಬಿಕೆ, ಭಾಷೆ, ಗಡಿ, ನೀರು ಆಹಾರದ ಹಿನ್ನೆಲೆಯಲ್ಲಿ ಸ್ವಾರ್ಥಕ್ಕಾಗಿ ವಿವಾದ ಎಬ್ಬಿಸುತ್ತಾರೆ ಎಂದು ದೂರಿದರು. ವಿಧಾನಸಭಾಧ್ಯಕ್ಷರು ಪಕ್ಷಾತೀತ ನಿಲುವು ತಾಳದೆ ಲೋಪ ಎಸಗುವ ಜೊತೆಗೆ ಹಿಂದಿ ಭಾಷೆಯ ವಿವಾದಕ್ಕೆ ನೆಲ, ಜಲ, ಗಡಿ, ಆಹಾರ,ಭಾಷೆ ಬಳಸಿಕೊಳ್ಳುವ ಕೆಲವು ಸ್ವಾರ್ಥಿಗಳು ಕಾರಣ ಎಂದು ಕಾಂಗ್ರೆಸ್ ಅಥವಾ ರಾಜ್ಯದ ಕನ್ನಡ ಸಂಘಟನೆಗಳನ್ನು ಹೆಸರು ಹೇಳದೆ ತಿವಿದರು.
ವಿಧಾನಸಭೆಯ ಅಧ್ಯಕ್ಷರಾಗಿ ಕಾಂಗ್ರೆಸ್ ಅಥವಾ ಕನ್ನಡ ಸಂಘಟನೆಗಳ ಅಭಿಮಾನ, ಕನ್ನಡಪರ ಹೋರಾಟವನ್ನು ಸ್ವಾರ್ಥಿಗಳ ಪ್ರಯತ್ನ ಎಂದ ಹೇಳಿಕೆಯನ್ನು ಕೆಲವು ಮಾಧ್ಯಮ ಪ್ರತಿನಿಧಿಗಳು ದಾಖಲೆಮಾಡಿಕೊಂಡಿದ್ದು ಇದು ವಿವಾದವಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
ಸಿದ್ಧಾಪುರ,ಸೆ.17- ಪ್ರಾದೇಶಿಕ ಭಾಷೆಗಳಿಗೆತೊಂದರೆಯಾಗುತ್ತಿರುವುದು ಇಂಗ್ಲೀಷ್‍ನಿಂದಲೇ ಹೊರತು ಹಿಂದಿಯಿಂದಲ್ಲ ಎಂದು ಬಿ.ಜೆ.ಪಿ. ಅಭಿಪ್ರಾಯವನ್ನು ಪುನರುಚ್ಚರಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿವಿಧತೆಯಲ್ಲಿ ಏಕತೆ ಕಾಣುವ ಸಂವಿಧಾನದ ಆಶಯದಂತೆ ರಾಷ್ಟ್ರದಲ್ಲಿ ಆಡಳಿತ ಭಾಷೆಯಾಗಿ ಹಿಂದಿ, ರಾಜ್ಯದಲ್ಲಿ ಕನ್ನಡ ಅಸ್ಥಿತ್ವದಲ್ಲಿವೆ ಇವುಗಳಿಗಿಂತ ಪ್ರತಿಯೊಬ್ಬರಿಗೂ ಇರುವ ಮಾತ್ರ ಭಾಷೆಯ ಸ್ಥಾನ ದೊಡ್ಡದು ಎಂದು ಪ್ರತಿಪಾದಿಸಿದ್ದಾರೆ.
ಸಿದ್ಧಾಪುರದ ಶಂಕರಮಠ ಸಭಾಭವನದಲ್ಲಿ ನಡೆದ ಹಿಂದಿ ದಿನ ಆಚರಣೆ ಮತ್ತು ಹಿಂದಿ ಭಾಷಾ ಶಿಕ್ಷಕರ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಮಾತೃಭಾಷೆಗೆ ಮೊದಲ ಆದ್ಯತೆ ನಂತರ ರಾಷ್ಟ್ರದ ಆಡಳಿತ ಭಾಷೆಗೂ ಗೌರವ ನೀಡಬೇಕು ಎಂದರು.
ವಿವಾದ ಯಾವುದೇ ವಿಷಯಕ್ಕೂ ಮಾಡಬಹುದು. ಇಂಗ್ಲೀಷ ವ್ಯಾಮೋಹ ಬೆಳೆಸಿಕೊಂಡವರು ಹಿಂದಿ ವಿಷಯದಲ್ಲಿ ವಿವಾದ ಮಾಡುವುದೇಕೆ? ಎಂದು ಪ್ರಶ್ನಿಸಿದ ಕಾಗೇರಿ ಗಡಿ,ನೀರು, ಭಾಷೆ, ಆಹಾರ, ನಂಬಿಕೆ ಗಳ ಹಿನ್ನೆಲೆಯಲ್ಲಿ ಸ್ವಾರ್ಥ ಸಾಧಿಸಿಕೊಳ್ಳುವವರು ವಿವಾದ ಮಾಡುತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಹಿಂದಿ ಭಾಷೆಯ ಬೆಳವಣಿಗೆಗೆ ಸೇವೆ ಸಲ್ಲಿಸಿದ ಕೆಲವು ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *