ಬೆಂಗಳೂರಿನಲ್ಲಿ ಗಯನಿಗಾಗಿ ಕೃಷ್ಣಾರ್ಜುನರ ಕಾಳಗ

;
ಗಮನ ಸೆಳೆದ ಆಟ
ಸಿದ್ದಾಪುರದ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನದ ಕಲಾವಿದರು ರಾಜಧಾನಿಯಲ್ಲಿ ಸಂಸ್ಥೆಯ ದಶಮಾನೋತ್ಸವದ ಸಂಭ್ರಮದ ಪ್ರಥಮ ಯಕ್ಷಗಾನ ಪ್ರದರ್ಶನ ನೀಡಿದರು.
ಸಮಾಜಮುಖಿ ಬಳಗ ಹಾಗೂ ಬೆಂಗಳೂರು ಅಂತರಾಷ್ಟ್ರೀಯ ಕೇಂದ್ರದಿಂದ ಶ್ರೀಕೃಷ್ಣಾರ್ಜುನ ಯಕ್ಷಗಾನ ಆಖ್ಯಾನ ಆಯೋಜಿತ್ತು.
ಗಯನಿಗಾಗಿ ಕೃಷ್ಣ ಹಾಗೂ ಅರ್ಜುನರ ಯುದ್ಧ ನಡೆದದ್ದು, ಭಾವಂದಿರ ನಡುವೆ ನಡೆದ ಸಂಘರ್ಷದಲ್ಲಿ ಸುಭದ್ರೆಯ ನೋವು, ಸಂಕಟ, ಅಭಿಮನ್ಯುವಿನ ಕ್ಷಾತ್ರ ಉಮೇದಿ, ದಾರುಕನ ಹಾಸ್ಯ, ಭೀಮನ ಗಂಭೀರತೆಗಳ ನಡುವೆ ಕೃಷ್ಣಾರ್ಜುನ ಪ್ರಸಂಗ ಕಳೆ ಕಟ್ಟಿತು.
ಹಿಮ್ಮೇಳದಲ್ಲಿ ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ, ಮದ್ದಲೆಯಲ್ಲಿ ಎ.ಪಿ.ಪಾಠಕ, ಚಂಡೆಯಲ್ಲಿ ಆದಿತ್ಯ ಕೇಶೈನ್, ಮುಮ್ಮೇಳದಲ್ಲಿ ಅರ್ಜುನನಾಗಿ ವಿನಾಯಕ ಹೆಗಡೆ ಕಲಗದ್ದೆ, ಕೃಷ್ಣನಾಗಿ ಅಶೋಕ ಭಟ್ಟ ಸಿದ್ದಾಪುರ, ಸುಭದ್ರೆಯಾಗಿ ನಾಗಶ್ರೀ ಜಿ.ಎಸ್., ದಾರುಕನಾಗಿ ನಾಗೇಂದ್ರ ಭಟ್ಟ ಮೂರೂರು, ಭೀಮನಾಗಿ ವೆಂಕಟೇಶ ಬೊಗ್ರಿಮಕ್ಕಿ, ಅಭಿಮನ್ಯುವಾಗಿ ತುಳಸಿ ಹೆಗಡೆ ಪಾತ್ರ ಮಾಡಿದರು.
ಶಂಕರ ಹೊಸೂರು ಪ್ರಸಾದನಕ್ಕೆ ಸಹಕರಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಪ್ರಜಾವಾಣಿ ಬಳಗದ ನಿರ್ದೇಶಕ ಕೆ.ಎನ್.ಶಾಂತಕುಮಾರ, ಕರ್ನಾಟಕದ ಜನಪದ ಲೋಕವನ್ನು ಸಮಾಜಮುಖಿ ಬಳಗ ಹಾಗೂ ಈ ಕೇಂದ್ರದ ಮೂಲಕ ಜನರಿಗ ತೋರಿಸಬೇಕು ಎಂಬುದು ನಮ್ಮ ಆಶಯವಾಗಿದೆ. ಈ ಕಾರಣಕ್ಕೋಸ್ಕರ ಗ್ರಾಮೀಣ ಭಾಗದಿಂದ ಕಲಾ ತಂಡಗಳನ್ನು ಆಹ್ವಾನಿಸಿ ಪ್ರದರ್ಶನ ನೀಡಲಾಗುತ್ತದೆ ಎಂದು ವಿವರಿಸಿದರು.
ಈ ವೇಳೆ ಲೇಖಕ ಜಯರಾಮ್ ರಾಯಪೂರ ಸಮಾಜಮುಖಿ ಬಳಗದಿಂದ ಕಲಾವಿದರನ್ನು, ಭಾಗವತ ಕೇಶವ ಹೆಗಡೆ ಕೊಳಗಿ ಅವರನ್ನು ಗೌರವಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ರವೀಂದ್ರ ಭಟ್ಟ ಐನಕೈ, ಚಂದ್ರಕಾಂತ ವಡ್ಡು, ರಂಗಕರ್ಮಿ ಶಶಿಧರ ಭಾರಿಘಾಟ, ಡಾ.ಟಿ.ಆರ್.ಚಂದ್ರಶೇಖರ, ಆನಂದರಾಜ್ ಅರಸ್, ಪೃಥ್ವಿದತ್ತ ಚಂದ್ರಶೋಭಿ, ಚಂದ್ರಶೇಖರ ಬೆಳಗೆರೆ, ಡಾ. ಕೆ.ಎಂ. ಬೋಜಪ್ಪ, ಲೇಖಕಿ ಭುವನೇಶ್ವರಿ ಹೆಗಡೆ ಇತರರು ಇದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *