ಬೂತ್‍ಮಟ್ಟದ ಅಧಿಕಾರಿಯಾಗಲು ಶಿಕ್ಷಕರ ನಿರಾಕರಣೆ

samajamukhi- exclusive
ಬೂತ್‍ಮಟ್ಟದ ಅಧಿಕಾರಿಯಾಗಲು ಶಿಕ್ಷಕರ ನಿರಾಕರಣೆ
ಶಿಕ್ಷಕ-ಶಿಕ್ಷಕಿಯರ ಅಸಹಕಾರದ ನಡುವೆ ಸ್ಫೆಷಲ್‍ಡ್ರೈವ್‍ಗೆ ಅಡಚಣೆ
ಶಿಕ್ಷಕ ಶಿಕ್ಷಕಿಯರಿಗೆ ಕೆಲಸದ ಒತ್ತಡದ ನಡುವೆ ಚುನಾವಣೆಯ ಮತದಾರರ ಪಟ್ಟಿ ತಯಾರಿಕೆಯ ಹೆಚ್ಚುವರಿ ಕೆಲಸ ಅಪೇಕ್ಷಣೀಯವಲ್ಲ, ಭಾರತದಲ್ಲಿ ಗ್ರಾಮಗಳಲ್ಲಿ ಕೆಲಸವಿಲ್ಲದೆ ನಿರುದ್ಯೋಗಿಗಳಾಗಿರುವ ಯುವಕರ ಪಡೆಯೇ ಇದೆ. ಈ ವಿದ್ಯಾವಂತ ನಿರುದ್ಯೋಗಿಗಳನ್ನು ಬಳಸಿಕೊಂಡು ಮತದಾರರ ಪಟ್ಟಿ ತಯಾರಿಸಬಹುದು. ಸಿದ್ಧಾಪುರ, ಶಿರಸಿ-ಸಾಗರ ಸೇರಿದಂತೆ ಬಹುತೇಕ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮತದಾರರ ಪಟ್ಟಿಗಾಗಿ ಶಿಕ್ಷಕ,ಶಿಕ್ಷಕಿಯರು ಅಲೆಯುವುದು ಕಷ್ಟ, ಹಾಗಾಗಿ ಶಿಕ್ಷಕ-ಶಿಕ್ಷಕಿಯರ ಈ ಹೆಚ್ಚುವರಿ ಕೆಲಸ ನಿಲ್ಲಿಸಬೇಕು.

  • ಎಂ.ಕೆ.ನಾಯ್ಕ ಕಡಕೇರಿ, ಪ್ರಾ.ಶಾ.ಶಿ.ಸಂಘದ
    ತಾಲೂಕಾ ಅಧ್ಯಕ್ಷ

ಕುಮಾರ ನಾಯ್ಕ ಜಿಲ್ಲಾಮಟ್ಟಕ್ಕೆ ಆಯ್ಕೆ
ಸಿದ್ಧಾಪುರ,ಸೆ.18-ಇಲ್ಲಿಯ ಅವರಗುಪ್ಪಾ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕುಮಾರ ನಾಯ್ಕ ಗುಂಡು ಎಸೆತ,ಚಕ್ರ ಎಸೆತಗಳಲ್ಲಿ ಕ್ರಮವಾಗಿ ಮೊದಲ,ದ್ವಿತಿಯ ಸ್ಥಾನಗಳನ್ನು ಗಳಿಸಿ ತಾಲೂಕಿನಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಶುಕ್ರವಾರ ಸಾರಿಗೆ ಅದಾಲತ್ ಇಲ್ಲದಿದ್ದರೆ ಪ್ರತಿಭಟನೆ
ಸಿದ್ಧಾಪುರ ತಾಲೂಕಿನ ಸಾರಿಗೆ ತೊಂದರೆ ಬಗೆಹರಿಸಲು ಇದೇ ಸೆ.20 ರ ಶುಕ್ರವಾರ ಸಾರಿಗೆ ಅದಾಲತ್ ನಡೆಸಲು ಸಿದ್ಧಾಪುರ ತಾ.ಪಂ.ಸಾರಿಗೆ ಇಲಾಖೆಗೆ ಆದೇಶಿಸಿದೆ. ತಾಲೂಕಿನ ಸಾರಿಗೆ ಸಮಸ್ಯೆಗಳ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ತಾಲೂಕು ಪಂಚಾಯತ್ ಒತ್ತಡ, ಮನವಿ ದಿಕ್ಕರಿಸಿರುವ ಅಧಿಕಾರಿಗಳು ಈ ಸಮಯಮಿತಿಯಲ್ಲಿ ಸಾರಿಗೆ ಅದಾಲತ್ ನಡೆಸದಿದ್ದರೆ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆ ಮಾಡುವುದಾಗಿ ತಾ.ಪಂ. ಅಧ್ಯಕ್ಷ ಸುಧೀರ್ ಗೌಡರ್ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಎಚ್ಚರಿಸಿದ್ದಾರೆ.
ಸಾರಿಗೆ ಕಾಯಿದೆ ಬದಲಾವಣೆಗೆ ಆಗ್ರಹ
ದುಬಾರಿ ದಂಡದಿಂದ ಜನಸಾಮಾನ್ಯರಿಗೆ ತೊಂದರೆ ಆಗುತಿದ್ದು, ಕೇಂದ್ರದ ಮೋಟಾರ್ ವಾಹನ ಕಾಯಿದೆ ತಿದ್ದುಪಡಿ ಅಥವಾ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಜೆ.ಡಿ.ಎಸ್. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿರುವ ಅವರು ಗೋವಾ, ಗುಜರಾತ್ ಗಳಲ್ಲೇ ಕೇಂದ್ರದ ಅವೈಜ್ಞಾನಿಕ ವಸೂಲಿ ಕಾಯಿದೆ ಧಿಕ್ಕರಿಸಲಾಗಿದೆ. ಇಂಥ ಕಾಯಿದೆ ಜಾರಿ ಮಾಡಿ ಜನಸಾಮಾನ್ಯರನ್ನು ಹಿಂಸಿಸುವ ಬದಲು ಕಾಯಿದೆಗೆ ಬದಲಾವಣೆ ತಂದು ಅನುಷ್ಠಾನ ಮಾಡಬೇಕೆಂದು ಅವರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಆಗ್ರಹಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *