
ಸಿದ್ಧಾಪುರ ತಾಲೂಕಿನ ಸಾರಿಗೆ ತೊಂದರೆ ಬಗೆಹರಿಸಲು ಇದೇ ಸೆ.20 ರ ಶುಕ್ರವಾರ ಸಾರಿಗೆ ಅದಾಲತ್ ನಡೆಸಲು ಸಿದ್ಧಾಪುರ ತಾ.ಪಂ.ಸಾರಿಗೆ ಇಲಾಖೆಗೆ ಆದೇಶಿಸಿದೆ. ತಾಲೂಕಿನ ಸಾರಿಗೆ ಸಮಸ್ಯೆಗಳ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ತಾಲೂಕು ಪಂಚಾಯತ್ ಒತ್ತಡ, ಮನವಿ ದಿಕ್ಕರಿಸಿರುವ ಅಧಿಕಾರಿಗಳು ಈ ಸಮಯಮಿತಿಯಲ್ಲಿ ಸಾರಿಗೆ ಅದಾಲತ್ ನಡೆಸದಿದ್ದರೆ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆ ಮಾಡುವುದಾಗಿ ತಾ.ಪಂ. ಅಧ್ಯಕ್ಷ ಸುಧೀರ್ ಗೌಡರ್ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಎಚ್ಚರಿಸಿದ್ದಾರೆ.
ಸಾರಿಗೆ ಕಾಯಿದೆ ಬದಲಾವಣೆಗೆ ಆಗ್ರಹ
ದುಬಾರಿ ದಂಡದಿಂದ ಜನಸಾಮಾನ್ಯರಿಗೆ ತೊಂದರೆ ಆಗುತಿದ್ದು, ಕೇಂದ್ರದ ಮೋಟಾರ್ ವಾಹನ ಕಾಯಿದೆ ತಿದ್ದುಪಡಿ ಅಥವಾ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಜೆ.ಡಿ.ಎಸ್. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿರುವ ಅವರು ಗೋವಾ, ಗುಜರಾತ್ ಗಳಲ್ಲೇ ಕೇಂದ್ರದ ಅವೈಜ್ಞಾನಿಕ ವಸೂಲಿ ಕಾಯಿದೆ ಧಿಕ್ಕರಿಸಲಾಗಿದೆ. ಇಂಥ ಕಾಯಿದೆ ಜಾರಿ ಮಾಡಿ ಜನಸಾಮಾನ್ಯರನ್ನು ಹಿಂಸಿಸುವ ಬದಲು ಕಾಯಿದೆಗೆ ಬದಲಾವಣೆ ತಂದು ಅನುಷ್ಠಾನ ಮಾಡಬೇಕೆಂದು ಅವರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಆಗ್ರಹಿಸಿದ್ದಾರೆ.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
