ಸಿದ್ಧಾಪುರದ ಬಾಲೆ ಕರ್ನಾಟಕ ವಿಶ್ವವಿದ್ಯಾಲಯದ ತಾರೆ

sdp-spl-record
ಸಿದ್ಧಾಪುರದ ಬಾಲೆ ಕರ್ನಾಟಕ ವಿಶ್ವವಿದ್ಯಾಲಯದ ತಾರೆ
ಸಿದ್ಧಾಪುರ ಮೂಲದ ಪಲ್ಲವಿ ಅಪ್ಪಿನಬೈಲ್ ಅಖಿಲಭಾರತ ವಿಶ್ವವಿದ್ಯಾಲಯ ಮಟ್ಟದ ಕ್ರಾಸ್‍ಕಂಟ್ರಿ ಸ್ಫರ್ಧೆಗೆ ಅರ್ಹಳಾಗಿದ್ದಾಳೆ.
ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ಏಕವಲಯ ಸ್ಫರ್ಧೆಯಲ್ಲಿ ಜಯ ಗಳಿಸಿರುವ ಈಕೆ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಸ್ಫರ್ಧೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿ ಆಯ್ಕೆಯಾಗಿದ್ದಾಳೆ. ಪ್ರಸ್ತುತ ಧಾರವಾಡದ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ. ಮೊದಲ ವರ್ಷದ ಅಪರಾಧ ಶಾಸ್ತ್ರ ಓದುತ್ತಿರುವ ಇವಳು ಸಿದ್ಧಾಪುರದ ಪ್ರತಿಷ್ಟಿತ ಅಪ್ಪಿನಬೈಲ್ ಕುಟುಂಬದ ಗೋಪಾಲ ಮತ್ತು ಗೌರಿ ದಂಪತಿಗಳ ಮಗಳು.
ಈ ಹಿಂದೆ ಈಕೆ 7 ನೇ ತರಗತಿಯಲ್ಲಿದ್ದಾಗ ರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ಮೂರುಸಾವಿರ ಮೀಟರ್ ಸ್ಫರ್ಧೆಯಲ್ಲಿ ಬಂಗಾರದ ಪದಕ ವಿಜೇತಳಾಗಿದ್ದಳು, ನಂತರ ಹತ್ತನೇ ತರಗತಿಯಲ್ಲಿದ್ದಾಗ ರಾಜ್ಯಮಟ್ಟದ ಅಥ್ಲೆಟಿಕ್ ಸ್ಫರ್ಧೆಯಲ್ಲಿ ಮೂರುಸಾವಿರ ಮೀಟರ್,ಒಂದೂವರೆ ಸಾವಿರ ಮೀಟರ್ ಹಾಗೂ 800 ಮೀಟರ್ ಸ್ಫರ್ಧೆಗಳಲ್ಲಿ ಕ್ರಮವಾಗಿ ಬಂಗಾರ,ಬೆಳ್ಳಿ ಹಾಗೂ ಕಂಚಿನ ಪದಕ ಗಳಿಸಿ ಮೂರುಸಾವಿರ ಮೀಟರ್ ಓಟವನ್ನು ಹತ್ತುನಿಮಿಷ ನಾಲ್ವತ್ತೇಳು ಸೆ.ಗಳಲ್ಲಿ ಕ್ರಮಿಸಿ ದಾಖಲೆ ಬರೆದ್ದಾಳೆ. ಪಿ.ಯು. ಓದುತಿದ್ದಾಗ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಪಂದ್ಯಾಟದಲ್ಲಿ ಮೂರುಸಾವಿರ ಹಾಗೂ ಒಂದೂವರೆ ಸಾವಿರ ಮೀಟರ್ ಸ್ಫರ್ಧೆಗಳಲ್ಲಿ ಬಂಗಾರದ ಪದಕ ಪಡೆದಿದ್ದಾಳೆ.
ಇವರ ತಂದೆ ಗೋಪಾಲ ಅಪ್ಪಿನಬೈಲ್ ರಾಮದುರ್ಗದ ಚಂದರಗಿ ಕ್ರೀಡಾಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತಿದ್ದಾರೆ. ತಾಯಿ ಕೂಡಾ ಶಿಕ್ಷಕಿ. ಇವರ ಸಾಧನೆಗೆ ಅನೇಕರು ಅಭಿನಂದಿಸಿ,ಪ್ರಶಂಸಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *