ಎರಡುವಾರಗಳ ಕಾಲ ಮಿತಿಯಲ್ಲಿ ಸಾರಿಗೆ ಅವ್ಯವಸ್ಥೆ ಸರಿಪಡಿಸಲು ಭರವಸೆ

ಸಿದ್ಧಾಪುರ ತಾಲೂಕಿನ ಬಸ್ ಸಂಪರ್ಕದ ಅವ್ಯವಸ್ಥೆ ಪರಿಹಾರಕ್ಕೆ ಇಂದು ಇಲ್ಲಿಯ ತಾ.ಪಂ.ನಲ್ಲಿ ಕರೆದ ಸಾರಿಗೆ ಅದಾಲತ್ ಯಶಸ್ವಿಆಗುವ ಸೂಚನೆ ದೊರೆತಿದೆ. ಕಳೆದ ಎರಡು ವರ್ಷಗಳಿಂದ ತಾಲೂಕು ಪಂಚಾಯತ್ ಸಭೆ ಸೇರಿದಂತೆ ವಿವಿಧೆಡೆ ವ್ಯಕ್ತವಾಗುತ್ತಿದ್ದ ಸಾರಿಗೆ ಅವ್ಯವಸ್ಥೆ ಆರೋಪದ ಹಿನ್ನೆಲೆಯಲ್ಲಿ ಇಂದು ತಾ.ಪಂ. ಸಭಾಭವನದಲ್ಲಿ ತಾ.ಪಂ. ಅಧ್ಯಕ್ಷ ಸುಧೀರ್ ಗೌಡರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಆಲಿಸಿದರು. ವಿದ್ಯಾರ್ಥಿಗಳೊಂದಿಗೆ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಇಡೀ ತಾಲೂಕಿನ ಸಾರಿಗೆ ಅವ್ಯವಸ್ಥೆ ಅದರಿಂದಾಗುವ ತೊಂದರೆಗಳ ಬಗ್ಗೆ ಅಧಿಕಾರಿಗಳು, ಸಭೆಯ ಗಮನ ಸೆಳೆದರು. ಬೇಡ್ಕಣಿ ಸರ್ಕಾರಿ ಪದವಿ ಮಹಾವಿದ್ಯಾಲಯ, ಅವರಗುಪ್ಪಾದಲ್ಲಿರುವ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ತಾಲೂಕಿನ ಪದವಿಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಸಾರಿಗೆ ಅವ್ಯವಸ್ಥೆಯಿಂದ ತಮಗಾಗುವ ತೊಂದರೆ ತೆರೆದಿಟ್ಟರು. ಅದಕ್ಕೆ ಧ್ವನಿ ಸೇರಿಸಿದ ಜನಪ್ರತಿನಿಧಿಗಳು ತೊಂದರೆ, ಸಮಸ್ಯೆಗಳಿಗೆ ಪರಿಹಾರದ ಸಲಹೆ-ಸೂಚನೆ ನೀಡಿದರು.
ಈ ಅಹವಾಲುಗಳನ್ನು ಆಲಿಸಿದ ಅಧಿಕಾರಿಗಳು ವಿದ್ಯಾರ್ಥಿಗಳು, ಜನಪ್ರತಿನಿಧಿಗಳ ಸಲಹೆ,ಸೂಚನೆಗಳಂತೆ ಮಾರ್ಗ, ಸಮಯ ಬದಲಾವಣೆ ಸೇರಿದಂತೆ ಅಗತ್ಯ ಕೆಲಸಗಳನ್ನು ಎರಡು ವಾರಗಳಲ್ಲಿ ಪೂರ್ತಿಗೊಳಿಸುವಂತೆ ಭರವಸೆ ನೀಡಿದರು.

ಈ ಸಭೆ, ಸಭೆಯ ಸಲಹೆ,ಸೂಚನೆ ಭರವಸೆಗಳ ಹಿನ್ನೆಲೆಯಲ್ಲಿ ಕಾಲಮಿತಿಯಲ್ಲಿ ತಾಲೂಕಿನ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ದೊರೆಯಬಹುದೆಂದು ನಿರೀಕ್ಷಿಸಲಾಗಿದೆ.
ಶಿರಸಿ ವಿಭಾಗದಲ್ಲಿ 125 ಚಾಲಕ, ನಿರ್ವಾಹಕರ ಕೊರತೆ ಇದೆ. ಇಂಥ ತೊಂದರೆಗಳ ಈ ಸ್ಥಿತಿಯಲ್ಲಿ ನಮ್ಮ ಮಿತಿಯಲ್ಲಿ ಉತ್ತಮ ಸೇವೆ ನೀಡುವ ಪ್ರಯತ್ನ ಮಾಡುತಿದ್ದೇವೆ. ಸಾರ್ವಜನಿಕರು, ವಿದ್ಯಾರ್ಥಿಗಳು ಸಹಕರಿಸದಿದ್ದರೆ ಕಷ್ಟ

-ಸುರೇಶ್ ನಾಯ್ಕ (ಡಿ.ಟಿ.ಓ.)


ನಮ್ಮ ಶಾಲಾ ಕಾಲೇಜಿನ ಸಮಯಕ್ಕೆ ಅನುಗುಣವಾಗಿ ಬಸ್ ವ್ಯವಸ್ಥೆ ಮಾಡಬೇಕು. ಈಗಿನ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ 50% ಕ್ಕಿಂತ ಹೆಚ್ಚಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ತೊಂದರೆಗಳ
ಬಾಧಿತರಾಗಿದ್ದಾರೆ.

– ವಿದ್ಯಾರ್ಥಿ ಮುಖಂಡರು

ಸಿದ್ಧಾಪುರದಲ್ಲಿ ಮಾರ್ಗಮಧ್ಯದಲ್ಲಿ ಕೆಟ್ಟುನಿಲ್ಲುವ ಬಸ್‍ಗಳ ಸಂಖ್ಯೆ ಹೆಚ್ಚುತ್ತಿದೆ. ತಾಲೂಕಿಗೆ ಒಂದಾದರೂ ಹೆಚ್ಚುವರಿ ಬಸ್ ಇದ್ದರೆ ಇಷ್ಟು ಸಮಸ್ಯೆಯಾಗುವುದಿಲ್ಲ. ಜೋಗಿನ ಮಠ ಮತ್ತು ಜೋಗಗಳಿಗೆ ಶಿರಸಿ-ಸಿದ್ಧಾಪುರದಿಂದ ಒಂದೂ ನೇರಮಾರ್ಗದ ವಾಹನವಿಲ್ಲ. ಶಿರಸಿ-ಸಾಗರ ಮಾರ್ಗದ ಬಸ್ ಗಳಲ್ಲಿ ಕೆಲವನ್ನು ಜೋಗ ಸಿದ್ಧಾಪುರ ಮಾರ್ಗದಲ್ಲಿ ಬಿಡಬೇಕು.

– ಶ್ರೀಧರ ಬಸನಬೈಲ್

ಎಲ್ಲವನ್ನೂ ವ್ಯವಹಾರಿಕವಾಗಿ ನೋಡಬೇಡಿ, ಪ್ರತಿ 15 ನಿಮಿಷಕ್ಕೊಂದರಂತೆ ಶಿರಸಿ-ಸಾಗರ ರಸ್ತೆಯಲ್ಲಿ ಚಲಿಸುವ ಬಸ್ ಮಾರ್ಗ ಬದಲಿಸಿ, ಗ್ರಾಮೀಣ ಜನರಿಗೆ ತ್ವರಿತ ಸೇವೆ ನೀಡಿ.

ಕೃಷ್ಣಮೂರ್ತಿ ಐಸೂರು

ನಮ್ಮ ತಾಲೂಕಿನ ಪ್ರಯಾಣಿಕರು, ವಿದ್ಯಾರ್ಥಿಗಳು ಸಾರ್ವಜನಿಕರು ಎಲ್ಲರೂ ನಮ್ಮವರೇ ಅವರೆಲ್ಲಾ ಶಿಸ್ತು, ಸಂಯಮದಿಂದ ವರ್ತಿಸಿದರೆ ಅರ್ಧ ಸಮಸ್ಯೆ ಬಗೆಹರಿದಂತೆ -ಆರ್.ಟಿ.ನಾಯ್ಕ ,ನಿಯಂತ್ರಣಾಧಿ

-ಕೆ.ಆರ್. ವಿನಾಯಕ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *