ಎರಡುವಾರಗಳ ಕಾಲ ಮಿತಿಯಲ್ಲಿ ಸಾರಿಗೆ ಅವ್ಯವಸ್ಥೆ ಸರಿಪಡಿಸಲು ಭರವಸೆ

ಸಿದ್ಧಾಪುರ ತಾಲೂಕಿನ ಬಸ್ ಸಂಪರ್ಕದ ಅವ್ಯವಸ್ಥೆ ಪರಿಹಾರಕ್ಕೆ ಇಂದು ಇಲ್ಲಿಯ ತಾ.ಪಂ.ನಲ್ಲಿ ಕರೆದ ಸಾರಿಗೆ ಅದಾಲತ್ ಯಶಸ್ವಿಆಗುವ ಸೂಚನೆ ದೊರೆತಿದೆ. ಕಳೆದ ಎರಡು ವರ್ಷಗಳಿಂದ ತಾಲೂಕು ಪಂಚಾಯತ್ ಸಭೆ ಸೇರಿದಂತೆ ವಿವಿಧೆಡೆ ವ್ಯಕ್ತವಾಗುತ್ತಿದ್ದ ಸಾರಿಗೆ ಅವ್ಯವಸ್ಥೆ ಆರೋಪದ ಹಿನ್ನೆಲೆಯಲ್ಲಿ ಇಂದು ತಾ.ಪಂ. ಸಭಾಭವನದಲ್ಲಿ ತಾ.ಪಂ. ಅಧ್ಯಕ್ಷ ಸುಧೀರ್ ಗೌಡರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಆಲಿಸಿದರು. ವಿದ್ಯಾರ್ಥಿಗಳೊಂದಿಗೆ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಇಡೀ ತಾಲೂಕಿನ ಸಾರಿಗೆ ಅವ್ಯವಸ್ಥೆ ಅದರಿಂದಾಗುವ ತೊಂದರೆಗಳ ಬಗ್ಗೆ ಅಧಿಕಾರಿಗಳು, ಸಭೆಯ ಗಮನ ಸೆಳೆದರು. ಬೇಡ್ಕಣಿ ಸರ್ಕಾರಿ ಪದವಿ ಮಹಾವಿದ್ಯಾಲಯ, ಅವರಗುಪ್ಪಾದಲ್ಲಿರುವ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ತಾಲೂಕಿನ ಪದವಿಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಸಾರಿಗೆ ಅವ್ಯವಸ್ಥೆಯಿಂದ ತಮಗಾಗುವ ತೊಂದರೆ ತೆರೆದಿಟ್ಟರು. ಅದಕ್ಕೆ ಧ್ವನಿ ಸೇರಿಸಿದ ಜನಪ್ರತಿನಿಧಿಗಳು ತೊಂದರೆ, ಸಮಸ್ಯೆಗಳಿಗೆ ಪರಿಹಾರದ ಸಲಹೆ-ಸೂಚನೆ ನೀಡಿದರು.
ಈ ಅಹವಾಲುಗಳನ್ನು ಆಲಿಸಿದ ಅಧಿಕಾರಿಗಳು ವಿದ್ಯಾರ್ಥಿಗಳು, ಜನಪ್ರತಿನಿಧಿಗಳ ಸಲಹೆ,ಸೂಚನೆಗಳಂತೆ ಮಾರ್ಗ, ಸಮಯ ಬದಲಾವಣೆ ಸೇರಿದಂತೆ ಅಗತ್ಯ ಕೆಲಸಗಳನ್ನು ಎರಡು ವಾರಗಳಲ್ಲಿ ಪೂರ್ತಿಗೊಳಿಸುವಂತೆ ಭರವಸೆ ನೀಡಿದರು.

ಈ ಸಭೆ, ಸಭೆಯ ಸಲಹೆ,ಸೂಚನೆ ಭರವಸೆಗಳ ಹಿನ್ನೆಲೆಯಲ್ಲಿ ಕಾಲಮಿತಿಯಲ್ಲಿ ತಾಲೂಕಿನ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ದೊರೆಯಬಹುದೆಂದು ನಿರೀಕ್ಷಿಸಲಾಗಿದೆ.
ಶಿರಸಿ ವಿಭಾಗದಲ್ಲಿ 125 ಚಾಲಕ, ನಿರ್ವಾಹಕರ ಕೊರತೆ ಇದೆ. ಇಂಥ ತೊಂದರೆಗಳ ಈ ಸ್ಥಿತಿಯಲ್ಲಿ ನಮ್ಮ ಮಿತಿಯಲ್ಲಿ ಉತ್ತಮ ಸೇವೆ ನೀಡುವ ಪ್ರಯತ್ನ ಮಾಡುತಿದ್ದೇವೆ. ಸಾರ್ವಜನಿಕರು, ವಿದ್ಯಾರ್ಥಿಗಳು ಸಹಕರಿಸದಿದ್ದರೆ ಕಷ್ಟ

-ಸುರೇಶ್ ನಾಯ್ಕ (ಡಿ.ಟಿ.ಓ.)


ನಮ್ಮ ಶಾಲಾ ಕಾಲೇಜಿನ ಸಮಯಕ್ಕೆ ಅನುಗುಣವಾಗಿ ಬಸ್ ವ್ಯವಸ್ಥೆ ಮಾಡಬೇಕು. ಈಗಿನ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ 50% ಕ್ಕಿಂತ ಹೆಚ್ಚಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ತೊಂದರೆಗಳ
ಬಾಧಿತರಾಗಿದ್ದಾರೆ.

– ವಿದ್ಯಾರ್ಥಿ ಮುಖಂಡರು

ಸಿದ್ಧಾಪುರದಲ್ಲಿ ಮಾರ್ಗಮಧ್ಯದಲ್ಲಿ ಕೆಟ್ಟುನಿಲ್ಲುವ ಬಸ್‍ಗಳ ಸಂಖ್ಯೆ ಹೆಚ್ಚುತ್ತಿದೆ. ತಾಲೂಕಿಗೆ ಒಂದಾದರೂ ಹೆಚ್ಚುವರಿ ಬಸ್ ಇದ್ದರೆ ಇಷ್ಟು ಸಮಸ್ಯೆಯಾಗುವುದಿಲ್ಲ. ಜೋಗಿನ ಮಠ ಮತ್ತು ಜೋಗಗಳಿಗೆ ಶಿರಸಿ-ಸಿದ್ಧಾಪುರದಿಂದ ಒಂದೂ ನೇರಮಾರ್ಗದ ವಾಹನವಿಲ್ಲ. ಶಿರಸಿ-ಸಾಗರ ಮಾರ್ಗದ ಬಸ್ ಗಳಲ್ಲಿ ಕೆಲವನ್ನು ಜೋಗ ಸಿದ್ಧಾಪುರ ಮಾರ್ಗದಲ್ಲಿ ಬಿಡಬೇಕು.

– ಶ್ರೀಧರ ಬಸನಬೈಲ್

ಎಲ್ಲವನ್ನೂ ವ್ಯವಹಾರಿಕವಾಗಿ ನೋಡಬೇಡಿ, ಪ್ರತಿ 15 ನಿಮಿಷಕ್ಕೊಂದರಂತೆ ಶಿರಸಿ-ಸಾಗರ ರಸ್ತೆಯಲ್ಲಿ ಚಲಿಸುವ ಬಸ್ ಮಾರ್ಗ ಬದಲಿಸಿ, ಗ್ರಾಮೀಣ ಜನರಿಗೆ ತ್ವರಿತ ಸೇವೆ ನೀಡಿ.

ಕೃಷ್ಣಮೂರ್ತಿ ಐಸೂರು

ನಮ್ಮ ತಾಲೂಕಿನ ಪ್ರಯಾಣಿಕರು, ವಿದ್ಯಾರ್ಥಿಗಳು ಸಾರ್ವಜನಿಕರು ಎಲ್ಲರೂ ನಮ್ಮವರೇ ಅವರೆಲ್ಲಾ ಶಿಸ್ತು, ಸಂಯಮದಿಂದ ವರ್ತಿಸಿದರೆ ಅರ್ಧ ಸಮಸ್ಯೆ ಬಗೆಹರಿದಂತೆ -ಆರ್.ಟಿ.ನಾಯ್ಕ ,ನಿಯಂತ್ರಣಾಧಿ

-ಕೆ.ಆರ್. ವಿನಾಯಕ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *