ಎರಡುವಾರಗಳ ಕಾಲ ಮಿತಿಯಲ್ಲಿ ಸಾರಿಗೆ ಅವ್ಯವಸ್ಥೆ ಸರಿಪಡಿಸಲು ಭರವಸೆ

ಸಿದ್ಧಾಪುರ ತಾಲೂಕಿನ ಬಸ್ ಸಂಪರ್ಕದ ಅವ್ಯವಸ್ಥೆ ಪರಿಹಾರಕ್ಕೆ ಇಂದು ಇಲ್ಲಿಯ ತಾ.ಪಂ.ನಲ್ಲಿ ಕರೆದ ಸಾರಿಗೆ ಅದಾಲತ್ ಯಶಸ್ವಿಆಗುವ ಸೂಚನೆ ದೊರೆತಿದೆ. ಕಳೆದ ಎರಡು ವರ್ಷಗಳಿಂದ ತಾಲೂಕು ಪಂಚಾಯತ್ ಸಭೆ ಸೇರಿದಂತೆ ವಿವಿಧೆಡೆ ವ್ಯಕ್ತವಾಗುತ್ತಿದ್ದ ಸಾರಿಗೆ ಅವ್ಯವಸ್ಥೆ ಆರೋಪದ ಹಿನ್ನೆಲೆಯಲ್ಲಿ ಇಂದು ತಾ.ಪಂ. ಸಭಾಭವನದಲ್ಲಿ ತಾ.ಪಂ. ಅಧ್ಯಕ್ಷ ಸುಧೀರ್ ಗೌಡರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಆಲಿಸಿದರು. ವಿದ್ಯಾರ್ಥಿಗಳೊಂದಿಗೆ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಇಡೀ ತಾಲೂಕಿನ ಸಾರಿಗೆ ಅವ್ಯವಸ್ಥೆ ಅದರಿಂದಾಗುವ ತೊಂದರೆಗಳ ಬಗ್ಗೆ ಅಧಿಕಾರಿಗಳು, ಸಭೆಯ ಗಮನ ಸೆಳೆದರು. ಬೇಡ್ಕಣಿ ಸರ್ಕಾರಿ ಪದವಿ ಮಹಾವಿದ್ಯಾಲಯ, ಅವರಗುಪ್ಪಾದಲ್ಲಿರುವ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ತಾಲೂಕಿನ ಪದವಿಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಸಾರಿಗೆ ಅವ್ಯವಸ್ಥೆಯಿಂದ ತಮಗಾಗುವ ತೊಂದರೆ ತೆರೆದಿಟ್ಟರು. ಅದಕ್ಕೆ ಧ್ವನಿ ಸೇರಿಸಿದ ಜನಪ್ರತಿನಿಧಿಗಳು ತೊಂದರೆ, ಸಮಸ್ಯೆಗಳಿಗೆ ಪರಿಹಾರದ ಸಲಹೆ-ಸೂಚನೆ ನೀಡಿದರು.
ಈ ಅಹವಾಲುಗಳನ್ನು ಆಲಿಸಿದ ಅಧಿಕಾರಿಗಳು ವಿದ್ಯಾರ್ಥಿಗಳು, ಜನಪ್ರತಿನಿಧಿಗಳ ಸಲಹೆ,ಸೂಚನೆಗಳಂತೆ ಮಾರ್ಗ, ಸಮಯ ಬದಲಾವಣೆ ಸೇರಿದಂತೆ ಅಗತ್ಯ ಕೆಲಸಗಳನ್ನು ಎರಡು ವಾರಗಳಲ್ಲಿ ಪೂರ್ತಿಗೊಳಿಸುವಂತೆ ಭರವಸೆ ನೀಡಿದರು.

ಈ ಸಭೆ, ಸಭೆಯ ಸಲಹೆ,ಸೂಚನೆ ಭರವಸೆಗಳ ಹಿನ್ನೆಲೆಯಲ್ಲಿ ಕಾಲಮಿತಿಯಲ್ಲಿ ತಾಲೂಕಿನ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ದೊರೆಯಬಹುದೆಂದು ನಿರೀಕ್ಷಿಸಲಾಗಿದೆ.
ಶಿರಸಿ ವಿಭಾಗದಲ್ಲಿ 125 ಚಾಲಕ, ನಿರ್ವಾಹಕರ ಕೊರತೆ ಇದೆ. ಇಂಥ ತೊಂದರೆಗಳ ಈ ಸ್ಥಿತಿಯಲ್ಲಿ ನಮ್ಮ ಮಿತಿಯಲ್ಲಿ ಉತ್ತಮ ಸೇವೆ ನೀಡುವ ಪ್ರಯತ್ನ ಮಾಡುತಿದ್ದೇವೆ. ಸಾರ್ವಜನಿಕರು, ವಿದ್ಯಾರ್ಥಿಗಳು ಸಹಕರಿಸದಿದ್ದರೆ ಕಷ್ಟ

-ಸುರೇಶ್ ನಾಯ್ಕ (ಡಿ.ಟಿ.ಓ.)


ನಮ್ಮ ಶಾಲಾ ಕಾಲೇಜಿನ ಸಮಯಕ್ಕೆ ಅನುಗುಣವಾಗಿ ಬಸ್ ವ್ಯವಸ್ಥೆ ಮಾಡಬೇಕು. ಈಗಿನ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ 50% ಕ್ಕಿಂತ ಹೆಚ್ಚಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ತೊಂದರೆಗಳ
ಬಾಧಿತರಾಗಿದ್ದಾರೆ.

– ವಿದ್ಯಾರ್ಥಿ ಮುಖಂಡರು

ಸಿದ್ಧಾಪುರದಲ್ಲಿ ಮಾರ್ಗಮಧ್ಯದಲ್ಲಿ ಕೆಟ್ಟುನಿಲ್ಲುವ ಬಸ್‍ಗಳ ಸಂಖ್ಯೆ ಹೆಚ್ಚುತ್ತಿದೆ. ತಾಲೂಕಿಗೆ ಒಂದಾದರೂ ಹೆಚ್ಚುವರಿ ಬಸ್ ಇದ್ದರೆ ಇಷ್ಟು ಸಮಸ್ಯೆಯಾಗುವುದಿಲ್ಲ. ಜೋಗಿನ ಮಠ ಮತ್ತು ಜೋಗಗಳಿಗೆ ಶಿರಸಿ-ಸಿದ್ಧಾಪುರದಿಂದ ಒಂದೂ ನೇರಮಾರ್ಗದ ವಾಹನವಿಲ್ಲ. ಶಿರಸಿ-ಸಾಗರ ಮಾರ್ಗದ ಬಸ್ ಗಳಲ್ಲಿ ಕೆಲವನ್ನು ಜೋಗ ಸಿದ್ಧಾಪುರ ಮಾರ್ಗದಲ್ಲಿ ಬಿಡಬೇಕು.

– ಶ್ರೀಧರ ಬಸನಬೈಲ್

ಎಲ್ಲವನ್ನೂ ವ್ಯವಹಾರಿಕವಾಗಿ ನೋಡಬೇಡಿ, ಪ್ರತಿ 15 ನಿಮಿಷಕ್ಕೊಂದರಂತೆ ಶಿರಸಿ-ಸಾಗರ ರಸ್ತೆಯಲ್ಲಿ ಚಲಿಸುವ ಬಸ್ ಮಾರ್ಗ ಬದಲಿಸಿ, ಗ್ರಾಮೀಣ ಜನರಿಗೆ ತ್ವರಿತ ಸೇವೆ ನೀಡಿ.

ಕೃಷ್ಣಮೂರ್ತಿ ಐಸೂರು

ನಮ್ಮ ತಾಲೂಕಿನ ಪ್ರಯಾಣಿಕರು, ವಿದ್ಯಾರ್ಥಿಗಳು ಸಾರ್ವಜನಿಕರು ಎಲ್ಲರೂ ನಮ್ಮವರೇ ಅವರೆಲ್ಲಾ ಶಿಸ್ತು, ಸಂಯಮದಿಂದ ವರ್ತಿಸಿದರೆ ಅರ್ಧ ಸಮಸ್ಯೆ ಬಗೆಹರಿದಂತೆ -ಆರ್.ಟಿ.ನಾಯ್ಕ ,ನಿಯಂತ್ರಣಾಧಿ

-ಕೆ.ಆರ್. ವಿನಾಯಕ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *