ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹೊನಲು ಬೆಳಕಿನ ಕಬ್ಬಡ್ಡಿ

ಕಾನಗೋಡಿನಲ್ಲಿ ಅದ್ಧೂರಿ19 ನೇ ವರ್ಷದ ನವರಾತ್ರಿ ಉತ್ಸವ, ಧಾರ್ಮಿಕ,ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ
ಹೊನಲು ಬೆಳಕಿನ ಕಬ್ಬಡ್ಡಿ
ಅಕ್ಟೋಬರ್ 5 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದ್ದು ರಾಜ್ಯದ ಯಾವುದೇ ತಾಲೂಕಿನ ತಂಡ ಈ ಪಂದ್ಯಾಟದಲ್ಲಿ ಪಾಲ್ಗೊಳ್ಳಬಹುದಾಗಿದೆ.. ಮೊದಲ ಬಹುಮಾನ 18 ಸಾವಿರ ರೂಪಾಯಿ ಎರಡನೇ ಬಹುಮಾನ 10 ಸಾವಿರ ರೂ. ತೃತೀಯ ಬಹುಮಾನ 5 ಸಾವಿರ ರೂಪಾಯಿಗಳು. ಪ್ರತಿತಂಡಕ್ಕೆ ಪ್ರವೇಶ ಶುಲ್ಕ ಒಂದು ಸಾವಿರ ರೂಪಾಯಿಗಳಾಗಿದ್ದು ಅಸಲೀ ಆಧಾರ್ ಕಾರ್ಡ್‍ಗಳೊಂದಿಗೆ ಪಂದ್ಯಾಟದ ಹಿಂದಿನ ದಿನದ ಸಾಯಂಕಾಲ 6 ರೊಳಗೆ ದಾಖಲು ಮಾಡಿಕೊಂಡವರು ಮಾತ್ರ ಈ ಪಂದ್ಯಾಟದಲ್ಲಿ ಭಾಗವಹಿಸಬಹುದಾಗಿದೆ.

ಪ್ರತಿವರ್ಷ ತಾಲೂಕಿನ ಕಾನಗೋಡಿನ ಮಾರಿಕಾಂಬಾ ದೇವಸ್ಥಾನದಲ್ಲಿ ಆಚರಿಸುವ ನವರಾತ್ರಿ ಉತ್ಸವವನ್ನು ಈ ವರ್ಷ ವಿಭಿನ್ನವಾಗಿ ಅದ್ಧೂರಿಯಾಗಿ ನಡೆಸಲು ಆಡಳಿತ ಸಮೀತಿ ತೀರ್ಮಾನಿಸಿದೆ.
ಇಂದು ಇಲ್ಲಿಯ ಕಾನಗೋಡು ಮಾರಿಕಾಂಬಾ ದೇವಸ್ಥಾನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿರುವ ಗ್ರಾಮಸ್ಥರು ಈ ಉತ್ಸವದಲ್ಲಿ
ಸಾಂಸ್ಕøತಿಕ, ಕ್ರೀಡಾ ಚಟುವಟಿಕೆಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳೂ ನಡೆಯಲಿವೆ ಎಂದರು.
ಸೆ.29 ರಿಂದ ಪ್ರಾರಂಭವಾಗುವ ಉತ್ಸವ ಅ.9 ರಂದು ಮುಕ್ತಾಯವಾಗಲಿದ್ದು ಈ ಅವಧಿಯ ಪ್ರತಿದಿನ ಸಾಯಂಕಾಲ ಸಾಂಸ್ಕøತಿಕ ಕಾರ್ಯಕ್ರಮಗಳು, ಭಜನೆ ನಡೆಯಲಿವೆ. ಕಾನಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಥಮ ಮೂರು ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಮತ್ತು ಸಾಧಕರಿಗೆ ಸನ್ಮಾನ ನೆರವೇರಲಿವೆ. ಪ್ರತಿದಿನ ಸಾಯಂಕಾಲ ಶಾಲಾ ವಿದ್ಯಾರ್ಥಿಗಳು ಮತ್ತು 19 ವರ್ಷಗಳ ಒಳಗಿನ ಪ್ರತಿಭೆಗಳು ಕಾರ್ಯಕ್ರಮ ನೀಡಬಹುದಾಗಿದೆ. ಹೊನಲುಬೆಳಕಿನ ಕಬ್ಬಡ್ಡಿ ಪಂದ್ಯಾವಳಿ ಸೇರಿದಂತೆ ನವರಾತ್ರಿ ಉತ್ಸವದ ಇತರ ಮಾಹಿತಿಗಳಿಗಾಗಿ 9242494314,(ವಾಸು)
9731209370 (ಶಿವರಾಯ)9483665799 (ರವಿನಾಯ್ಕ) ಸಂಪರ್ಕಿಸಬಹುದು ಎಂದು ದೇವಸ್ಥಾನ ಸಮೀತಿ ಅಧ್ಯಕ್ಷ ಮಾರುತಿ ನಾಯ್ಕ ತಿಳಿಸಿದರು.

ಉಳಿದವರೊಬ್ಬರೇ ಸ್ವಾತಂತ್ರ್ಯ ಸೇನಾನಿ,
ದೇಹ ಸಹಕರಿಸದಿದ್ದರೂ
ಮನಸ್ಸು ಹೋರಾಟದತ್ತ!
ಎನ್ನುವಂತಿರುವ
ಗಡದಬಂಗಾರಪ್ಪ
ಇದು ಒಂದು ರೋಚಕ ಪ್ರಸಂಗ, ಹಿರಿಯ ಸ್ನೇಹಿತ ದಫೇದಾರರೊಂದಿಗೆ ಮನ್ಮನೆಯ ಬಂಗಾರ್ಯ ನಾಯ್ಕರ ಮನೆಯ ಅಂಗಳ ತಲುಪಿದಾಗ ಮನೆಯೊಡೆಯನಿದ್ದಾನೋ? ಮನೆಒಳಗೆ ಎನ್ನುವ ಕುತೂಹಲ.
ನಾನೇ ಕೇಳಿದೆ ಬಂಗಾರಪ್ಪ ಇದ್ದಾರಾ? ಎಂದು.
ಈಗಷ್ಟೇ ಪದವಿ ಮುಗಿಸಿ ಅಧಿಕಾರಿಯಾಗಬೇಕೆಂದು ಓದುತ್ತಾ ಇರುವ ಹುಡುಗಿ ‘ಇದ್ದಾರೆ’,ಎಂದು ಉತ್ತರಿಸಿತು.
ಅಷ್ಟೊತ್ತಿಗೆ ಬಂಗಾರಪ್ಪ ನಾಯ್ಕ ಬಂದರು. ಅದು ಸಣ್ಣ ಮನೆ, ವ್ಯವಸ್ಥಿತವಲ್ಲದ ಸಾದಾ ರೈತ ಕುಟುಂಬದ ಮನೆಯಲ್ಲಿ ಇರುವ ಹಿರಿಯ ಜೀವ ಬಂಗಾರಪ್ಪ ನಾಯ್ಕ ಬಂದರು. ನಾವಿಬ್ಬರೂ ನಮಸ್ಕರಿಸಿದೆವು. ಅವರೂ ಪ್ರತಿನಮಸ್ಕರಿಸಿ, ನಮ್ಮ ಪರಿಚಯ ಮಾಡಿಕೊಂಡರು.
ಕುಗ್ಗದ ಉತ್ಸಾಹ, ಸ್ವಲ್ಫ ಬಳಲಿದಂತೆ ಕಂಡರೂ ಕಣ್ಣು,ಮಾತುಗಳ ಸ್ಫಷ್ಟತೆಯ ಬಂಗಾರಪ್ಪನವರಿಗೆ ಎಷ್ಟು ವಯಸ್ಸು ಕೇಳಿದೆವು. ಗೋಡೆಯ ಮೇಲಿನ ಚಿತ್ರ ತೋರಿಸಿ ಅಲ್ಲಿ ನೋಡಿ ಎಂದರು. ಅಲ್ಲಿ ಕಲಾವಿದ ಬಿಡಿಸಿದಂಥ ಇವರದೇ ಚಿತ್ರದ ಕೆಳಗೆ ಬಂಗಾರಪ್ಪ ನಾಯ್ಕ 1917 ಎಂದು ಬರೆದಿತ್ತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *