ನೈಸರ್ಗಿಕ ವಿಸ್ಮಯ ಯಾರ ಜವಾಬ್ಧಾರಿ? ಪುರಾತತ್ವಇಲಾಖೆಗೆ ಯಾಕಿಲ್ಲ ಉಸ್ತುವಾರಿ?


ಸಿದ್ಧಾಪುರ ತಾಲೂಕಿನ ಬಿಳಗಿ, ಹೊಸೂರು,ಬೇಡ್ಕಣಿ ಸೇರಿದಂತೆ ಕೆಲವೆಡೆ ಮನೆ ಕೆಲಸ, ರಸ್ತೆ, ರಿಪೇರಿಗಳಿಗೆ ಅವಕಾಶ ಕೊಡದ ಪುರಾತತ್ವ ಇಲಾಖೆ, ಮಹತ್ವದ ಪಳಯುಳಿಕೆಯಾದ ನೈಸರ್ಗಿಕ ಕಲ್ಲಿನ ಸೇತುವೆ ವಿಚಾರದಲ್ಲಿ ಕಣ್ಣಿದ್ದೂ ಕುರುಡು ಎನ್ನುವಂತಿದೆ.ಐತಿಹಾಸಿಕ, ನೈಸರ್ಗಿಕ ಮಹತ್ವದ ಪಳಯುಳಿಕೆಗಳನ್ನು ಉಳಿಸಿ, ಸಂರಕ್ಷಿಸುವ ಹಿನ್ನೆಲೆಯಲ್ಲಿ ಕೆಲಸಮಾಡಬೇಕಾದ ಅವಶ್ಯಕತೆ ಈಗ ಹೆಚ್ಚಾಗಿದೆ.
ಜಗತ್ತಿನ ವಿಸ್ಮಯ ಎನ್ನಲಾಗುವ ಸಿದ್ಧಾಪುರ ಮನ್ಮನೆ ಮಳವಳ್ಳಿಯ ನೈಸರ್ಗಿಕ ಕಲ್ಲಿನ ಸೇತುವೆ ಶಿಥಿಲವಾಗುತ್ತಿರುವ ವಿದ್ಯಮಾನ ಕಳವಳಕ್ಕೆ ಕಾರಣವಾಗಿದೆ. ಜಗತ್ತಿನ ಯಾವ ಭಾಗದಲ್ಲೂ ಇರದ ಕಲ್ಲಿನ ನೈಸರ್ಗಿಕ ಸೇತುವೆ ಉತ್ತರಕನ್ನಡ ಜಿಲ್ಲೆಯ ಗಡಿಭಾಗದ ಜೋಗ ಸಮೀಪದಲ್ಲಿದೆ. ಈ ವಿಸ್ಮಯ ಇತ್ತೀಚಿನ ವರ್ಷಗಳಲ್ಲಿ ಪ್ರವಾಸಿಗರನ್ನು ಸೆಳೆಯುವ ಕೇಂದ್ರವಾಗಿದೆ. ಆದರೆ ಇದರ ರಕ್ಷಣೆ ಮತ್ತು ಸುರಕ್ಷಿತತೆಗೆ ಯಾರೂ ಜವಾಬ್ಧಾರಿ ಹೊರದಿರುವುದು ಆತಂಕಕ್ಕೆ ಕಾರಣವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರು ಎತ್ತಿನ ಗಾಡಿ, ಕುದುರೆ ಟಾಂಗಾ,ಕುದುರೆ ಸವಾರಿ ಮಾಡುತ್ತಾ ಉತ್ತರಕನ್ನಡದಿಂದ ಶಿವಮೊಗ್ಗ ಮತ್ತು ಗೇರುಸೊಪ್ಪಾ ತಲುಪಲು ಬಳಸುತಿದ್ದ ಈ ಕಲ್ಲಿನ ಸೇತುವೆ ರಕ್ಷಣೆ, ಭದ್ರತೆ ಇಲ್ಲದೆ ಯಾರಿಗೂ ಸಂಬಂದಿಸಿüಲ್ಲದ ಪಳಯುಳಿಕೆಯಂತಾಗಿದೆ.
ಸುಮಾರು 80-100 ವರ್ಷಗಳ ಹಿಂದೆ 40 ಅಡಿಗಳಿಗಿಂತ ಅಗಲವಾಗಿದ್ದ ಈ ನೈಸರ್ಗಿಕ ಸೇತುವೆ ಕುಸಿಯುತ್ತಾ,ಕಳಚುತ್ತಾ ಈಗ ನಾಲ್ಕೈದು ಅಡಿಯಷ್ಟು ಕಿರಿದಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಇಲ್ಲಿಯ ಸಣ್ಣಹೊಳೆಗೆ ಬಾಂದಾರ ಮತ್ತು ಸೇತುವೆ ನಿರ್ಮಿಸುವ ಮೊದಲು ಜನ-ಜಾನುವಾರುಗಳ ಸಾಗಾಟಕ್ಕೆ ಬಳಕೆಯಾಗುತಿದ್ದ ಈ ನೈಸರ್ಗಿಕ ಸೇತುವೆ ಪುನರುಜ್ಜೀವನಕ್ಕೆ ಕರಾವಳಿ ಪ್ರಾಧಿಕಾರದಿಂದ ಹತ್ತು ಲಕ್ಷ ಮಂಜೂರಿಯಾಗಿತ್ತಾದರೂ ಜಿಲ್ಲಾಧಿಕಾರಿಗಳು ಈ ಕಾಮಗಾರಿಗೆ ಅನುಮತಿ ನೀಡಿಲ್ಲ. ಮೊದಮೊದಲು ವಿಸ್ತಾರವಾಗಿದ್ದ ಈ ಕಲ್ಲಿನ ಸೇತುವೆ ಇತ್ತೀಚಿನ ದಿನಗಳಲ್ಲಿ ಶಿಥಿಲವಾಗುತ್ತಾ ಕ್ಷಯಿಸುತ್ತಿರುವುದರಿಂದ ಜಿಲ್ಲಾಡಳಿತ ಇದರ ಸಂರಕ್ಷಣೆಯ ಹೊಣೆ ಹೊರಬೇಕು ಇಲ್ಲ ಇದನ್ನು ಪುರಾತತ್ವ ಇಲಾಖೆಯ ಮುತುವರ್ಜಿಗೆ ವಹಿಸಬೇಕು ಎನ್ನುವುದು ಈ ಭಾಗದ ಪ್ರಮುಖ ಸಾಮಾಜಿಕ ಕಾರ್ಯಕರ್ತ ವಸಂತ ನಾಯ್ಕ ಮಳಲವಳ್ಳಿಯವರ ಅನಿಸಿಕೆ.
ಈ ಕಲ್ಲಿನ ಸೇತುವೆ ಬಗ್ಗೆ ಐತಿಹಾಸಿಕ ಮಾಹಿತಿ ನನ್ನ ಬಳಿ ಇಲ್ಲ, ಆದರೆ ಸಂಶೋಧನೆ ಮಾಡಿದರೆ ಇದರ ಐತಿಹಾಸಿಕ ಮಹತ್ವ ಹೊರಬರಬಹುದು ಎನ್ನುತ್ತಾರೆ ಇತಿಹಾಸ ತಜ್ಞ ಡಾ. ಲಕ್ಷ್ಮೀಶ್ ಹೆಗಡೆ ಸೋಂದಾ.
ಹೀಗೆ ವಿಶಿಷ್ಟ,ವಿನೂತನ ಎನ್ನುವಂತಿರುವ ಈ ನೈಸರ್ಗಿಕ ಕಲ್ಲಿನ ಸೇತುವೆ ಪ್ರವಾಸಿಗರಿಗೆ ಗೊತ್ತೇ ಹೊರತು,ಪುರಾತತ್ವ ಇಲಾಖೆಯಾಗಲಿ, ರಾಜ್ಯ ಪ್ರವಾಸೋದ್ಯಮ ಇಲಾಖೆಯಾಗಲಿ ಇದನ್ನು ಗಮನಿಸಿಲ್ಲ. ಸ್ವಾತಂತ್ರ್ಯ ಹೋರಾಟ, ಕಾಗೋಡು ಚಳವಳಿಗಳ ಧೀರರ ನೆಲವಾದ ಸಿದ್ಧಾಪುರ ತಾಲೂಕಿನಲ್ಲಿ ಈ ವಿಸ್ಮಯ ಇರುವ ಬಗ್ಗೆ ಜನತೆ ಹೆಮ್ಮೆಯಿಂದ ಬೀಗುತ್ತಾರೆ.ಆದರೆ ಕೆಲವು ಸ್ಥಳಿಯ ರಾಜಕಾರಣಿಗಳನ್ನು ಬಿಟ್ಟರೆ ಶಿರಸಿ ಕ್ಷೇತ್ರ, ಉತ್ತರ ಕನ್ನಡವನ್ನು ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವವರು ಈ ವಿಸ್ಮಯದ ಬಗ್ಗೆ ಎಲ್ಲೂ ಬೆಳಕು ಚೆಲ್ಲಿಲ್ಲ.
ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೋರ್ಟಲ್ ಗಳಲ್ಲಿ ಒಂದೆರಡು ಬಾರಿ ಬರೆದು ಪರಿಚಯ, ಇದರ ಸಂರಕ್ಷಣೆಯ ಮಹತ್ವದ ಬಗ್ಗೆ ತಿಳಿಸಿದ್ದಾಗ್ಯೂ ಸಿದ್ಧಾಪುರ ತಾಲೂಕಾ ಆಡಳಿತ, ಉತ್ತರ ಕನ್ನಡ ಜಿಲ್ಲಾಡಳಿತ ಜನಪ್ರತಿನಿಧಿಗಳು ಗಮನ ಹರಿಸಿಲ್ಲ.
ಭವಿಷ್ಯದಲ್ಲಿ ಐತಿಹಾಸಿಕ ದಾಖಲೆ, ಪುರಾತನ ವೈಶಿಷ್ಟ್ಯ ಆಗಿ ಚಿತ್ರದಲ್ಲಿ ಮಾತ್ರ ನೋಡುವಂತೆ ಮಾಡುವ ಬದಲು ಸರ್ಕಾರ ಈ ಕಲ್ಲಿನ ಸೇತುವೆಯನ್ನು ಉಳಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸಬೇಕಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *