ಕಳಪೆ ಕೆಲಸ,ನಿರ್ಲಕ್ಷ ಹೊನ್ನೆಗುಂಡಿಗೆ ಶಾಪವಾದ ರಾಜಕಾಲುವೆ

ಸಿದ್ದಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯ ಹೊನ್ನೇಗುಂಡಿ ನಿವಾಸಿಗಳಿಗೆ ಕಳೆದ ಹತ್ತಾರು ವರ್ಷಗಳಿಂದ ಗಟಾರದಲ್ಲಿ ಹರಿಯುವ ಕೊಳಚೆ ನೀರು ಪಿಶಾಚಿಯಾಗಿ ಕಾಡತೊಡಗಿದೆ.
ಈ ಹಿಂದೆ ಕೊಳಚೆ ನೀರು ಹರಿದುಹೋಗಲು ಗಟಾರವನ್ನು ಪ.ಪಂ.ನಿಂದ ನಿರ್ಮಿಸಲಾಗಿದ್ದರೂ ನೆಲಕ್ಕೆ ಸರಿಯಾಗಿ ಬೆಡ್ ಹಾಕದೇ ಇದ್ದುದರಿಂದ ಈ ಭಾಗದ ನಿವಾಸಿಗಳ ಮನೆಯ ಕುಡಿಯುವ ನೀರಿನ ಬಾವಿಗಳಿಗೆ ಕೊಳಚೆ ನೀರು ನುಗ್ಗಿ ಬವಣೆ ಪಡುವಂತಾಗಿತ್ತು. ಕಳೆದ ವರ್ಷ ಅಲ್ಲಲ್ಲಿ ತೇಪೆ ಹಚ್ಚಿ, ಪೈಪ್‍ಗಳನ್ನು ಅಳವಡಿಸಿ ತಾತ್ಪೂರ್ತಿಕ ದುರಸ್ತಿಮಾಡಲಾಗಿದ್ದರೂ ಗಟಾರದ ಮುಂದಿನ ಭಾಗವನ್ನು ಹಾಗೇ ಬಿಟ್ಟಿದ್ದರಿಂದ ಅಲ್ಲಿ ಈಗ ಕೊಳಚೆ ನೀರು ಸರಾಗವಾಗಿ ಹರಿದು ಹೋಗದೇ ಹೊಂಡಗಳಲ್ಲಿ ತುಂಬಿಕೊಂಡು ಗಬ್ಬುವಾಸನೆ ಹೊಡೆಯತೊಡಗಿದೆ.
ಹೊಂಡಗಳಲ್ಲಿ ಕ್ರಿಮಿಗಳು, ಸೊಳ್ಳೆಗಳು ಜನ್ಮತಾಳಲು, ರೋಗರುಜಿನು ಹರಡಲು ಅವಕಾಶವಾಗುವಂತಾಗಿದೆ. ಅಲ್ಲದೆ ಹತ್ತಿರದ ನಿವಾಸಿಗಳ ಕುಡಿಯುವ ನೀರಿನ ಬಾವಿಯ ವರತೆಗೂ ಈ ಕೊಳಚೆ ನೀರು ಸೇರಿ ಬಾವಿಗೆ ವಕ್ಕರಿಸುವ ಸಾಧ್ಯತೆಯಿದ್ದು ಸ್ಥಳೀಯ ನಿವಾಸಿಗಳ ನಿದ್ದೆಗೆಡುವಂತೆ ಮಾಡಿದೆ.
ಈ ಹಿಂದೆ ಸಾಕಷ್ಟುಸಲ ನಮ್ಮ ಬಾವಿಗಳಿಗೆ ಕೊಳಚೆ ನೀರು ಸೇರಿಕೊಂಡು ಬವಣೆ ಅನುಭವಿಸಿದ್ದೇವೆ. ಮಳೆಗಾಲದಲ್ಲಿ ರಭಸವಾಗಿ ನೀರು ಹರಿದು ಹೋಗಿದ್ದರಿಂದ ಸಮಸ್ಯೆಯಾಗಿರಲಿಲ್ಲ. ಇದೀಗ ನೀರಿನ ಹರಿವು ಕಡಿಮೆಯಿದ್ದು ಗಟಾರಕ್ಕೆ ನೆಲಹಾಸು ಮಾಡದೇ ಇದ್ದುದರಿಂದ ಬಾವಿಯಂತೆ ಹೊಂಡ ಬಿದ್ದು ಅಲ್ಲಲ್ಲಿ ಕೊಳಚೆ ನೀರು ಮಡುಗಟ್ಟಿದೆ. ಈ ಕೊಳಚೆ ನೀರು ಯಾವಾಗ ಬಾವಿಗೆ ನುಗ್ಗುವುದೋ ಎಂಬ ಆತಂಕದಲ್ಲಿದ್ದೇವೆ. ಅಲ್ಲದೆ ಕೊಳಚೆ ನೀರಿನಿಂದಾಗಿ ಡೆಂಗ್ಯೂ ಸೇರಿದಂತೆ ವಿವಿಧ ಕಾಯಿಲೆಗಳು ಹರಡುವ ಸಾಧ್ಯತೆಯಿದೆ.
ಪಟ್ಟಣ ಪಂಚಾಯತ ಆಡಳಿತ ಈ ಕುರಿತು ಶೀಘ್ರ ಕ್ರಮ ವಹಿಸಿ ಗಟಾರವನ್ನು ಸರಿಪಡಿಸಿ ನಮಗಾಗುತ್ತಿರುವ, ಆಗಲಿರುವ ತೊಂದರೆ ನೀಗಬೇಕು ಎಂದು ಈ ಭಾಗದ ನಾಗರಿಕರು ಆಗ್ರಹಿಸಿದ್ದಾರೆ. ಎಲ್ಲಿ ಹೋಯ್ತು ಅಭಿವೃದ್ಧಿ-
ಇದೇ ವರ್ಷದ ಪಟ್ಟಣ ಪಂಚಾಯತ್ ಸೇರಿದಂತೆ ನಡೆದ ಅನೇಕ ಚುನಾವಣೆಗಳಲ್ಲಿ ಮತಕೇಳಲು ಬರುವ ಬಿ.ಜೆ.ಪಿ. ಕಾರ್ಯಕರ್ತರು ಹೊನ್ನೆಗುಂಡಿ ಸೇರಿದಂತೆ ನಗರ,ತಾಲೂಕು, ಜಿಲ್ಲೆಯಲ್ಲಿ ಬಿ.ಜೆ.ಪಿ.ಗೇ ಮತಹಾಕಿ ಮೇಲಿನಿಂದ ಕೆಳಗಿನವರೆಗೆ ನಾವೇ ಅಧಿಕಾರಕ್ಕೆ ಬರುತ್ತೇವೆ ನಿಮ್ಮ ಸಮಸ್ಯೆಗಳಿಗೆ ಸ್ಫಂದಿಸಿ ಅಭಿವೃದ್ಧಿ ಮಾಡುತ್ತೇವೆ ಎಂದು ಪ್ರಚಾರಮಾಡುತ್ತಾರೆ. ಆದರೆ ಈಗ ನಗರ,ತಾಲೂಕು, ಕ್ಷೇತ್ರ,ಜಿಲ್ಲೆ,ರಾಜ್ಯ,ರಾಷ್ಟ್ರದಲ್ಲಿ ಅವರದೇ ಅಧಿಕಾರ ಆದರೆ ಯಾಕೆ ಯಾವುದೇ ಕೆಲಸ, ಏನೂ ಅಭಿವೃದ್ಧಿ ಆಗುತ್ತಿಲ್ಲ?
-ನೊಂದ ಬಿ.ಜೆ.ಪಿ. ಕಾರ್ಯಕರ್ತ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು...

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

Latest Posts

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು ಚಾಲನೆ ನೀಡಿ ಸುದ್ದಿ ಮಾಡಿದ್ದಾರೆ. ಕಾಲೇಜಿನ ಸಂಪ್ರದಾಯ ದಿನಾಚರಣೆ, ಜಾನಪದ ಉತ್ಸವದಲ್ಲಿ ನಾಡಿನ ಹಬ್ಬದ ಸೊಗಡನ್ನು ಪರಿಚಯಿಸಿ ಈ ಕಾಲೇಜ್‌ ಸುದ್ದಿ ಮಾಡಿದೆ. ಸಿದ್ಧಾಪುರ ನಾಣಿಕಟ್ಟಾ ಪಿ.ಯು. ಕಾಲೇಜ್‌...

Recommended For You

About the Author: Kanneshwar Naik

Leave a Reply

Your email address will not be published. Required fields are marked *