ಅಪಾಯಕಾರಿ ಮರ ತೆರವಿಗೆ ಸ್ಥಳಿಯರ ಆಗ್ರಹ


ಸಿದ್ಧಾಪುರ ತಾಲೂಕಿನ ಗಡಿಪ್ರದೇಶ ಶಿರಸಿಬಾಳೂರು-ಕಾನಸೂರು-ಸಿದ್ಧಾಪುರ ರಸ್ತೆಯ ಗಿರಗಡ್ಡೆ ಬಳಿ ಬೃಹತ್ ಒಣಗಿದ ಮರವೊಂದು ರಸ್ತೆಪಕ್ಕದ ಮಾವಿನ ಮರಕ್ಕೆ ಒರಗಿದ್ದು ಈ ಒಣಮರ ರಸ್ತೆಗೆ ಬೀಳುವ ಸಮಯದಲ್ಲಿ ಅಪಾಯವಾಗುವ ಸಾಧ್ಯತೆ ಬಗ್ಗೆ ಸ್ಥಳಿಯರು ಎಚ್ಚರಿಸಿದ್ದಾರೆ.
ಇದೇ ವರ್ಷ ತಾಲೂಕಿನ ಮಾವಿನಗುಂಡಿ ಬಳಿ ಮರ ಒಂದು ರಸ್ತೆ ಮೇಲೆ ಬಿದ್ದು ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರನ್ನು ಬಲಿತೆಗೆದುಕೊಂಡಿತ್ತು. ಈ ಅಪಾಯದ ನಂತರ ತಾಲೂಕಿನಾದ್ಯಂತ ಅಪಾಯದ ಮರಗಳನ್ನು ತೆರವುಮಾಡುವ ಬಗ್ಗೆ ಸಮೀಕ್ಷೆ ನಡೆದಿತ್ತು.
ಈ ವರ್ಷದ ಮಳೆಗಾಲದ ಸಮಯದಲ್ಲಿ ರಸ್ತೆಗೆ ಬಾಗಿ ಮಾವಿನಮರವೊಂದಕ್ಕೆ ಒರಗಿರುವ ಒಣಮರ ಈ ವರೆಗೆ ನೆಲಕ್ಕುರುಳದೆ ಸಾರ್ವಜನಿಕ ರಸ್ತೆಗೆ ಕಮಾನಿನಂತೆ ಬಾಗಿಕೊಂಡಿದೆ. ಈ ಮರ ಯಾವುದೇ ಸಮಯದಲ್ಲಿ ಬೀಳುವ ಸಾಧ್ಯತೆ ಇದ್ದು ಈ ಮರ ವಾಹನ ಸವಾರರು ಸಾಗುವ ಸಮಯದಲ್ಲಿ ಅಥವಾ ಪಾದಚಾರಿಗಳು ಸಾಗುವ ಸಮಯದಲ್ಲಿ ಧರೆಗುರುಳಿದರೆ ಜೀವಹಾನಿ, ತೊಂದರೆಗಳಾಗುವ ಸಾಧ್ಯತೆ ನಿಚ್ಚಳವಾಗಿದೆ.
ಈ ಅಪಾಯ ಸಾಧ್ಯತೆಯನ್ನು ಗಮನಿಸಿರುವ ಸ್ಥಳಿಯರು ಈ ಬಗ್ಗೆ ಅರಣ್ಯ ಇಲಾಖೆಗೆ ತಿಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಆದರೆ ಅರಣ್ಯ ಇಲಾಖೆ ಈ ವರೆಗೆ ಕ್ರಮ ಜರುಗಿಸದಿರುವುದರಿಂದ ಜನತೆ ಈ ಅಪಾಯದ ಬಗ್ಗೆ ಭಯಭೀತರಾಗಿದ್ದಾರೆ. ಈ ಹಳೆದೊಡ್ಡಮರ ತೆರವುಮಾಡುವ ಮೂಲಕ ಸ್ಥಳಿಯರ ತೊಂದರೆ,ಭಯಕ್ಕೆ ಪರಿಹಾರದ ಅಭಯ ನೀಡಬೇಕೆಂದು ಮಾಧ್ಯಮಗಳ ಮೂಲಕ ಜನತೆ ತಾಲೂಕಾ ಆಡಳಿತ ಮತ್ತು ಅರಣ್ಯ ಇಲಾಖೆಗಳನ್ನು ಆಗ್ರಹಿಸಿದ್ದಾರೆ.

ಗಾಂಧಿ ಸಾಧನೆ,ಸಿದ್ಧಾತದ ಮೂಲಕ ಜನಜಾಗೃತಿ
ಗಾಂಧೀಜಿ ವೈಯಕ್ತಿಕ ಮತ್ತು ಸಾರ್ವಜನಿಕ ಸ್ವಚ್ಛತೆ ಪ್ರತಿಪಾದಿಸುವ ಜೊತೆಗೆ ಅವುಗಳ ಅನುಷ್ಠಾನಕ್ಕೆ ಶ್ರಮಿಸಿದ್ದರು,ಅವರ ಸಾಧನೆ, ಸಿದ್ಧಾಂತಗಳನ್ನು ಹೊಸಪೀಳಿಗೆಗೆ ತಿಳಿಸುವ ಮೂಲಕ ಜಾಗೃತಿಮೂಡಿಸಬೇಕು ಎಂದು ತಹಸಿಲ್ದಾರ ಗೀತಾ ಸಿ.ಜಿ. ಹೇಳಿದರು.
ಅವರು ತಾಲೂಕಾ ಆಡಳಿತ ಪ್ರಾರಂಭಿಸಿದ ಸ್ವಚ್ಛತಾ ಕಾರ್ಯಕ್ರಮದ ಜಾಥಾ ಉದ್ಘಾಟಿಸಿ ಮಾತನಾಡಿದರು. ಜಾಥಾ ಮೂಲಕ ಪ್ಲಾಸ್ಟಿಕ್ ಅಪಾಯದ ಜನಜಾಗೃತಿ ಮೂಡಿಸಿದ ತಾಲೂಕಾ ಆಡಳಿತ ವಿವಿಧೆಡೆ ಶ್ರಮದಾನ ನಡೆಸಿತು. ಪ್ಲಾಸ್ಟಿಕ್‍ಗೆ ಪರ್ಯಾಯ
ಸಿದ್ಧಾಪುರ ತಾಲೂಕಿನ ಕಡಕೇರಿಯಲ್ಲಿ ಪ್ಲಾಸ್ಟಿಕ್ ಕ್ಯಾನ್ ಗಳಿಗೆ ಬದಲು ಸ್ಟೀಲ್ ಕ್ಯಾನ್ ನೀಡುವ ಮೂಲಕ ಸದಸ್ಯರನ್ನು ಪ್ಲಾಸ್ಟಿಕ್ ಬಳಕೆಯಿಂದ ದೂರವಿರಲು ಪ್ರೇರೇಪಿಸಲಾಯಿತು.
ಸಿದ್ಧಾಪುರ ತಾಲೂಕಾ ಆಡಳಿತ ಪ್ಲಾಸ್ಟಿಕ್ ಅಪಾಯದ ಸ್ಥಬ್ಧಚಿತ್ರ ಪ್ರದರ್ಶಿಸುವ ಮೂಲಕ ಪ್ಲಾಸ್ಟಿಕ್ ಗೆ ಪರ್ಯಾಯದ ಅಗತ್ಯವನ್ನು ಒತ್ತಿ ಹೇಳಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *