ಬಿ.ಪಿ.ಎಲ್ ಚೀಟಿ ರದ್ದು ಮಾಡದಂತೆ ಆಗ್ರಹಿಸಲು ಮನವಿ


(ಸಿದ್ದಾಪುರ:) ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲ್ಲೂಕಾಧ್ಯಕ್ಷರಾದ ಪರಮೇಶ್ವರ ಜಿ ಹಸ್ಲರ್ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ನೌಕರರು ಬಿ.ಪಿ.ಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸದಂತೆ ತಹಸೀಲ್ದಾರ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ನೀಡಿದರು.
ಗ್ರಾಮಪಂಚಾಯತ ಸಿಬ್ಬಂದಿಗಳಾದ ಗುಮಾಸ್ತ,ಕರವಸೂಲಿಗಾರ,ಕ್ಲರ್ಕ್,ಡಾಟಾ ಎಂಟರಿ ಆಪರೇಟರ್,ಸ್ವಚ್ಚತಾಗಾರ,ಜವಾನ ಹಾಗು ನಿರಗಂಟಿ ಪಡೆದಿರುವ ಬಿಪಿಎಲ್ ರೆಷನ್ ಕಾರ್ಡನ್ನು ರದ್ದು ಪಡಿಸುವಂತೆ ಹಾಗು ಸರಂಡರ್ ಮಾಡುವಂತೆ ಸರಕಾರದ ನಿರ್ದೇಶನ ದಲ್ಲಿ ಸೂಚಿಸಿದಂತೆ ಗ್ರಾಮಪಂಚಾಯತದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಾವುಗಳು ಕನಿಷ್ಡ ವೆತನ ಪಡೆಯುತ್ತಿದ್ದು,ಪಂಚಾಯತಕ್ಕೆ ಬರುವ ಎಲ್ಲಾ ಯೊಜನೆಗಳನ್ನು ಅನುಷ್ಟಾನ ಮಾಡುವ ಕಾರ್ಯ ಮಾಡುತ್ತಿದ್ದು ನಮಗೆ ಪ್ರತಿ ತಿಂಗಳು ವೇತನ ಸಿಗುವುದಿಲ್ಲ.ಮೊದಲಿನಂತೆ ತ್ರೈಮಾಸಿಕ ಕಂತು ಬಿಡುಗಡೆಯಾಗುವುದಿಲ್ಲ.ಹೀಗಿರುವಾಗ ಕನಿಷ್ಟ ವೇತನ ಕೂಡ ಪಡೆದು ಜೀವನ ನಿರ್ವಹಣೆ ಮಾಡುತ್ತಿರುವ ನಮ್ಮ ಬಿಪಿಎಲ್ ಪಡಿತರಚೀಟಿಯನ್ನು ರದ್ದುಗೊಳಿಸಿದರೆ ಜೀವನ ನಡೆಸುವುದು ಕಷ್ಟವಾಗುತ್ತದೆ. ಅದ್ದರಿಂದ ಯಾವುದೆ ಕಾರಣಕ್ಕೂ ಪಡಿತರ ಚೀಟಿಯನ್ನು ರದ್ದುಗೊಳಿಸಬಾರದೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ಉತ್ತರ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಗಂಗಾಧರ ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ನಾರಾಯಣ ನಾಯ್ಕ, ತಾಲ್ಲೂಕಾ ಸಮಿತಿಯ ಉಪಾಧ್ಯಕ್ಷರಾದ ವಸಂತ ನಾಯ್ಕ, ಕಾರ್ಯದರ್ಶಿಯಾದ ರಮೇಶ ನಾಯ್ಕ, ಕೋಶಾಧ್ಯಕ್ಷರಾದ ತೋಟಪ್ಪ ಮಡಿವಾಳ, ಸಂಘಟನಾ ಕಾರ್ಯದರ್ಶಿಯಾದ ಕೇಶವ ನಾಯ್ಕ ಹಾಗೂ ಸಹ ಕಾರ್ಯದರ್ಶಿಯಾದ ಸಂತೋಷ ನಾಯ್ಕ, ವಿವಿಧ ಪದಾಧಿಕಾರಿಗಳು, ಸಿದ್ದಾಪುರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಕ್ಲರ್ಕ್, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಸಿಪಾಯಿ, ಸ್ವಚ್ಛತಾಗಾರ ಹಾಗೂ ನೀರುಗಂಟಿಗಳು ಹಾಜರಿದ್ದರು

ಭುವನಗಿರಿಯಲ್ಲಿ ನವರಾತ್ರಿ ಉತ್ಸವ
ಪುಟಾಣಿಗಳ ತಬಲಾ ತರಂಗ, ಮನಸೂರೆಗೊಂಡ ಪ್ರಕಾಶ ಹೆಗಡೆ ಬಾನ್ಸುರಿ ವಾದನ
ಸಿದ್ದಾಪುರ. ತಾಲೂಕಿನ ಭುವನಗಿರಿಯಲ್ಲಿ ಶರನ್ನವರಾತ್ರಿಯ ಅಂಗವಾಗಿ ಸುಷಿರ ಸಂಗೀತ ಪರಿವಾರ ವಿಶೇಷ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಬೆಂಗಳೂರಿನ ಖ್ಯಾತ ತಬಲಾವಾದಕ ಡಾ.ಉದಯರಾಜ ಕರ್ಪೂರ್ ಅವರ 12 ಪುಟಾಣಿ ವಿದ್ಯಾರ್ಥಿಗಳು ತಬಲಾ ತರಂಗ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ನಡೆಸಿಕೊಟ್ಟು ಪ್ರೇಕ್ಷಕರಿಂದ ಚಪ್ಪಾಳೆಗಿಟ್ಟಿಸಿಕೊಂಡರು.ಗಣಪತಿ ಭಜನ್ ದೊಂದಿಗೆ ಪ್ರಾರಂಭಿಸಿ,ಐಗಿರಿನಂದಿನಿ ಮುಂತಾದ ಭಕ್ತಿ ರಚನೆಗಳನ್ನು ನುಡಿಸಿದರು. ಪ್ರೀತಿ ಪ್ರಸನ್ನ, ಪ್ರಣತಿ, ವೃಷಬ್ ತಮ್ಮ ಹಾಡುಗಾರಿಕೆಯಿಂದ, ಚಿನ್ಮಯ್ ಭಾರದ್ವಾಜ ಹಾರ್ಮೋನಿಯಂನಲ್ಲಿ, ಕಮಲ್ ಕೊಳಲಿನಲ್ಲಿ ಹಾಗೂ ಪ್ರದ್ಯುಮ್ನ ಕರ್ಪೂರ್, ಲಕ್ಷ್ಯ, ಸ್ಕಂದ, ಸುದರ್ಶನ್, ಶಶಾಂಕ, ಪ್ರಣವ ಭಾರದ್ವಾಜ, ಶ್ರೀಕರ ಚತುರ್ವೇದಿ ತಬಲಾದಲ್ಲಿ ಸಾಮೂಹಿಕವಾಗಿ ತಮ್ಮ ಕೌಶಲ ಪ್ರದರ್ಶಿಸಿದರು. ನಂತರ ಆಕಾಶವಾಣಿ ಮತ್ತು ದೂರದರ್ಶನದ ಎ ಗ್ರೇಡ್ ಕಲಾವಿದ ಪಂ.ಪ್ರಕಾಶ ಹೆಗಡೆಯವರ ಕೊಳಲುವಾದನ ಡಾ.ಉದಯರಾಜ ಕರ್ಪೂರ್ ಮತ್ತು ಅವರ ಶಿಷ್ಯ ಶಶಾಂಕ ಹೆಗಡೆಯವರ ತಬಲಾಸಾತ್ ನೊಂದಿಗೆ ಮೇಳೈಸಿ ಪ್ರೇಕ್ಷಕರ ಹೃನ್ಮನ ಸೂರೆಗೊಂಡಿತು.ಇವರು ರಾಗ ದುರ್ಗಾವನ್ನು ಮಧ್ಯಲಯ ಏಕತಾಲ ಹಾಗೂ ದೃತ್ ತೀನ್ ತಾಲ್ ನಲ್ಲಿ ಪ್ರಸ್ತುತಪಡಿಸಿ, ಶ್ರೀರಾಮಚಂದಿರನೆ ಭಜನ್ ದೊಂದಿಗೆ ಕಾರ್ಯಕ್ರಮವನ್ನು ಸಂಪನ್ನ ಗೊಳಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *