

ಶರನ್ನವರಾತ್ರಿ ಉತ್ಸವದ ಹಿನ್ನಲೆಯಲ್ಲಿ ಶ್ರೀನಾಟ್ಯ ವಿನಾಯಕ ಸೇವಾ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರದ ಸಹಕಾರದಲ್ಲಿ ಲಂಕಾದಹನ ಉಚಿತ ಯಕ್ಷಗಾನ ಪ್ರದರ್ಶನ ಅ.7ರಂದು ಸಂಜೆ 4ರಿಂದ ಸಿದ್ದಾಪುರತಾಲೂಕಿನ ಇಟಗಿ ಕಲಗದ್ದೆಯ ಯಕ್ಷಗಾನ ನಾಟ್ಯ ವಿನಾಯಕ ದೇವಸ್ಥಾನದ ಆವಾರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಮೊಕ್ತೇಸರ ವಿನಾಯಕ ಹೆಗಡೆ ವಹಿಸಿಕೊಳ್ಳಲಿದ್ದು, ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತರಾದ ನಾರಾಯಣ ಮೂರ್ತಿ ಎಸ್.ಹೆಗಡೆ, ವಸಂತ ಹೆಗಡೆ ಶಶಿಗುಳಿ, ಸುಬ್ರಾಯ ಹೆಗಡೆ ಭವಂತಿಮನೆ ಆಲಳ್ಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು, ಅನಂತ ಪ್ರತಿಷ್ಠಾನದ ಕಾರ್ಯದರ್ಶಿ ಕೊಳಗಿ ಕೇಶವ ಹೆಗಡೆ ಪಾಲ್ಗೊಳ್ಳಲಿದ್ದಾರೆ.
ಹಿಮ್ಮೇಳದಲ್ಲಿ ಕೇಶವ ಹೆಗಡೆ ಕೊಳಗಿ, ಶರತ್ ಜಾನಕೈ, ಭಾರ್ಗವ ಹೆಗ್ಗೋಡು, ಮುಮ್ಮೇಳದಲ್ಲಿ ವಿನಾಯಕ ಹೆಗಡೆ ಕಲಗದ್ದೆ, ಅಶೋಕ ಭಟ್ಟ ಸಿದ್ದಾಪುರ, ನಾಗೇಂದ್ರ ಮೂರೂರು, ವೆಂಕಟೇಶ ಬೊಗ್ರಿಮಕ್ಕಿ, ಅವಿನಾಶ ಕೊಪ್ಪ ಸಹಕಾರ ನೀಡಲಿದ್ದು, ಪ್ರಸಾದನದಲ್ಲಿ ಎಂ.ಆರ್.ನಾಯ್ಕ ಕರಸೇಬೈಲ್ ಪಾಲ್ಗೊಳ್ಳಲಿದ್ದಾರೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
