ಶಂಕರಮಠದ ಸಂಸ್ಕೃತಿ ಸಂಪದೋತ್ಸವದಲ್ಲಿ ನಾದಪ್ರದಕ್ಷಿಣೆಯ ಮೆರಗು

ಸಿದ್ದಾಪುರ ಪಟ್ಟಣದ ಶಂಕರಮಠದಲ್ಲಿ ನವರಾತ್ರಿ ಪ್ರಯುಕ್ತ ಸಂಸ್ಕೃತಿ ಸಂಪದೋತ್ಸವ ಸಂಭ್ರಮದಿಂದ ನಡೆಯಿತು.
6ದಿನಗಳಕಾಲದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 3ನೇದಿನ ಮುರಳೀವನ ಸಾಂಸ್ಕೃತಿಕ ಸಂಘಟನೆಯು ನಾದಪ್ರದಕ್ಷಿಣೆ ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿತು.
ಪ್ರಾರಂಭದಲ್ಲಿ ರಾಜೇಂದ್ರ ಹೆಗಡೆ ಕೊಳಗಿ ಹಿಂದುಸ್ಥಾನಿ ಗಾಯನದಲ್ಲಿ ರಾಗ ಮುಲ್ತಾನಿ (ವಿಲಂಬಿತ್ ಏಕತಾಲ, ದೃತ್ ತೀನ್ ತಾಲ) ಪ್ರಸ್ತುತ ಪಡಿಸಿದರು. ನಂತರ ಪಾಲಿಸೆನ್ನ ಮಾತೆ.. ಭಕ್ತಿರಚನೆಯನ್ನು ಹಾಡಿದರು. ಇವರಿಗೆ ಮಹೇಶ ಹೆಗಡೆ ಹೊಸಗದ್ದೆ(ತಬಲಾ), ಜಯರಾಮ ಭಟ್ಟ ಹೆಗ್ಗಾರಳ್ಳಿ( ಸಂವಾದಿನಿ) ಸಾತ್ ನೀಡಿದರು.
ಮುಂದಿನ ಭಾಗದಲ್ಲಿ ನಿತಿನ್ ಹೆಗಡೆ ಕಲಗದ್ದೆ ತಬಲಾ ಸೋಲೊ ಪ್ರಸ್ತುತ ಪಡಿಸಿ ತಮ್ಮ ಕೈಚಳಕದಿಂದ ಪ್ರೇಕ್ಷಕರ ಮನಗೆದ್ದರು.
ಡಾ. ಸಮೀರ ಬಾದ್ರಿಯವರ ಹಾರ್ಮೋನಿಯಂ ಲೆಹರಾ ಅಷ್ಟೇ ಪ್ರಬುದ್ಧವಾಗಿ ಮೂಡಿಬಂತು.
ಮೂರನೇ ಭಾಗದಲ್ಲಿ ಕೊಳಲುವಾದಕ ಕಿರಣ ಹೆಗಡೆ ಮಘೇಗಾರ ಹಾಗೂ ಪ್ರಸಿದ್ಧ ಹಿಂದುಸ್ಥಾನಿ ಗಾಯಕ ರವಿಕಿರಣ ಮಣಿಪಾಲ ಬಾನ್ಸುರಿ – ಗಾಯನ ಜುಗಲಬಂದಿ ಪ್ರದರ್ಶಿಸಿದರು.
ಇವರು ರಾಗ ಪೂರಿಯಾ ಕಲ್ಯಾಣ್, ದುರ್ಗಾ, ರಾಗಮಾಲಾ ಗಳನ್ನು ಕ್ರಮವಾಗಿ ಪ್ರಸ್ತುತಪಡಿಸಿದರು. ಇವರಿಗೆ ಭಾರವಿ ದೇರಾಜೆ ಸುರತ್ಕಲ್ ತಬಲಾದಲ್ಲಿ ಹಾಗೂ ಶಶಿಕಿರಣ ಮಣಿಪಾಲ ಸಂವಾದಿನಿಯಲ್ಲಿ ಜೋಡಿಯಾದರು. ಚಿನ್ಮಯ್ ಭಟ್ಟ ತಾನ್ಪುರದಲ್ಲಿ ಸಹಕರಿಸಿದರು. ಗಣಪತಿ ಬಿ ಹಿತ್ತಲಕೈ ಸ್ವಾಗತಿಸಿ ವಂದಿಸಿದರು. ಎಂ.ಕೆ.ನಾಯ್ಕ ಹೊಸಳ್ಳಿ ನಿರೂಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *