ಒಂದೇ ದೇಶ, ಒಂದೇ ಸಂವಿಧಾನ ಪಕ್ಷ,ಜನಸಂಘದ ಧ್ಯೇಯ


ಕಾಶ್ಮೀರದ ವಿಶೇಶ ಸ್ಥಾನಮಾನ ರದ್ಧತಿ ಮತ್ತು ಒಂದೇ ದೇಶ, ಒಂದೇ ಸಂವಿಧಾನ ಅಭಿಯಾನದ ಹಿಂದೆ ಬಿ.ಜೆ.ಪಿ.ಗೆ ರಾಜಕೀಯ ಉದ್ಧೇಶವಿಲ್ಲ ಬದಲಾಗಿ ಪಕ್ಷ,ಸಂಘದ ಧ್ಯೇಯದ ಉದ್ಧೇಶವಿದೆ ಎಂದು ಬಿ.ಜೆ.ಪಿ. ಪ್ರತಿಪಾದಿಸಿದೆ.
ಇಂದು ಇಲ್ಲಿಯ ಲಯನ್ಸ್ ಬಾಲಭವನದಲ್ಲಿ ನಡೆದ ರಾಷ್ಟ್ರೀಯ ಏಕತಾ ಅಭಿಯಾನದ ಕಾರ್ಯಕ್ರಮದಲ್ಲಿ ಮಾತನಾಡಿದ ಈ ಅಭಿಯಾನದ ಜಿಲ್ಲಾ ಸಂಚಾಲಕ,ಮಾಜಿ ಶಾಸಕ ಸುನಿಲ್ ಹೆಗಡೆ ಮಾಧ್ಯಮಗಳು, ವಿರೋಧಿಗಳು, ಪ್ರತಿಪಕ್ಷಗಳು ಬಿ.ಜೆ.ಪಿ.ಯ ಏಕತಾ ಅಭಿಯಾನವನ್ನು ರಾಜಕೀಯ ಅಭಿಯಾನ, ರಾಜಕೀಯ ಲಾಭದ ತಂತ್ರ ಎಂದು ದೂರುತ್ತಿವೆ. ಆದರೆ ಈ ಅಭಿಯಾನ ಪಕ್ಷ ಮತ್ತು ಜನಸಂಘದ ಧ್ಯೇಯದ ಅಭಿಯಾನ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಬಿ.ಜೆ.ಪಿ. ಜಿಲ್ಲಾ ವಕ್ತಾರ ರವಿಹೆಗಡೆ ಹೂವಿನಮನೆ ಬುದ್ಧಿಜೀವಿಗಳು, ಕೆಲವು ಹಿತಾಸಕ್ತಿಗಳಿಗೆ ಹಿಂದಿನ ಅವಧಿಯ ಎನ್.ಡಿ.ಎ.ಸರ್ಕಾರ ದಿಂದ ಪ್ರಾರಂಭವಾದ ಅಸಹನೆ ಈಗಲೂ ಮುಂದುವರಿದಿದೆ. ಹಿಂದೆ ಅವಲೋಕನ ನಡೆಸಿದ ಪಕ್ಷ ಈಗ ಏಕರೂಪ ನಾಗರಿಕ ಸಂಹಿತೆಗೆ ಅವಶ್ಯವಿರುವ ಒಂದೇ ದೇಶ ಒಂದೇ ಸಂವಿಧಾನದ ಪ್ರಣಾಳಿಕೆಯಂತೆ ಕೆಲಸ ಮಾಡುತ್ತಿದೆ ಎಂದರು.
ಹಿಂದೆ ದೇಶವನ್ನಾಳಿದ ದುರ್ಭಲ ನಾಯಕತ್ವದಿಂದ ಅಖಂಡ ಭಾರತ ದೇಶದ ಕನಸು ನನಸಾಗಿಲ್ಲ ಈಗ ದೇಶಕ್ಕೆ ವಿಶ್ವಗುರುವಿನ ಗೌರವ ದೊರೆಯುತ್ತಿದೆ ಎಂದು ಸಮರ್ಥಿಸಿದರು.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ವಿ.ಎಸ್.ಪಾಟೀಲ್
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮುಂಡಗೋಡಿನ ಬಿ.ಜೆ.ಪಿ.ಮುಖಂಡ ಮತ್ತು ಮಾಜಿ ಶಾಸಕ ವಿ.ಎಸ್ ಪಾಟೀಲ್ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಸದ್ಯದಲ್ಲಿ ಚುನಾವಣೆ ನಡೆಯಲಿರುವ ಯಲ್ಲಾಪುರ ಕ್ಷೇತ್ರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಹಿಂದೆ ಈ ವಾ.ಕ.ರ.ಸಾ.ಸಂಸ್ಥೆಯ ಅಧ್ಯಕ್ಷರಾಗಿದ್ದರು. ಈಗಿನ ಅಧ್ಯಕ್ಷ ವಿ.ಎಸ್.ಪಾಟೀಲ್ ಹಿಂದೆ ಯಲ್ಲಾಪುರ ಕ್ಷೇತ್ರದ ಶಾಸಕರಾಗಿದ್ದರು. ಈಗಲೂ ಅವರು ಉಪಚುನಾವಣೆಯ ಬಿ.ಜೆ.ಪಿ. ಟಿಕೇಟ್ ನ ಪ್ರಬಲ ಆಕಾಂಕ್ಷಿಯಾಗಿದ್ದು ಬಿ.ಜೆ.ಪಿ.ಅನರ್ಹಶಾಸಕ ಹೆಬ್ಬಾರ್ ಅಥವಾ ಅವರ ಕುಟುಂಬಸ್ಥರಿಗೆ ಟಿಕೇಟ್ ನೀಡಿದರೆ ಪಾಟೀಲ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗುತಿತ್ತು. ಬಿ.ಜೆ.ಪಿ. ವಿ.ಎಸ್.ಪಾಟೀಲ್ ರನ್ನು ನಿಗಮದ ಅಧ್ಯಕ್ಷರನ್ನಾಗಿಸುವ ಮೂಲಕ ಮಾಜಿ ಶಾಸಕರ ಅಸಮಾಧಾನಕ್ಕೆ ತಣ್ಣಿರು ಎರಚಿದೆ ಎನ್ನಲಾಗುತ್ತಿದೆ.ಪಾಟೀಲ್‍ರೊಂದಿಗೆ ಇತರ 8 ಜನ ಬಿ.ಜೆ.ಪಿ. ಪ್ರಮುಖರನ್ನು ನಾನಾ ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇಮಕಾತಿ ಆದೇಶ ಮಾಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *