ಒಂದೇ ದೇಶ, ಒಂದೇ ಸಂವಿಧಾನ ಪಕ್ಷ,ಜನಸಂಘದ ಧ್ಯೇಯ


ಕಾಶ್ಮೀರದ ವಿಶೇಶ ಸ್ಥಾನಮಾನ ರದ್ಧತಿ ಮತ್ತು ಒಂದೇ ದೇಶ, ಒಂದೇ ಸಂವಿಧಾನ ಅಭಿಯಾನದ ಹಿಂದೆ ಬಿ.ಜೆ.ಪಿ.ಗೆ ರಾಜಕೀಯ ಉದ್ಧೇಶವಿಲ್ಲ ಬದಲಾಗಿ ಪಕ್ಷ,ಸಂಘದ ಧ್ಯೇಯದ ಉದ್ಧೇಶವಿದೆ ಎಂದು ಬಿ.ಜೆ.ಪಿ. ಪ್ರತಿಪಾದಿಸಿದೆ.
ಇಂದು ಇಲ್ಲಿಯ ಲಯನ್ಸ್ ಬಾಲಭವನದಲ್ಲಿ ನಡೆದ ರಾಷ್ಟ್ರೀಯ ಏಕತಾ ಅಭಿಯಾನದ ಕಾರ್ಯಕ್ರಮದಲ್ಲಿ ಮಾತನಾಡಿದ ಈ ಅಭಿಯಾನದ ಜಿಲ್ಲಾ ಸಂಚಾಲಕ,ಮಾಜಿ ಶಾಸಕ ಸುನಿಲ್ ಹೆಗಡೆ ಮಾಧ್ಯಮಗಳು, ವಿರೋಧಿಗಳು, ಪ್ರತಿಪಕ್ಷಗಳು ಬಿ.ಜೆ.ಪಿ.ಯ ಏಕತಾ ಅಭಿಯಾನವನ್ನು ರಾಜಕೀಯ ಅಭಿಯಾನ, ರಾಜಕೀಯ ಲಾಭದ ತಂತ್ರ ಎಂದು ದೂರುತ್ತಿವೆ. ಆದರೆ ಈ ಅಭಿಯಾನ ಪಕ್ಷ ಮತ್ತು ಜನಸಂಘದ ಧ್ಯೇಯದ ಅಭಿಯಾನ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಬಿ.ಜೆ.ಪಿ. ಜಿಲ್ಲಾ ವಕ್ತಾರ ರವಿಹೆಗಡೆ ಹೂವಿನಮನೆ ಬುದ್ಧಿಜೀವಿಗಳು, ಕೆಲವು ಹಿತಾಸಕ್ತಿಗಳಿಗೆ ಹಿಂದಿನ ಅವಧಿಯ ಎನ್.ಡಿ.ಎ.ಸರ್ಕಾರ ದಿಂದ ಪ್ರಾರಂಭವಾದ ಅಸಹನೆ ಈಗಲೂ ಮುಂದುವರಿದಿದೆ. ಹಿಂದೆ ಅವಲೋಕನ ನಡೆಸಿದ ಪಕ್ಷ ಈಗ ಏಕರೂಪ ನಾಗರಿಕ ಸಂಹಿತೆಗೆ ಅವಶ್ಯವಿರುವ ಒಂದೇ ದೇಶ ಒಂದೇ ಸಂವಿಧಾನದ ಪ್ರಣಾಳಿಕೆಯಂತೆ ಕೆಲಸ ಮಾಡುತ್ತಿದೆ ಎಂದರು.
ಹಿಂದೆ ದೇಶವನ್ನಾಳಿದ ದುರ್ಭಲ ನಾಯಕತ್ವದಿಂದ ಅಖಂಡ ಭಾರತ ದೇಶದ ಕನಸು ನನಸಾಗಿಲ್ಲ ಈಗ ದೇಶಕ್ಕೆ ವಿಶ್ವಗುರುವಿನ ಗೌರವ ದೊರೆಯುತ್ತಿದೆ ಎಂದು ಸಮರ್ಥಿಸಿದರು.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ವಿ.ಎಸ್.ಪಾಟೀಲ್
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮುಂಡಗೋಡಿನ ಬಿ.ಜೆ.ಪಿ.ಮುಖಂಡ ಮತ್ತು ಮಾಜಿ ಶಾಸಕ ವಿ.ಎಸ್ ಪಾಟೀಲ್ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಸದ್ಯದಲ್ಲಿ ಚುನಾವಣೆ ನಡೆಯಲಿರುವ ಯಲ್ಲಾಪುರ ಕ್ಷೇತ್ರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಹಿಂದೆ ಈ ವಾ.ಕ.ರ.ಸಾ.ಸಂಸ್ಥೆಯ ಅಧ್ಯಕ್ಷರಾಗಿದ್ದರು. ಈಗಿನ ಅಧ್ಯಕ್ಷ ವಿ.ಎಸ್.ಪಾಟೀಲ್ ಹಿಂದೆ ಯಲ್ಲಾಪುರ ಕ್ಷೇತ್ರದ ಶಾಸಕರಾಗಿದ್ದರು. ಈಗಲೂ ಅವರು ಉಪಚುನಾವಣೆಯ ಬಿ.ಜೆ.ಪಿ. ಟಿಕೇಟ್ ನ ಪ್ರಬಲ ಆಕಾಂಕ್ಷಿಯಾಗಿದ್ದು ಬಿ.ಜೆ.ಪಿ.ಅನರ್ಹಶಾಸಕ ಹೆಬ್ಬಾರ್ ಅಥವಾ ಅವರ ಕುಟುಂಬಸ್ಥರಿಗೆ ಟಿಕೇಟ್ ನೀಡಿದರೆ ಪಾಟೀಲ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗುತಿತ್ತು. ಬಿ.ಜೆ.ಪಿ. ವಿ.ಎಸ್.ಪಾಟೀಲ್ ರನ್ನು ನಿಗಮದ ಅಧ್ಯಕ್ಷರನ್ನಾಗಿಸುವ ಮೂಲಕ ಮಾಜಿ ಶಾಸಕರ ಅಸಮಾಧಾನಕ್ಕೆ ತಣ್ಣಿರು ಎರಚಿದೆ ಎನ್ನಲಾಗುತ್ತಿದೆ.ಪಾಟೀಲ್‍ರೊಂದಿಗೆ ಇತರ 8 ಜನ ಬಿ.ಜೆ.ಪಿ. ಪ್ರಮುಖರನ್ನು ನಾನಾ ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇಮಕಾತಿ ಆದೇಶ ಮಾಡಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *