ಸಂಚಾರಕ್ಕೆ ಬಾರದ ರಸ್ತೆ- ಸರ್ವಋತು ರಸ್ತೆಗೆ ಆಗ್ರಹ

https://samajamukhi.net/wp-admin/

ಸಿದ್ದಾಪುರದ
ಹಲಗೇರಿ ಗ್ರಾಪಂ ವ್ಯಾಪ್ತಿಯ ಹೊನ್ನೆಕೈ ಊರಿನ ಸಂಪರ್ಕ ರಸ್ತೆಗಳು ಪೂರ್ತಿ ಕಚ್ಚಾ ರಸ್ತೆಗಳಾಗಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅವನ್ನು ಸರ್ವಋತು ರಸ್ತೆಗಳಾಗಿ ಅಭಿವೃದ್ಧಿಪಡಿಸಬೇಕೆಂದು ಹೊನ್ನೆಕೈ ಊರಿನ ಗ್ರಾಮಸ್ಥರು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಆಗ್ರಹಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು ಹೊನ್ನೆಕೈ ಊರಿನಿಂದ ಬೆಳ್ಳೆಮಡಿಕೆ ಮತ್ತು ಬೈಲಳ್ಳಿ ಊರುಗಳನ್ನು ಸಂಪರ್ಕಿಸುವ ಸುಮಾರು ಒಂದೂವರೆ ಕಿ.ಮೀ. ರಸ್ತೆ ಹಾಗೂ ಹೊನ್ನೆಕೈನಿಂದ ಚಂದ್ರಘಟಗಿ ಹಾಗೂ ಹೇಮಗಾರ ಗ್ರಾಮವನ್ನು ಸಂಪರ್ಕಿಸುವ ಸುಮಾರು 2 ಕಿಮೀ.ರಸ್ತೆ ಪೂರ್ತಿ ಕಚ್ಚಾರಸ್ತೆಯಾಗಿದ್ದು ಸಾರ್ವಜನಿಕರ, ವಾಹನಗಳ, ಜಾನುವಾರುಗಳ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ. ಹೊನ್ನೆಕೈನಿಂದ ಚಂದ್ರಘಟಗಿ, ಹೇಮಗಾರ ರಸ್ತೆಯಲ್ಲಿ ಹೊಳೆಗೆ ಸೇತುವೆ ನಿರ್ಮಿಸಲಾಗಿದ್ದರೂ ಮಳೆಯಿಂದಾಗಿ ರಸ್ತೆ ಸಂಪೂರ್ಣ ಹಾಳಾಗಿದ್ದು ಓಡಾಟ ಮಾಡಲು ಸಾಧ್ಯವಾಗದ ಸ್ಥಿತಿ ಇದೆ.
ಆದ್ದರಿಂದ ಈ ರಸ್ತೆಗಳನ್ನು ಸರ್ವಋತು ರಸ್ತೆಗಳಾಗಿ ಅಭಿವೃದ್ಧಿಪಡಿಸಬೇಕೆಂದು ಹೊನ್ನೆಕೈ ಗ್ರಾಮದ ರಾಘವೇಂದ್ರ ಡಿ.ಹೆಗಡೆ, ಗಣಪತಿ ಎನ್.ಹೆಗಡೆ, ಅಚ್ಯುತ ಡಿ.ಹೆಗಡೆ, ತಿಮ್ಮಜ್ಜ ಹೆಗಡೆ,ಗಣಪತಿ ಎಸ್.ಹೆಗಡೆ, ವಿವೇಕಾನಂದ ಎಂ.ಹೆಗಡೆ, ಪ್ರಕಾಶ ಹೆಗಡೆ, ಶ್ರೀಪಾದ ಹೆಗಡೆ,ಗಜಾನನ ಹೆಗಡೆ, ನಾಗಪತಿ ಭಟ್, ಮಹಾಬಲೇಶ್ವರ ಹೆಗಡೆ, ಸಿ.ಎನ್.ಹೆಗಡೆ ಮುಂತಾದವರು ಶಾಸಕರನ್ನು ಕೋರಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *