ಸದ್ಭಾವನಾ ಪ್ರಶಸ್ತಿ ಪ್ರದಾನ

ಭಾಷಾ ಪ್ರಯೋಗಾಲಯ ಉದ್ಘಾಟನೆ- ಸದ್ಭಾವನಾ ಪ್ರಶಸ್ತಿ ಪ್ರದಾನ
ಕಳೆದ 25 ವರ್ಷಗಳಿಂದ ವಿಕಲಚೇತನÀ, ಮುಖ್ಯವಾಗಿ ಅಂಧ ವಿದ್ಯಾರ್ಥಿಗಳ ಬದುಕಿನಲ್ಲಿ ಆತ್ಮವಿಶ್ವಾಸ ಮೂಡಿಸಿ ಅಗತ್ಯವಾದ ಶಿಕ್ಷಣ ನೀಡುತ್ತಿರುವ ಆಶಾ ಕಿರಣ ಟ್ರಸ್ಟಿನ ಕಾರ್ಯ ಶಾಘ್ಲನೀಯ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ಲಾಘಿಸಿದರು.
ಅವರು ಇಲ್ಲಿನ ಆಶಾ ಕಿರಣ ಟ್ರಸ್ಟ್‍ನ ಜಗದ್ಗುರು ಮುರುಘರಾಜೇಂದ್ರ ಅಂಧರ ಶಾಲೆಯಲ್ಲಿ ಡಾ| ಎ.ಪಿ.ಜೆ.ಅಬ್ದುಲ್ ಕಲಾಂ ಜನ್ಮದಿನದಂದು ನೂತನವಾಗಿ ಆರಂಭಿಸಿದ ಭಾಷಾ ಪ್ರಯೋಗಾಲಯ ಉದ್ಘಾಟಿಸಿ, ಸಾಧಕರಿಗೆ ಸದ್ಭಾವನಾ ಪ್ರಶಸ್ತಿ ಪುರಸ್ಕರಿಸಿ ಮಾತನಾಡಿದರು.
ಶಾರೀರಿಕವಾಗಿ ಉತ್ತಮವಾಗಿರುವವರಿಗಿಂತ ವಿಕಲಚೇತನರು ಹೆಚ್ಚಿನ ಸಾಧನೆ ಮಾಡುತ್ತಾರೆ. ಸಮಾಜ ವಿಕಲಚೇತನರನ್ನು ನೋಡುವ ದೃಷ್ಟಿಕೋನ ಭಿನ್ನವಾದದ್ದು. ಅವರಿಗೆ ಕನಿಕರದ ಮಾತಿಗಿಂತ ಅವರ ಸಾಧನೆ ಗುರುತಿಸಿ ಪ್ರೋತ್ಸಾಹಿಸುವದು ಅಗತ್ಯ. ಅವರಿಗೆ ಸೂಕ್ತ ಶಿಕ್ಷಣ, ಸಂಸ್ಕಾರ ನೀಡಿದಾಗ ಅವರು ಇನ್ನಷ್ಟು ಸಾಧನೆ ಮಾಡಲು, ರಾಷ್ಟ್ರದ ಆಸ್ತಿಯಾಗಲು ಸಾಧ್ಯ. ಆ ನಿಟ್ಟಿನಲ್ಲಿ ಆಶಾಕಿರಣ ಟ್ರಸ್ಟ ಹಲವಾರು ದಾನಿಗಳ, ಸಂಸ್ಥೆಗಳ ನೆರವಿನೊಂದಿಗೆ ಉತ್ತಮ ಕಾರ್ಯ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಥಪೂರ್ಣ ಕಾರ್ಯಗಳನ್ನು ನಡೆಸಲಿ.ನಮ್ಮೆಲ್ಲರ ಸಹಾಯ, ಸಹಕಾರ ಸದಾ ಇರುತ್ತದೆ ಎಂದರು.
ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕಿ ಕೆ.ಲೀಲಾವತಿ ಮಾತನಾಡಿ ಅಬ್ದುಲ್ ಕಲಾಂ ಕೇವಲ ವಿಜ್ಞಾನಿಯಾಗಿರದೇ ಸರಳ ಬದುಕಿನ ಮೂಲಕ ಎಲ್ಲರಿಗೆ ಮಾದರಿಯಾಗಿದ್ದರು.
ಮನುಷ್ಯ ಹೇಗೆ ಇರಬೇಕು ಎನ್ನುವುದನ್ನು ತೋರಿಸಿಕೊಟ್ಟವರು. ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶಕರಾಗಿದ್ದರು. ಪ್ರತಿಭೆ ಯಾರ ಸೊತ್ತಲ್ಲ. ಎಲ್ಲರಲ್ಲೂ ಇರುತ್ತದೆ. ಆದರೆ ಅದನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವದು ಮುಖ್ಯ. ಆಶಾಕಿರಣ ಟ್ರಸ್ಟ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಅದು ಇನ್ನಷ್ಟು ಹೆಚ್ಚಿನ ಸಾಧನೆ ಮಾಡಲಿ ಎಂದರು.
ಈ ಸಂದರ್ಭದಲ್ಲಿ ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ, ವಿದ್ಯಾಪೋಷಕ ಕೃಷ್ಣಮೂರ್ತಿ ಭಟ್ಟ ಹೊನ್ನಾವರ ರಿಗೆ ಆಶಾಕಿರಣ ಟ್ರಸ್À್ಟ ಕೊಡಮಾಡುವ ಸದ್ಭಾವನಾ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ವೇದಿಕೆಯಲ್ಲಿ ಜಿಪಂ ಸದಸ್ಯರಾದ ಎಂ.ಜಿ.ಹೆಗಡೆ, ನಾಗರಾಜ ನಾಯ್ಕ, ತಹಸೀಲದಾರ ಗೀತಾ ಸಿ.ಜಿ., ಮುಂತಾದವರಿದ್ದರು.
ಅಂಧರ ಶಾಲೆಯ ವಿದ್ಯಾರ್ಥಿನಿ ರೋಜಾ ಸ್ವಾಗತಿಸಿದಳು. ಟ್ರಸ್ಟಿನ ಉಪಾಧ್ಯಕ್ಷ ಸಿ.ಎಸ್.ಗೌಡರ್ ಪ್ರಾಸ್ತಾವಿಕ ಮಾತನಾಡಿದರು. ಜಿ.ಜಿ.ಹೆಗಡೆ ಬಾಳಗೋಡ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *