ಸದ್ಭಾವನಾ ಪ್ರಶಸ್ತಿ ಪ್ರದಾನ

ಭಾಷಾ ಪ್ರಯೋಗಾಲಯ ಉದ್ಘಾಟನೆ- ಸದ್ಭಾವನಾ ಪ್ರಶಸ್ತಿ ಪ್ರದಾನ
ಕಳೆದ 25 ವರ್ಷಗಳಿಂದ ವಿಕಲಚೇತನÀ, ಮುಖ್ಯವಾಗಿ ಅಂಧ ವಿದ್ಯಾರ್ಥಿಗಳ ಬದುಕಿನಲ್ಲಿ ಆತ್ಮವಿಶ್ವಾಸ ಮೂಡಿಸಿ ಅಗತ್ಯವಾದ ಶಿಕ್ಷಣ ನೀಡುತ್ತಿರುವ ಆಶಾ ಕಿರಣ ಟ್ರಸ್ಟಿನ ಕಾರ್ಯ ಶಾಘ್ಲನೀಯ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ಲಾಘಿಸಿದರು.
ಅವರು ಇಲ್ಲಿನ ಆಶಾ ಕಿರಣ ಟ್ರಸ್ಟ್‍ನ ಜಗದ್ಗುರು ಮುರುಘರಾಜೇಂದ್ರ ಅಂಧರ ಶಾಲೆಯಲ್ಲಿ ಡಾ| ಎ.ಪಿ.ಜೆ.ಅಬ್ದುಲ್ ಕಲಾಂ ಜನ್ಮದಿನದಂದು ನೂತನವಾಗಿ ಆರಂಭಿಸಿದ ಭಾಷಾ ಪ್ರಯೋಗಾಲಯ ಉದ್ಘಾಟಿಸಿ, ಸಾಧಕರಿಗೆ ಸದ್ಭಾವನಾ ಪ್ರಶಸ್ತಿ ಪುರಸ್ಕರಿಸಿ ಮಾತನಾಡಿದರು.
ಶಾರೀರಿಕವಾಗಿ ಉತ್ತಮವಾಗಿರುವವರಿಗಿಂತ ವಿಕಲಚೇತನರು ಹೆಚ್ಚಿನ ಸಾಧನೆ ಮಾಡುತ್ತಾರೆ. ಸಮಾಜ ವಿಕಲಚೇತನರನ್ನು ನೋಡುವ ದೃಷ್ಟಿಕೋನ ಭಿನ್ನವಾದದ್ದು. ಅವರಿಗೆ ಕನಿಕರದ ಮಾತಿಗಿಂತ ಅವರ ಸಾಧನೆ ಗುರುತಿಸಿ ಪ್ರೋತ್ಸಾಹಿಸುವದು ಅಗತ್ಯ. ಅವರಿಗೆ ಸೂಕ್ತ ಶಿಕ್ಷಣ, ಸಂಸ್ಕಾರ ನೀಡಿದಾಗ ಅವರು ಇನ್ನಷ್ಟು ಸಾಧನೆ ಮಾಡಲು, ರಾಷ್ಟ್ರದ ಆಸ್ತಿಯಾಗಲು ಸಾಧ್ಯ. ಆ ನಿಟ್ಟಿನಲ್ಲಿ ಆಶಾಕಿರಣ ಟ್ರಸ್ಟ ಹಲವಾರು ದಾನಿಗಳ, ಸಂಸ್ಥೆಗಳ ನೆರವಿನೊಂದಿಗೆ ಉತ್ತಮ ಕಾರ್ಯ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಥಪೂರ್ಣ ಕಾರ್ಯಗಳನ್ನು ನಡೆಸಲಿ.ನಮ್ಮೆಲ್ಲರ ಸಹಾಯ, ಸಹಕಾರ ಸದಾ ಇರುತ್ತದೆ ಎಂದರು.
ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕಿ ಕೆ.ಲೀಲಾವತಿ ಮಾತನಾಡಿ ಅಬ್ದುಲ್ ಕಲಾಂ ಕೇವಲ ವಿಜ್ಞಾನಿಯಾಗಿರದೇ ಸರಳ ಬದುಕಿನ ಮೂಲಕ ಎಲ್ಲರಿಗೆ ಮಾದರಿಯಾಗಿದ್ದರು.
ಮನುಷ್ಯ ಹೇಗೆ ಇರಬೇಕು ಎನ್ನುವುದನ್ನು ತೋರಿಸಿಕೊಟ್ಟವರು. ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶಕರಾಗಿದ್ದರು. ಪ್ರತಿಭೆ ಯಾರ ಸೊತ್ತಲ್ಲ. ಎಲ್ಲರಲ್ಲೂ ಇರುತ್ತದೆ. ಆದರೆ ಅದನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವದು ಮುಖ್ಯ. ಆಶಾಕಿರಣ ಟ್ರಸ್ಟ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಅದು ಇನ್ನಷ್ಟು ಹೆಚ್ಚಿನ ಸಾಧನೆ ಮಾಡಲಿ ಎಂದರು.
ಈ ಸಂದರ್ಭದಲ್ಲಿ ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ, ವಿದ್ಯಾಪೋಷಕ ಕೃಷ್ಣಮೂರ್ತಿ ಭಟ್ಟ ಹೊನ್ನಾವರ ರಿಗೆ ಆಶಾಕಿರಣ ಟ್ರಸ್À್ಟ ಕೊಡಮಾಡುವ ಸದ್ಭಾವನಾ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ವೇದಿಕೆಯಲ್ಲಿ ಜಿಪಂ ಸದಸ್ಯರಾದ ಎಂ.ಜಿ.ಹೆಗಡೆ, ನಾಗರಾಜ ನಾಯ್ಕ, ತಹಸೀಲದಾರ ಗೀತಾ ಸಿ.ಜಿ., ಮುಂತಾದವರಿದ್ದರು.
ಅಂಧರ ಶಾಲೆಯ ವಿದ್ಯಾರ್ಥಿನಿ ರೋಜಾ ಸ್ವಾಗತಿಸಿದಳು. ಟ್ರಸ್ಟಿನ ಉಪಾಧ್ಯಕ್ಷ ಸಿ.ಎಸ್.ಗೌಡರ್ ಪ್ರಾಸ್ತಾವಿಕ ಮಾತನಾಡಿದರು. ಜಿ.ಜಿ.ಹೆಗಡೆ ಬಾಳಗೋಡ ನಿರೂಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *