ಬಿಜೆಪಿಯಿಂದ ಪಾದಯಾತ್ರೆ

ಮಹಾತ್ಮಾ ಗಾಂಧಿಯವರ 151ನೇ ಜಯಂತಿ ಅಂಗವಾಗಿ ಭಾರತೀಯ ಜನತಾ ಪಕ್ಷವು ಅ.16ರಿಂದ ಸಂಸದರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಹಣಜೀಬೈಲ್ ತಿಳಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ ಅ.16ರಂದು ಬೆಳಿಗ್ಗೆ 9ಕ್ಕೆ ಕಾರವಾರದಲ್ಲಿ ಮಹಾತ್ಮಾಗಾಂಧಿಯವರು ಭೇಟಿ ನೀಡಿದಾಗ ತಂಗಿದ ಹಳದಿಪುರಕರ ಅವರ ಮನೆಯಿಂದ ಪಾದಯಾತ್ರೆ ಆರಂಭಗೊಳ್ಳುವುದು. ಸಂಸದ ಅನಂತಕುಮಾರ ಹೆಗಡೆ ಪಾದಯಾತ್ರೆಗೆ ಚಾಲನೆ ನೀಡುವರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಭಾನುಪ್ರಕಾಶ್,ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಜಿಪಂ ಸದಸ್ಯರು, ಎಲ್ಲ ಹಂತದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಳ್ಳುವರು.16ರಂದು ಕಾರವಾರ ವಿಧಾನಸಭಾ ಕ್ಷೇತ್ರ, ಅ.17ರಂದು ಕುಮಟಾ ವಿಧಾನಸಭಾ ಕ್ಷೇತ್ರ, 18ರಂದು ಭಟ್ಕಳ ವಿಧಾನಸಭಾ ಕ್ಷೇತ್ರ, 19ರಂದು ಸಿದ್ದಾಪುರದಿಂದ ಆರಂಭಿಸಿ ಶಿರಸಿ ವಿಧಾನಸಭಾ ಕ್ಷೇತ್ರ, 20ರಂದು ಬನವಾಸಿಯಿಂದ ಆರಂಭಿಸಿ ಮುಂಡಗೋಡ ವಿಧಾನಸಭಾ ಕ್ಷೇತ್ರ, 21ರಂದು ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಸಮಾರೋಪಗೊಳ್ಳುವುದು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸಭೆಗಳ ಮೂಲಕ ಮಹಾತ್ಮಾಗಾಂಧಿಯವರ ವಿಚಾರಗಳ ಕುರಿತು ಜಾಗೃತಿ ಮೂಡಿಸಲಾಗುವದು ಎಂದರು.
ಕೇಂದ್ರ ಸರಕಾರವು ಈಗಾಗಲೇ ಮಹಾತ್ಮಾಗಾಂಧಿಯವರ ಕನಸುಗಳನ್ನು ನನಸುಮಾಡುವಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವರ ಸ್ವದೇಶಿ ಚಿಂತನೆ, ಅಧಿಕಾರ ವಿಕೇಂದ್ರಿಕರಣ ಮುಂತಾದವುಗಳ ಕುರಿತು ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ.ಸ್ವಚ್ಛತೆಯ ಕುರಿತು ಸ್ವಚ್ಛಭಾರತ ಅಭಿಯಾನದ ಮೂಲಕ ಜನತೆಗೆ ಸ್ವಚ್ಛತೆಯ ಬಗ್ಗೆ ಶ್ರಮದಾನದ ಮೂಲಕ ಜಾಗೃತಿ ಮೂಡಿಸಿದ್ದಲ್ಲದೇ ಜನತೆಗೆ ಶೌಚಾಲಯ ಒದಗಿಸಿಕೊಡುವಲ್ಲಿ ಹೆಚ್ಚಿನ ಗಮನ ನೀಡಿದೆ. ಗ್ರಾಮರಾಜ್ಯದ ಕಲ್ಪನೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪಂಚಾಯತಗಳಿಗೆ ಹೆಚ್ಚಿನ ಅನುದಾನ ಒದಗಿಸಿದ್ದಲ್ಲದೇ, ಅವಕ್ಕೆ ಹೆಚ್ಚಿನ ಅಧಿಕಾರ ನೀಡಿದೆ.
ಮದ್ಯಪಾನ ನಿಷೇಧದ ಕುರಿತು ಸರಕಾರ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ಈವರೆಗೆ ಆಡಳಿತ ನಡೆಸಿದ ಹಲವು ಮಹಾತ್ಮಾ ಗಾಂಧಿಯವರ ಹೆಸರನ್ನು ಬಳಸಿಕೊಂಡಿವೆಯೇ ಹೊರತು ಅವರ ವಿಚಾರಗಳನ್ನು ಕಾರ್ಯಗತಗೊಳಿಸಿಲ್ಲ. ಭಾರತೀಯ ಜನತಾ ಪಕ್ಷ ಮಹಾತ್ಮಾಗಾಧಿಯವರನ್ನು ರಾಜಕಾರಣಕ್ಕೆ ಬಳಸಿಕೊಳ್ಳದೇ ಅವರ ಚಿಂತನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಂದಾಗಿದೆ ಎಂದರು.
ವಿಧಾನಸಭೆಗೆ ನಡೆಯಲಿರುವ ಉಪ ಚುನಾವಣೆಯ ಕುರಿತಂತೆ ಪಕ್ಷವು ಸಿದ್ಧತೆ ನಡೆಸಿದ್ದು ವರಿಷ್ಠರು ನಿರ್ಣಯಿಸಿದವರು ಅಭ್ಯರ್ಥಿಯಾಗುತ್ತಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಈಗಾಗಲೇ ಎಲ್ಲ ಹಂತಗಳಲ್ಲೂ ಸಂಘಟನೆಯನ್ನು ಗಟ್ಟಿಗೊಳಿಸಲಾಗಿದ್ದು ನಮ್ಮ ಅಭ್ಯರ್ಥಿ ಗೆಲುವು ಶತಸಿದ್ಧ. ಪಕ್ಷವು ಯಾರನ್ನೇ ಅಭ್ಯರ್ಥಿ ಮಾಡಿದರೂ ಗೆಲ್ಲಿಸಲು ಸಜ್ಜಾಗಿದ್ದೇವೆ ಎಂದರು.

ಭಾಷಾ ಪ್ರಯೋಗಾಲಯ ಉದ್ಘಾಟನೆ- ಸದ್ಭಾವನಾ ಪ್ರಶಸ್ತಿ ಪ್ರದಾನ
ಕಳೆದ 25 ವರ್ಷಗಳಿಂದ ವಿಕಲಚೇತನÀ, ಮುಖ್ಯವಾಗಿ ಅಂಧ ವಿದ್ಯಾರ್ಥಿಗಳ ಬದುಕಿನಲ್ಲಿ ಆತ್ಮವಿಶ್ವಾಸ ಮೂಡಿಸಿ ಅಗತ್ಯವಾದ ಶಿಕ್ಷಣ ನೀಡುತ್ತಿರುವ ಆಶಾ ಕಿರಣ ಟ್ರಸ್ಟಿನ ಕಾರ್ಯ ಶಾಘ್ಲನೀಯ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ಲಾಘಿಸಿದರು.
ಅವರು ಇಲ್ಲಿನ ಆಶಾ ಕಿರಣ ಟ್ರಸ್ಟ್‍ನ ಜಗದ್ಗುರು ಮುರುಘರಾಜೇಂದ್ರ ಅಂಧರ ಶಾಲೆಯಲ್ಲಿ ಡಾ| ಎ.ಪಿ.ಜೆ.ಅಬ್ದುಲ್ ಕಲಾಂ ಜನ್ಮದಿನದಂದು ನೂತನವಾಗಿ ಆರಂಭಿಸಿದ ಭಾಷಾ ಪ್ರಯೋಗಾಲಯ ಉದ್ಘಾಟಿಸಿ, ಸಾಧಕರಿಗೆ ಸದ್ಭಾವನಾ ಪ್ರಶಸ್ತಿ ಪುರಸ್ಕರಿಸಿ ಮಾತನಾಡಿದರು.
ಶಾರೀರಿಕವಾಗಿ ಉತ್ತಮವಾಗಿರುವವರಿಗಿಂತ ವಿಕಲಚೇತನರು ಹೆಚ್ಚಿನ ಸಾಧನೆ ಮಾಡುತ್ತಾರೆ. ಸಮಾಜ ವಿಕಲಚೇತನರನ್ನು ನೋಡುವ ದೃಷ್ಟಿಕೋನ ಭಿನ್ನವಾದದ್ದು. ಅವರಿಗೆ ಕನಿಕರದ ಮಾತಿಗಿಂತ ಅವರ ಸಾಧನೆ ಗುರುತಿಸಿ ಪ್ರೋತ್ಸಾಹಿಸುವದು ಅಗತ್ಯ. ಅವರಿಗೆ ಸೂಕ್ತ ಶಿಕ್ಷಣ, ಸಂಸ್ಕಾರ ನೀಡಿದಾಗ ಅವರು ಇನ್ನಷ್ಟು ಸಾಧನೆ ಮಾಡಲು, ರಾಷ್ಟ್ರದ ಆಸ್ತಿಯಾಗಲು ಸಾಧ್ಯ. ಆ ನಿಟ್ಟಿನಲ್ಲಿ ಆಶಾಕಿರಣ ಟ್ರಸ್ಟ ಹಲವಾರು ದಾನಿಗಳ, ಸಂಸ್ಥೆಗಳ ನೆರವಿನೊಂದಿಗೆ ಉತ್ತಮ ಕಾರ್ಯ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಥಪೂರ್ಣ ಕಾರ್ಯಗಳನ್ನು ನಡೆಸಲಿ.ನಮ್ಮೆಲ್ಲರ ಸಹಾಯ, ಸಹಕಾರ ಸದಾ ಇರುತ್ತದೆ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *