

ಕ್ಯಾರ್, ಮಳೆ ಅನಾಹುತ:ತೊಂದರೆ
ಉತ್ತರಕನ್ನಡ ಜಿಲ್ಲೆಯಲ್ಲಿ ಕ್ಯಾರ್ ಚಂಡಮಾರುತ ಮತ್ತು ಮಳೆಯ ಪರಿಣಾಮ ಅನೇಕ ಕಡೆ ತೊಂದರೆಯಾಗಿದೆ. ಕರಾವಳಿಯಲ್ಲಿ ಜನಜೀವನ ಸಂಪೂರ್ಣ ಹದಗೆಟ್ಟಿದೆ. ಮಲೆನಾಡಿನಲ್ಲಿ ಮಳೆಗಾಳಿ ಜೋರಾಗಿದೆ ಅಲ್ಲಲ್ಲಿ ಮನೆ. ಕೊಟ್ಟಿಗೆ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದ್ದರೆ, ಸಿದ್ದಾಪುರ ನಗರದ ಹೊನ್ನೆಗುಂಡಿಯಲ್ಲಿ ಮುರಿದುಬಿದ್ದ ವಿದ್ಯುತ್ ತಂತಿಗೆ ಸಿಲುಕಿ ಜವಾರಿ ಆಕಳೊಂದು ಅಸುನೀಗಿದೆ.

ಅಂಗನವಾಡಿ ಶಿಕ್ಷಕಿಯರು,
ಸಹಾಯಕಿಯರಿಗೆ ಗೌರವಧನ ಹೆಚ್ಚಳ
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ರಾಜ್ಯ ಸರ್ಕಾರದ ದೀಪಾವಳಿ ಉಡುಗೋರೆ ದೊರೆತಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ಮಾಸಿಕ ವೇತನ ಹೆಚ್ಚಳ ಮತ್ತು ಸಹಾಯಕಿಯರಿಗೆ ಒಂದು ಸಾವಿರ ಹೆಚ್ಚಳ ಮಾಡಿದೆ. ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಎಂಟುಸಾವಿರ ಮತ್ತು ಸಹಾಯಕಿಯರಿಗೆ ಮಾಸಿಕ ನಾಲ್ಕು ಸಾವಿರ ರೂ.ಗೌರವಧನ ನೀಡಲಾಗುತಿತ್ತು.
ಆಯುಷ್ಮಾನಭಾರತ: ಜಿಲ್ಲಾ ಆಸ್ಫತ್ರೆ ಪತ್ರದ್ದೇ ರಗಳೆ
ಸರ್ಕಾರದ ಉಚಿತ ವೈದ್ಯಕೀಯ ಸೇವೆಯ ಆಯುಷ್ಮಾನ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಗಳ ಅನುಕೂಲಕ್ಕೆ ಜಿಲ್ಲಾ ಆಸ್ಫತ್ರೆಯ ಪತ್ರ ಕಡ್ಡಾಯ ಮಾಡಿರುವ ನಿಯಮಕ್ಕೆ ತೀವೃ ವಿರೋಧ ವ್ಯಕ್ತವಾಗಿದೆ.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
