ಎಲ್ಲೆಡೆ ಬಡವರ ಬಂಧುವಿನ ಜಯಂತಿ ಆಚರಣೆ

ಬಡವರು, ಅಸಹಾಯಕರಿಗೆ ಸಹಾಯ ಮಾಡುವ ಮೂಲಕ ಎಲ್ಲೆಡೆ ಬಡವರ ಬಂಧುವಿನ ಜಯಂತಿ ಆಚರಣೆ
ಮಾಜಿ ಮುಖ್ಯಮಂತ್ರಿ ದಿ.ಎಸ್. ಬಂಗಾರಪ್ಪನವರ 87 ನೇ ಹುಟ್ಟುಹಬ್ಬದ ಅಂಗವಾಗಿ ಇಂದು ರಾಜ್ಯಾದ್ಯಂತ ಬಂಗಾರಪ್ಪ ಜಯಂತ್ಯುತ್ಸವ ಆಚರಿಸಲಾಯಿತು.
ಸೊರಬದಲ್ಲಿ ಅವರ ಸಮಾಧಿ ಬಳಿ ನಡೆದ ಸರಳ ಸಮಾರಂಭದಲ್ಲಿ ಪಾಲ್ಗೊಂಡ ಅವರ ಹಿತೈಶಿಗಳು, ಅಭಿಮಾನಿಗಳು ಧಾರ್ಮಿಕ ವಿಧಿಗಳ ಮೂಲಕ ಜನ್ಮದಿನ ಆಚರಿಸಿದರು. ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ದಲಿತರು, ಧಮನಿತರು, ವಯೋವೃದ್ಧರುಗಳಿಗೆ ಹಣ್ಣು ಹಾಲು ವಿತರಿಸುವ ಮೂಲಕ ಬಂಗಾರಪ್ಪ ದಿನಾಚರಣೆ ನಡೆಸಲಾಯಿತು.
ಶಿರಸಿಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪಂಡಿತ್ ಸಾರ್ವಜನಿಕ ಆಸ್ಫತ್ರೆಯಲ್ಲಿ ಹಣ್ಣು-ಹಾಲು ವಿತರಿಸಿ ಬಂಗಾರಪ್ಪ ಹುಟ್ಟುಹಬ್ಬ ಆಚರಿಸಿದರೆ, ನಗರದ ಸುಯೋಗಾಶ್ರಮದಲ್ಲಿ ಬಂಗಾರಪ್ಪ ಅಭಿಮಾನಿಗಳು ವಯೋವೃದ್ಧರಿಗೆ ಹಣ್ಣು ಮತ್ತು ಸಿಹಿ ವಿತರಿಸುವ ಮೂಲಕ ಬಂಗಾರಪ್ಪ ಜಯಂತಿ ಆಚರಿಸಿದರು.
ಸಿದ್ಧಾಪುರದ ಮುಗದೂರಿನ ಪ್ರಚಲಿತ ಆಶ್ರಮದಲ್ಲಿ ಹಿರಿಯರಿಗೆ ಊಟೋಪಚಾರ ಮಾಡುವ ಮೂಲಕ ಬಂಗಾರಪ್ಪ ಜಯಂತಿ ನಡೆಸಲಾಯಿತು.

ಬಂಗಾರಪ್ಪ 87 ಎಲ್ಲೆಡೆ ಆಚರಣೆ
ಸಿದ್ದಾಪುರ ತಾಲೂಕು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಬಂಗಾರಪ್ಪನವರ ಹುಟ್ಟುಹಬ್ಬದ ನಿಮಿತ್ತ ನಾನಾ ಕಾರ್ಯಕ್ರಮಗಳು ನಡೆದವು.
ಸೊರಬದ ಸಾರೆಕೊಪ್ಪ ಬಂಗಾರಪ್ಪ ಕುಬಟೂರಿನಲ್ಲಿ ಹುಟ್ಟಿ 90 ರ ದಶಕದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬಂಗಾರಪ್ಪ ಸವೆಸಿದ ಹಾದಿ ಕಠಿಣ. ಸಂಘಟನೆ,ಹೋರಾಟ, ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಂಗಾರಪ್ಪ ಬದುಕಿದ್ದರೆ ಅ.26 ಕ್ಕೆ 87ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದರು.
ಬಂಗಾರಪ್ಪ ಭೌತಿಕವಾಗಿ ಇಲ್ಲದಿದ್ದರೂ ಅವರ ನೆನಪಿನಲ್ಲಿ ಸಾಗರ ಸೊರಬ, ಶಿರಸಿ-ಸಿದ್ದಾಪುರ ಸೇರಿದಂತೆ ಅನೇಕ ಕಡೆ ಬಂಗಾರಪ್ಪ ಜಯಂತಿ ನಡೆಯುತ್ತಿದೆ.ಅಬಲರು,ಅಸಹಾಯಕರಿಗೆ ನೆರವು ನೀಡುವ ಮೂಲಕ ಅವರ ಅಭಿಮಾನಿಗಳು ಬಂಗಾರಪ್ಪ ಜಯಂತಿ ಆಚರಿಸಿದ್ದು ವಿಶೇಶ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *