ತಣ್ಣಗಾದ ದೀಪಾವಳಿ!

ಅಕಾಲದಮಳೆಯ ನಡುವೆ
ತಣ್ಣಗಾದ ದೀಪಾವಳಿ
ಮಲೆನಾಡಿನ ದೊಡ್ಡ ಹಬ್ಬ ದೀಪಾವಳಿಯ ಸಂಬ್ರಮಕ್ಕೆ ಮಳೆ ತಣ್ಣೀರೆರಚಿದೆ. ಕಳೆದ ಒಂದು ವಾರದಿಂದ ಪ್ರತಿನಿತ್ಯ ಬೀಳುತ್ತಿರುವ ಮಳೆ
ರೈತರನ್ನು ಕಂಗಾಲು ಮಾಡಿದೆ. ಮಳೆ-ಬೆಳೆ ಆಶ್ರಯಿಸಿರುವ ರೈತರು ಸೊಂಪಾಗಿದ್ದರೆ ಹಬ್ಬಕ್ಕೆ ಮಜಾ. ಆದರೆ ಈ ವರ್ಷದ ಮಳೆ ರೈತರ ಖುಷಿ-ಸಂಬ್ರಮ ಕಸಿದುಕೊಂಡಿದೆ.
ರೈತರು ತಾವು ಬೆಳೆದ ಫಸಲನ್ನೇ ವಿಭಿನ್ನವಾಗಿ ಪೂಜಿಸುವ ಹಬ್ಬಕ್ಕೆ ಅಡಿಕೆ, ಅಡಿಕೆಯ ಹಿಂಗಾರ ತೆಗೆಯಲು ಈ ಅಕಾಲದ ಮಳೆ ಅನುಕೂಲ ಮಾಡಿಕೊಟ್ಟಿಲ್ಲ. ಸಿದ್ಧಾಪುರದಂಥ ಚಿಕ್ಕ ನಗರದಲ್ಲಿ ಕೂಡಾ ಅಡಿಕೆ, ಹಿಂಗಾರ, ಎಲೆ ಸೇರಿದಂತೆ ದೀಪಾವಳಿ ಫಲಾವಳಿಗಳು ಮಾರುಕಟ್ಟೆಪ್ರವೇಶಿಸಿವೆ. ರೈತರು ಅಡಿಕೆ,ಸಿಂಗಾರ ತೆಗೆಯುವ ಕೂಲಿಗೆ ಕೊಡುವ ವೇತನದಲ್ಲಿ ನಗರದಲ್ಲಿ ಈ ವಸ್ತುಗಳು ಸಿಗುತ್ತವೆ ಎಂದುಕೊಂಡು ಖರೀದಿಯಲ್ಲಿ ತೊಡಗಿದ್ದ ರೈತರ ನಿರುತ್ಸಾಹದ ಹಿಂದೆ ಈ ವರ್ಷದ ಮಳೆಯ ಪ್ರಭಾವವಿದೆ.
ಖರೀದಿ ಜೋರು-
ಮೂರು-ನಾಲ್ಕು ದಿವಸಗಳ ದೀಪಾವಳಿ ಈ ವರ್ಷಮೂರೇ ದಿನಗಳಿಗೆ ಸೀಮಿತವಾಗಿರುವುದು ಈ ವರ್ಷದ ವಿಶೇಶ. ಪ್ರತಿವರ್ಷ ಅಮವಾಸ್ಯೆಯ ಹಿಂದಿನ ದಿವಸದಿಂದ ವರ್ಷತೊಡಕಿನ ವರೆಗೆ ಗ್ರಾಮೀಣ ಜನರಿಗೆ ನಾಲ್ಕೈದು ದಿನಗಳು, ನಗರದ ಜನರಿಗೆ ಮೂರು ದಿವಸಗಳ ಹಬ್ಬ ನಡೆಯುವುದು ವಾಡಿಕೆ.
ಆದರೆ ಈ ವರ್ಷ ಅಮವಾಸ್ಯೆ, ಮರುಪಾಡ್ಯಗಳು ತಳುಕುಹಾಕಿಕೊಂಡಿರುವುದರಿಂದ ಬಹುತೇಕ ಕಡೆ ಗೋಪೂಜೆ ಸೋಮುವಾರವೇ ನಡೆಯುತ್ತಿದೆ. ವೈದಿಕರು ರಾಕ್ಷಸನನ್ನು ಸಂಹರಿಸುವ ರೀತಿ, ಅಬ್ರಾಹ್ಮಣರು ತಮ್ಮ ದ್ರಾವಿಡದೊರೆ ಬಲೀಂದ್ರನನ್ನು ಆರಾಧಿಸುವ ರೀತಿ-ನೀತಿಗಳಿಂದ ಆಚರಿಸುವ ಈ ಹಬ್ಬ ಮಾಂಸಾಹಾರ,ಸಿಹಿತಿನಿಸುಗಳ ವಿಶೇಶದ ಉತ್ಸವ.
ಮಲೆನಾಡಿನ ಕೆಲವು ಕಡೆ ಗೋಪೂಜೆ, ದನ ಬೆರೆಸುವ ಮೊದಲು ಪ್ರಾಣಿಬಲಿಕೊಟ್ಟು ಈ ಹಬ್ಬವನ್ನು ಆಚರಿಸುತ್ತಾರೆ. ಬದಲಾಗುತ್ತಿರುವ ರೀತಿ-ನೀತಿ, ಆಧುನಿಕತೆಯ ಸ್ಫರ್ಶ, ಪಶುಪಾಲನೆಯ ವಿರಳತೆಗಳ ನಡುವೆ ಈ ವರ್ಷದ ದೀಪಾವಳಿಗೆ ಮಳೆಯ ರಗಳೆ ಕೂಡಾ ಸೇರಿದೆ. ಆದರೆ ಹೂವು,ಹಣ್ಣು, ಮೀನು-ಮಾಂಸ ಖರೀದಿಯ ಪ್ರಮಾಣ,ಉತ್ಸಾಹ ತಗ್ಗಿಲ್ಲ.

ಕಾಗೋಡುತಿಮ್ಮಪ್ಪನವರಿಗೆ
35 ವರ್ಷಗಳಲ್ಲಿನ
ಎರಡು ವಿಭಿನ್ನ ಪತ್ರಗಳು
ದೀವರು ಈಡಿಗರಲ್ಲ. ಎಂದು ಅನೇಕ ವರ್ಷಗಳಿಂದ ಚರ್ಚೆ, ಸಂವಾದ, ವಿವಾದಗಳೆಲ್ಲಾ ನಡೆಯುತ್ತಿವೆ. 1970-80 ರ ದಶಕದಲ್ಲಿ ದೀವರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ಗೋಪಾಲಗೌಡರ ನೇತೃತ್ವದಲ್ಲಿ ಸದನದ ಒಳಗೆ, ಹೊರಗೂ ಚರ್ಚೆ ನಡೆದು ಬಂಗಾರಪ್ಪ, ಕಾಗೋಡು ತಿಮ್ಮಪ್ಪನವರಿಂದಾಗಿ ದೀವರ ಪಂಗಡ ಇತರ ಹಿಂದುಳಿದವರ ಪಟ್ಟಿಯಲ್ಲಿ ಸೇರ್ಪಡೆಯಾಯಿತು. ಇದೇ ಸಮಯದಲ್ಲಿ ರಾಜ್ಯದ ಕೆಲವೆಡೆ ಅನೇಕರು ಈ ಚರ್ಚೆ ಸಂವಾದಗಳಲ್ಲಿ ಪಾಲ್ಗೊಂಡು ‘ದೀವರ’ ವಿಚಾರವನ್ನು ಸರ್ಕಾರ, ಸಾರ್ವಜನಿಕರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು.
ರೈತ ಹೋರಾಟಗಾರ ದಿನಕರ ದೇಸಾಯಿಯವರಿಗೆ ತಾಲೂಕಿನಲ್ಲೇ ಮೊಟ್ಟಮೊದಲ ಬಾರಿಗೆ ವೇದಿಕೆ ಕಲ್ಪಿಸಿದ ನಮ್ಮೂರು ಕೋಲಶಿರ್ಸಿ, ದೀವರು ನಾಮಧಾರಿಗಳ ಸಂಘಟನೆಗೆ ನಮ್ಮಜ್ಜ ಕನ್ನಾ ಕೆ. ನಾಯ್ಕರ ನೇತೃತ್ವದಲ್ಲಿ ಸಂಘಟನೆ ಪ್ರಾರಂಭಿಸಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *