ಅನಂತ ಆಶೀಸರ ನೇಮಕ ರದ್ಧು ಮಾಡಲು ಬಿ.ಜೆ.ಪಿ.ಒಪ್ಪಿಗೆ?

ನಿನ್ನೆಯಷ್ಟೇ ರಾಜ್ಯದ ನೂತನ ಜೀವವೈವಿಧ್ಯತಾ ಮಂಡಳಿ ಅಧ್ಯಕ್ಷರಾಗಿ ರಾಜ್ಯಸರ್ಕಾರದಿಂದ ನೇಮಕವಾಗಿದ್ದ ಅನಂತ ಹೆಗಡೆ ಆಶೀಸರರ ನೇಮಕಾತಿ ಆದೇಶ ರದ್ದುಪಡಿಸಲು ರಾಜ್ಯ ಬಿ.ಜೆ.ಪಿ. ಸಮ್ಮತಿಸಿದೆ ಎಂದು ಗೊತ್ತಾಗಿದೆ.
ಇಂದು ತಮ್ಮನ್ನು ಭೇಟಿ ಮಾಡಿ ಈ ನೇಮಕ ರದ್ಧುಮಾಡಬೇಕು ಎಂದು ಕೋರಿದ ಉತ್ತರಕನ್ನಡ ಜಿಲ್ಲಾ ಬಿ.ಜೆ.ಪಿ. ಘಟಕಕ್ಕೆ ಬಿ.ಜೆ.ಪಿ.ರಾಜ್ಯ ಅಧ್ಯಕ್ಷ ವಿನಯ್ ಕುಮಾರ ಕಟೀಲು ಭರವಸೆ ನೀಡಿದ್ದು ಮತದಾರರು,ಜನಸಂಖ್ಯೆ, ಸರ್ಕಾರ ಅಧಿಕಾರದಲ್ಲಿ ಹವ್ಯಕರು ಸೇರಿದಂತೆ ಬ್ರಾಹ್ಮಣರ ಪ್ರಾತಿನಿಧ್ಯ ಉಳಿದವರ ಸಂಖ್ಯೆ,ಅಧಿಕಾರ, ಪ್ರಾತಿನಿಧ್ಯಗಳ ಅನುಪಾತದ ಮಾಹಿತಿ ನೀಡಿದ್ದು ಜಿಲ್ಲೆಯ ನಾಲ್ಕನೇ ಬಹುಸಂಖ್ಯಾತ ಸಮೂದಾಯಕ್ಕೆ ಎಲ್ಲರಿಗಿಂತ ಹೆಚ್ಚು ಪ್ರಾತಿನಿಧ್ಯ ನೀಡಿರುವ ವಿದ್ಯಮಾನಗಳ ಬಗ್ಗೆ ಬಿ.ಜೆ.ಪಿ.ರಾಜ್ಯಾಧ್ಯಕ್ಷರು ಚರ್ಚಿಸಿದ್ದಾರೆ. ಜಿಲ್ಲೆಯ ಬಹುಸಂಖ್ಯಾತರ ಪ್ರತಿನಿಧಿಗಳು, ಮತದಾರರು ಏಕಜಾತಿ ನಾಯಕತ್ವ, ಏಕಸ್ವಾಮ್ಯದ ಬಗ್ಗೆ ಜಿಲ್ಲೆಯಲ್ಲಿರುವ ವಿರೋಧವನ್ನು ಗಮನಿಸಿ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮನವರಿಕೆ ಮಾಡಿ ಅನಂತ ಹೆಗಡೆ ಆಶೀಸರರ ಆಯ್ಕೆ ರದ್ದುಮಾಡಲು ವಿನಂತಿಸುವುದಾಗಿ ನಿಯೋಗಕ್ಕೆ ಅಧ್ಯಕ್ಷರು ಭರವಸೆ ನೀಡಿರುವುದನ್ನು ಖಚಿತಮೂಲಗಳು ಸಮಾಜಮುಖಿ ಗೆ ತಿಳಿಸಿವೆ.

ಸಮರ್ಥ ಲೋಕಾಯುಕ್ತರ ನಿರ್ಗಮನ,ವಿಷಾದ
ನಿವೃತ್ತ ಲೋಕಾಯುಕ್ತರಾಗಿದ್ದ ವೆಂಕಟಾಚಲ ತಮ್ಮ 90ನೇ ವಯಸ್ಸಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾಗಿದ್ದ ಎನ್. ವೆಂಕಟಾಚಲರನ್ನು 2000ದ ದಶಕದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣರ ಸರ್ಕಾರ ನೇಮಕ ಮಾಡಿತ್ತು.
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಅಸ್ಥಿತ್ವಕ್ಕೆ ಬಂದು 2ದಶಕಗಳು ಕಳೆದಿದ್ದರೂ ರಾಜ್ಯದಲ್ಲಿ ಲೋಕಾಯುಕ್ತ ಎನ್ನುವ ಸಂಸ್ಥೆಯೊಂದಿದೆ,ಅದಕ್ಕೆ ನಿವೃತ್ತ ನ್ಯಾಯಮೂರ್ತಿಗಳು ಮುಖ್ಯಸ್ಥರಾಗಿರುತ್ತಾರೆ ಎಂದು ಪ್ರಚಾರಕ್ಕೆ ಬಂದಿದ್ದೇ 2000ನೇ ಇಸ್ವಿಯ ನಂತರ. ಈ ಅವಧಿಯಲ್ಲಿ ಲೋಕಾಯುಕ್ತರಾಗಿ ಚುರುಕಿನಿಂದ ಕೆಲಸಮಾಡುತ್ತಾ ಬೃಷ್ಟರನ್ನು ಶಿಕ್ಷಿಸಿದ ಎನ್ ವೆಂಕಟಾಚಲರ ಅವಧಿಯಲ್ಲಿ ರಾಜ್ಯದ ಲೋಕಾಯುಕ್ತದ ಒಂದು ದಿವಸದ ಪ್ರಕರಣಗಳ ಸಂಖ್ಯೆ 25-30 ರಿಂದ 300 ಕ್ಕೇರಿತು. ಯಾವ ಹಂತದ ಅಧಿಕಾರಿಗಳನ್ನೂ ಏಕವಚನದಲ್ಲೇ ಏನಯ್ಯಾ ಎಂದು ಸಂಭೋದಿಸುತಿದ್ದ ವೆಂಕಟಾಚಲ ಜಿಲ್ಲೆಗಳಿಗೆ ಬರುತ್ತಾರೆಂದರೆ ಅಧಿಕಾರಿಗಳ ತೊಳ್ಳೆ ನಡುಗುತಿತ್ತು………..

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *