ಯಕ್ಷಗಾನ ತಜ್ಞೆ ಡಾ. ವಿಜಯನಳಿನಿರಮೇಶ್‍ರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಯಕ್ಷಗಾನ ತಜ್ಞೆ ಡಾ. ವಿಜಯನಳಿನಿರಮೇಶ್‍ರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಗುರುಗಣೇಶ್‍ಭಟ್, ರೇಷ್ಮಾ ಉಮೇಶ್, ಮೋಹನ ಗೌಡ, ಗಣಪತಿ ನಾಯ್ಕರಿಗೆ ಯುವ ಪುರಸ್ಕಾರ
ಹಿರಿಯ ಸಾಹಿತಿ, ಯಕ್ಷಗಾನ ತಜ್ಞೆ ಡಾ. ವಿಜಯನಳಿನಿ ರಮೇಶ್ 2019ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಸಮಿತಿ ಗುರುತಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರೂ. 15,000, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ, ಸನ್ಮಾನವನ್ನೊಳ ಗೊಂಡಿರುತ್ತದೆ.
ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಮಾಡು ವುದರೊಟ್ಟಿಗೆ ನಾಲ್ವರು ಉದಯೋನ್ಮುಖ ಬರಹಗಾರರಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರ ನೀಡುತ್ತಿದೆ. ಈ ಪುರಸ್ಕಾರಕ್ಕೆ ಯಲ್ಲಾಪುರದ ಗುರುಗಣೇಶ ಭಟ್ಟ ಗುಡ್ಬಳ್ಳಿ, ಭಟ್ಕಳದ ರೇಷ್ಮಾ ಉಮೇಶ್, ಕುಮಟಾದ ಮೋಹನ ಗೌಡ ಹೆಗ್ರೆ, ಹಳಿಯಾಳದ ಗಣಪತಿ ಜಿ. ನಾಯ್ಕ ಆಯ್ಕೆ ಆಗಿದ್ದಾರೆ.
ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರವು ಫಲಕ, ಪುಸ್ತಕವನ್ನೊಳಗೊಂಡಿರುತ್ತದೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.10 ರಂದು ರವಿವಾರ ಕುಮಟಾದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕ.ಸಾ.ಪ.ಅಧ್ಯಕ್ಷ ಅರವಿಂದ ಕರ್ಕಿಕೋಡಿ ಮಾಹಿತಿ ನೀಡಿದ್ದಾರೆ.
2016 ರಿಂದ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರತಿ ವರ್ಷ ಹಿರಿಯ ಸಾಹಿತಿಯೊಬ್ಬರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ನಾಲ್ವರು ಉದಯೋನ್ಮುಖ ಬರಹಗಾರರಿಗೆ ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರ ನೀಡುತ್ತ ಬಂದಿದೆ. ಇಲ್ಲಿಯವರೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಿರಿಯ ಸಾಹಿತಿಗಳಾದ ಸುಮುಖಾನಂದ ಜಲವಳ್ಳಿ, ಆರ್.ಪಿ.ಹೆಗಡೆ ಸೂಳಗಾರ, ಶಾಂತಾರಾಮ ನಾಯಕ ಹಿಚಕಡ ಅವರಿಗೆ ಸಂದಿದೆ ಎಂದು ಕರ್ಕಿಕೋಡಿ ಹೇಳಿದ್ದಾರೆ.
ಡಾ. ವಿಜಯನಳಿನಿ ರಮೇಶ್‍ರ ಸಂಕ್ಷಿಪ್ತ ಪರಿಚಯ :
2019ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದ ವಿಜಯನಳಿನಿ ರಮೇಶ್ ಅವರು ಶಿರಸಿಯ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅವರು ತಾಳಮದ್ದಳೆ’, ‘ಯುಗಧರ್ಮ’, ‘ಹೊಸ್ತೋಟಾ ಮಂಜುನಾಥ ಭಾಗವತರು’, ‘ಮೌಖಿಕ ಕಲೆಯಲ್ಲಿ ಸಾಹಿತ್ಯ ಸೌಂದರ್ಯ’, ‘ಪಶ್ಚಿಮ ಕರ್ನಾಟಕದ ದೇಸೀ ಸಾಂಸ್ಕøತಿಕ ಪರಂಪರೆ ಹಾಗೂ ಪ್ರವಾಸೋದ್ಯಮ’, ‘ಶಿರಸಿ ತಾಲೂಕಿನ ಲಲಿತ ಕಲೆಗಳು’ ಮುಂತಾದ ಕೃತಿಗಳನ್ನು ನೀಡಿದ್ದಾರೆ. ‘ಅಷ್ಟಬಂಧ’, ‘ಸಾಂತ್ವನ’, ‘ಯಕ್ಷಗಾನ ಪ್ರಸಂಗಗಳು’, ‘ಮಾವಿನಗುಂಡಿ ಮಹಿಳಾ ಸತ್ಯಾಗ್ರಹ’ ಮುಂತಾದ ಕೃತಿಗಳನ್ನು ಸಂಪಾದಿಸಿದ್ದಾರೆ.
ಡಾ. ವಿಜಯನಳಿನಿ ರಮೇಶ್‍ರ ‘ತಾಳಮದ್ದಳೆಯಲ್ಲಿ ಸೃಜನಶೀಲತೆ’ ಎಂಬ ಸಂಪ್ರಬಂಧಕ್ಕೆ ಕರ್ನಾಟಕ ವಿಶ್ವಾವಿದ್ಯಾಲಯ ಡಾಕ್ಟರೇಟ್ ನೀಡಿದೆ. ಕನ್ನಡ ಸಾಹಿತ್ಯ ಹಾಗೂ ಜಾನಪದ ಎರಡೂ ವಿಭಾಗಗಳಲ್ಲಿ ಕ.ವಿ.ವಿ.ಯಿಂದ ಮಾನ್ಯತೆ ಪಡೆದ ಅವರು ಗಮಕ ಕಾರ್ಯಕ್ರಮಗಳಲ್ಲಿ ವಾಖ್ಯಾನ ಮಾಡುತ್ತಿದ್ದಾರೆ.
ಂiÀiಕ್ಷಗಾನದಲ್ಲೂ ಪಾತ್ರ ನಿರ್ವಹಿಸಿದ ಡಾ.ವಿಜಯನಳಿನಿ ರಮೇಶ್ ಅವರು ಮಧುರೈ ಕಾಮರಾಜ ವಿಶ್ವ ವಿದ್ಯಾಲಯದ ತೆಲಗು ವಿಭಾಗದಲ್ಲಿ ನಡೆದ ಯಕ್ಷಗಾನ ಸಮ್ಮೇಳನದಲ್ಲಿ ಪ್ರಬಂಧ ಮಂಡನೆ ಮಾಡಿ ಮನ್ನಣೆ ಪಡೆದಿದ್ದಾರೆ.
‘ಮೌಖಿಕ ಕಲೆಯಲ್ಲಿ ಸಾಹಿತ್ಯ ಸೌಂದರ್ಯ’ ಕೃತಿಗೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ, ಬನವಾಸಿಯ ಕದಂಬ ಸೈನ್ಯದಿಂದ ಕದಂಬ ಸೇವಾ ರತ್ನ ಪ್ರಶಸ್ತಿ, ಸಾಗರ ಸುತ್ತ ಸಹೃದಯಾ ಪ್ರಶಸ್ತಿ ಮುಂತಾದವುಗಳನ್ನು ಸ್ವೀಕರಿಸಿ ಮನ್ನಣೆ ಪಡೆದಿದ್ದಾರೆ.
ಯಕ್ಷಗಾನ, ಬಯಲಾಟ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ ಡಾ. ವಿಜಯನಳಿನಿ ಅವರು 1982ರಲ್ಲಿ ಶಿರಸಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಘಟನೆಯಲ್ಲಿ ಮಹಿಳಾ ವಿಭಾಗದ ಸಂಚಾಲಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಶಿರಸಿಯ ಸಾಂತ್ವನ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಮುನ್ನಡೆಸಿಕೊಂಡು ಹೋಗುತ್ತಿರುವುದನ್ನೂ ಕೂಡ ಇಲ್ಲಿ ವಿಶೇಷವಾಗಿ ಗಮನಿಸಬಹುದು ಎಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರು ತಿಳಿಸಿದ್ದಾರೆ.

ಅನಂತ ಆಶೀಸರ ನೇಮಕ ರದ್ಧು ಮಾಡಲು ಬಿ.ಜೆ.ಪಿ.ಒಪ್ಪಿಗೆ?
ನಿನ್ನೆಯಷ್ಟೇ ರಾಜ್ಯದ ನೂತನ ಜೀವವೈವಿಧ್ಯತಾ ಮಂಡಳಿ ಅಧ್ಯಕ್ಷರಾಗಿ ರಾಜ್ಯಸರ್ಕಾರದಿಂದ ನೇಮಕವಾಗಿದ್ದ ಅನಂತ ಹೆಗಡೆ ಆಶೀಸರರ ನೇಮಕಾತಿ ಆದೇಶ ರದ್ದುಪಡಿಸಲು ರಾಜ್ಯ ಬಿ.ಜೆ.ಪಿ. ಸಮ್ಮತಿಸಿದೆ ಎಂದು ಗೊತ್ತಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *