ಸಮರ್ಥ ಲೋಕಾಯುಕ್ತರ ನಿರ್ಗಮನ,ವಿಷಾದ

ನಿವೃತ್ತ ಲೋಕಾಯುಕ್ತರಾಗಿದ್ದ ವೆಂಕಟಾಚಲ ತಮ್ಮ 90ನೇ ವಯಸ್ಸಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾಗಿದ್ದ ಎನ್. ವೆಂಕಟಾಚಲರನ್ನು 2000ದ ದಶಕದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣರ ಸರ್ಕಾರ ನೇಮಕ ಮಾಡಿತ್ತು.
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಅಸ್ಥಿತ್ವಕ್ಕೆ ಬಂದು 2ದಶಕಗಳು ಕಳೆದಿದ್ದರೂ ರಾಜ್ಯದಲ್ಲಿ ಲೋಕಾಯುಕ್ತ ಎನ್ನುವ ಸಂಸ್ಥೆಯೊಂದಿದೆ,ಅದಕ್ಕೆ ನಿವೃತ್ತ ನ್ಯಾಯಮೂರ್ತಿಗಳು ಮುಖ್ಯಸ್ಥರಾಗಿರುತ್ತಾರೆ ಎಂದು ಪ್ರಚಾರಕ್ಕೆ ಬಂದಿದ್ದೇ 2000ನೇ ಇಸ್ವಿಯ ನಂತರ. ಈ ಅವಧಿಯಲ್ಲಿ ಲೋಕಾಯುಕ್ತರಾಗಿ ಚುರುಕಿನಿಂದ ಕೆಲಸಮಾಡುತ್ತಾ ಬೃಷ್ಟರನ್ನು ಶಿಕ್ಷಿಸಿದ ಎನ್ ವೆಂಕಟಾಚಲರ ಅವಧಿಯಲ್ಲಿ ರಾಜ್ಯದ ಲೋಕಾಯುಕ್ತದ ಒಂದು ದಿವಸದ ಪ್ರಕರಣಗಳ ಸಂಖ್ಯೆ 25-30 ರಿಂದ 300 ಕ್ಕೇರಿತು. ಯಾವ ಹಂತದ ಅಧಿಕಾರಿಗಳನ್ನೂ ಏಕವಚನದಲ್ಲೇ ಏನಯ್ಯಾ ಎಂದು ಸಂಭೋದಿಸುತಿದ್ದ ವೆಂಕಟಾಚಲ ಜಿಲ್ಲೆಗಳಿಗೆ ಬರುತ್ತಾರೆಂದರೆ ಅಧಿಕಾರಿಗಳ ತೊಳ್ಳೆ ನಡುಗುತಿತ್ತು.
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಬಂದು ಬೃಷ್ಟರಿಗೆ ಬಲೆ ಬೀಸಿದ್ದ ವೆಂಕಟಾಚಲ ಕಾರವಾರಕ್ಕೆ ಬಂದಿದ್ದಾಗ ನಾವೆಲ್ಲಾ ಹೊಸ ವರದಿಗಾರರು. ಕಾರವಾರದ ಆಸ್ಫತ್ರೆ, ಸರ್ಕಾರಿ ಕಛೇರಿಗಳಿಗೆ ಮಿಂಚಿನ ವೇಗದಲ್ಲಿ ಭೇಟಿ ನೀಡಿದ್ದ ಅವರು ಅಧಿಕಾರಿಗಳ ದಫ್ತರಿಗೇ ಕೈ ಹಚ್ಚಿ ಅದ್ಯಾಕೆ? ಇದ್ಯಾಕೆ ಎಂದು ಪ್ರಶ್ನಿಸಿದ್ದರು.
ಕಾರವಾರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಗೆ ಬಂದು ಗುಡುಗಿದ ವೆಂಕಟಾಚಲರನ್ನು ನೋಡಿ ನಮಗೆಲ್ಲಾ ರೋಮಾಂಚನವಾಗಿದ್ದರೆ, ಬೃಷ್ಟರು ಹೆದರಿ ಕಂಗಾಲಾಗಿದ್ದರು. ಉತ್ತರ ಕನ್ನಡ, ಶಿವಮೊಗ್ಗ, ಸೇರಿದಂತೆ ರಾಜ್ಯದಾದ್ಯಂತ ತಿಂಗಳಿಗೆ ಕನಿಷ್ಟ 8-10 ಜಿಲ್ಲೆ ಸುತ್ತುತಿದ್ದ ಲೋಕಾಯುಕ್ತ ವೆಂಕಟಾಚಲರ ಕ್ರೀಯಾಶೀಲತೆ,
ಸೂಕ್ಷ್ಮಗ್ರಾಹಿತ್ವದಿಂದಾಗಿ ಪ್ರತಿನಿತ್ಯ ಅಧಿಕಾರಿಗಳು ಸೆರೆಯಾಗುತಿದ್ದರು.
ಎನ್. ವೆಂಕಟಾಚಲರ ಮೊದಲು, ನಂತರ ಅನೇಕ ನ್ಯಾಯಮೂರ್ತಿಗಳು ಬಂದು ಹೋಗಿದ್ದಾರೆ.ಆದರೆ ಸಂತೋಷಹೆಗ್ಗಡೆಯವರಂತೆ ಸುದ್ದಿಮಾಡುತ್ತಲೇ ಕೆಲಸಮಾಡಿದ ಇವರೇ ಇಬ್ಬರು ನ್ಯಾಯಮೂರ್ತಿಗಳನ್ನು ಬಿಟ್ಟರೆ ಬೇರೆಯಾರ ಹೆಸರೂ ನೆನಪಿಗೆ ಬಾರದಿರುವುದು ಅವರ ಶಕ್ತಿ-ಸಾಮಥ್ರ್ಯ,ಪ್ರಾಮಾಣಿಕ ಕೆಲಸಕ್ಕೆ ಸಿಕ್ಕ ಗೌರವ ಎನ್ನಲೇಬೇಕು. ಈಗ ನಿಧನರಾದ ಎನ್.ವೆಂಕಟಾಚಲ ಅನೇಕರನ್ನು ದಂಗುಬಡಿಸಿದ್ದರು, ಬಹುತೇಕರನ್ನು ಉತ್ತೇಜಿಸಿ, ಸನ್ಮಾರ್ಗಕ್ಕೆ ಪ್ರೇರೇಪಿಸಿದ್ದರು ಎನ್ನುವುದೇ ಅವರು ನಾಡಿಗೆ ನೀಡಿದ ಕಾಣಿಕೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಅನೇಕ ಗಣ್ಯರು ಮಾಜಿ ಲೋಕಾಯುಕ್ತ ಎನ್. ವೆಂಕಟಾಚಲರ ಸಾವಿಗೆ ವಿಷಾದ ವ್ಯಕ್ತಪಡಿಸಿ,ಸಂತಾಪ ಸೂಚಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *