ಅನಂತ ಆಶೀಸರ ನೇಮಕ ರದ್ಧು ಮಾಡಲು ಬಿ.ಜೆ.ಪಿ.ಒಪ್ಪಿಗೆ?

ನಿನ್ನೆಯಷ್ಟೇ ರಾಜ್ಯದ ನೂತನ ಜೀವವೈವಿಧ್ಯತಾ ಮಂಡಳಿ ಅಧ್ಯಕ್ಷರಾಗಿ ರಾಜ್ಯಸರ್ಕಾರದಿಂದ ನೇಮಕವಾಗಿದ್ದ ಅನಂತ ಹೆಗಡೆ ಆಶೀಸರರ ನೇಮಕಾತಿ ಆದೇಶ ರದ್ದುಪಡಿಸಲು ರಾಜ್ಯ ಬಿ.ಜೆ.ಪಿ. ಸಮ್ಮತಿಸಿದೆ ಎಂದು ಗೊತ್ತಾಗಿದೆ.
ಇಂದು ತಮ್ಮನ್ನು ಭೇಟಿ ಮಾಡಿ ಈ ನೇಮಕ ರದ್ಧುಮಾಡಬೇಕು ಎಂದು ಕೋರಿದ ಉತ್ತರಕನ್ನಡ ಜಿಲ್ಲಾ ಬಿ.ಜೆ.ಪಿ. ಘಟಕಕ್ಕೆ ಬಿ.ಜೆ.ಪಿ.ರಾಜ್ಯ ಅಧ್ಯಕ್ಷ ವಿನಯ್ ಕುಮಾರ ಕಟೀಲು ಭರವಸೆ ನೀಡಿದ್ದು ಮತದಾರರು,ಜನಸಂಖ್ಯೆ, ಸರ್ಕಾರ ಅಧಿಕಾರದಲ್ಲಿ ಹವ್ಯಕರು ಸೇರಿದಂತೆ ಬ್ರಾಹ್ಮಣರ ಪ್ರಾತಿನಿಧ್ಯ ಉಳಿದವರ ಸಂಖ್ಯೆ,ಅಧಿಕಾರ, ಪ್ರಾತಿನಿಧ್ಯಗಳ ಅನುಪಾತದ ಮಾಹಿತಿ ನೀಡಿದ್ದು ಜಿಲ್ಲೆಯ ನಾಲ್ಕನೇ ಬಹುಸಂಖ್ಯಾತ ಸಮೂದಾಯಕ್ಕೆ ಎಲ್ಲರಿಗಿಂತ ಹೆಚ್ಚು ಪ್ರಾತಿನಿಧ್ಯ ನೀಡಿರುವ ವಿದ್ಯಮಾನಗಳ ಬಗ್ಗೆ ಬಿ.ಜೆ.ಪಿ.ರಾಜ್ಯಾಧ್ಯಕ್ಷರು ಚರ್ಚಿಸಿದ್ದಾರೆ. ಜಿಲ್ಲೆಯ ಬಹುಸಂಖ್ಯಾತರ ಪ್ರತಿನಿಧಿಗಳು, ಮತದಾರರು ಏಕಜಾತಿ ನಾಯಕತ್ವ, ಏಕಸ್ವಾಮ್ಯದ ಬಗ್ಗೆ ಜಿಲ್ಲೆಯಲ್ಲಿರುವ ವಿರೋಧವನ್ನು ಗಮನಿಸಿ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮನವರಿಕೆ ಮಾಡಿ ಅನಂತ ಹೆಗಡೆ ಆಶೀಸರರ ಆಯ್ಕೆ ರದ್ದುಮಾಡಲು ವಿನಂತಿಸುವುದಾಗಿ ನಿಯೋಗಕ್ಕೆ ಅಧ್ಯಕ್ಷರು ಭರವಸೆ ನೀಡಿರುವುದನ್ನು ಖಚಿತಮೂಲಗಳು ಸಮಾಜಮುಖಿ ಗೆ ತಿಳಿಸಿವೆ.

ಸಮರ್ಥ ಲೋಕಾಯುಕ್ತರ ನಿರ್ಗಮನ,ವಿಷಾದ
ನಿವೃತ್ತ ಲೋಕಾಯುಕ್ತರಾಗಿದ್ದ ವೆಂಕಟಾಚಲ ತಮ್ಮ 90ನೇ ವಯಸ್ಸಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾಗಿದ್ದ ಎನ್. ವೆಂಕಟಾಚಲರನ್ನು 2000ದ ದಶಕದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣರ ಸರ್ಕಾರ ನೇಮಕ ಮಾಡಿತ್ತು.
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಅಸ್ಥಿತ್ವಕ್ಕೆ ಬಂದು 2ದಶಕಗಳು ಕಳೆದಿದ್ದರೂ ರಾಜ್ಯದಲ್ಲಿ ಲೋಕಾಯುಕ್ತ ಎನ್ನುವ ಸಂಸ್ಥೆಯೊಂದಿದೆ,ಅದಕ್ಕೆ ನಿವೃತ್ತ ನ್ಯಾಯಮೂರ್ತಿಗಳು ಮುಖ್ಯಸ್ಥರಾಗಿರುತ್ತಾರೆ ಎಂದು ಪ್ರಚಾರಕ್ಕೆ ಬಂದಿದ್ದೇ 2000ನೇ ಇಸ್ವಿಯ ನಂತರ. ಈ ಅವಧಿಯಲ್ಲಿ ಲೋಕಾಯುಕ್ತರಾಗಿ ಚುರುಕಿನಿಂದ ಕೆಲಸಮಾಡುತ್ತಾ ಬೃಷ್ಟರನ್ನು ಶಿಕ್ಷಿಸಿದ ಎನ್ ವೆಂಕಟಾಚಲರ ಅವಧಿಯಲ್ಲಿ ರಾಜ್ಯದ ಲೋಕಾಯುಕ್ತದ ಒಂದು ದಿವಸದ ಪ್ರಕರಣಗಳ ಸಂಖ್ಯೆ 25-30 ರಿಂದ 300 ಕ್ಕೇರಿತು. ಯಾವ ಹಂತದ ಅಧಿಕಾರಿಗಳನ್ನೂ ಏಕವಚನದಲ್ಲೇ ಏನಯ್ಯಾ ಎಂದು ಸಂಭೋದಿಸುತಿದ್ದ ವೆಂಕಟಾಚಲ ಜಿಲ್ಲೆಗಳಿಗೆ ಬರುತ್ತಾರೆಂದರೆ ಅಧಿಕಾರಿಗಳ ತೊಳ್ಳೆ ನಡುಗುತಿತ್ತು………..

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *