ಸಮರ್ಥ ಲೋಕಾಯುಕ್ತರ ನಿರ್ಗಮನ,ವಿಷಾದ

ನಿವೃತ್ತ ಲೋಕಾಯುಕ್ತರಾಗಿದ್ದ ವೆಂಕಟಾಚಲ ತಮ್ಮ 90ನೇ ವಯಸ್ಸಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾಗಿದ್ದ ಎನ್. ವೆಂಕಟಾಚಲರನ್ನು 2000ದ ದಶಕದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣರ ಸರ್ಕಾರ ನೇಮಕ ಮಾಡಿತ್ತು.
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಅಸ್ಥಿತ್ವಕ್ಕೆ ಬಂದು 2ದಶಕಗಳು ಕಳೆದಿದ್ದರೂ ರಾಜ್ಯದಲ್ಲಿ ಲೋಕಾಯುಕ್ತ ಎನ್ನುವ ಸಂಸ್ಥೆಯೊಂದಿದೆ,ಅದಕ್ಕೆ ನಿವೃತ್ತ ನ್ಯಾಯಮೂರ್ತಿಗಳು ಮುಖ್ಯಸ್ಥರಾಗಿರುತ್ತಾರೆ ಎಂದು ಪ್ರಚಾರಕ್ಕೆ ಬಂದಿದ್ದೇ 2000ನೇ ಇಸ್ವಿಯ ನಂತರ. ಈ ಅವಧಿಯಲ್ಲಿ ಲೋಕಾಯುಕ್ತರಾಗಿ ಚುರುಕಿನಿಂದ ಕೆಲಸಮಾಡುತ್ತಾ ಬೃಷ್ಟರನ್ನು ಶಿಕ್ಷಿಸಿದ ಎನ್ ವೆಂಕಟಾಚಲರ ಅವಧಿಯಲ್ಲಿ ರಾಜ್ಯದ ಲೋಕಾಯುಕ್ತದ ಒಂದು ದಿವಸದ ಪ್ರಕರಣಗಳ ಸಂಖ್ಯೆ 25-30 ರಿಂದ 300 ಕ್ಕೇರಿತು. ಯಾವ ಹಂತದ ಅಧಿಕಾರಿಗಳನ್ನೂ ಏಕವಚನದಲ್ಲೇ ಏನಯ್ಯಾ ಎಂದು ಸಂಭೋದಿಸುತಿದ್ದ ವೆಂಕಟಾಚಲ ಜಿಲ್ಲೆಗಳಿಗೆ ಬರುತ್ತಾರೆಂದರೆ ಅಧಿಕಾರಿಗಳ ತೊಳ್ಳೆ ನಡುಗುತಿತ್ತು.
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಬಂದು ಬೃಷ್ಟರಿಗೆ ಬಲೆ ಬೀಸಿದ್ದ ವೆಂಕಟಾಚಲ ಕಾರವಾರಕ್ಕೆ ಬಂದಿದ್ದಾಗ ನಾವೆಲ್ಲಾ ಹೊಸ ವರದಿಗಾರರು. ಕಾರವಾರದ ಆಸ್ಫತ್ರೆ, ಸರ್ಕಾರಿ ಕಛೇರಿಗಳಿಗೆ ಮಿಂಚಿನ ವೇಗದಲ್ಲಿ ಭೇಟಿ ನೀಡಿದ್ದ ಅವರು ಅಧಿಕಾರಿಗಳ ದಫ್ತರಿಗೇ ಕೈ ಹಚ್ಚಿ ಅದ್ಯಾಕೆ? ಇದ್ಯಾಕೆ ಎಂದು ಪ್ರಶ್ನಿಸಿದ್ದರು.
ಕಾರವಾರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಗೆ ಬಂದು ಗುಡುಗಿದ ವೆಂಕಟಾಚಲರನ್ನು ನೋಡಿ ನಮಗೆಲ್ಲಾ ರೋಮಾಂಚನವಾಗಿದ್ದರೆ, ಬೃಷ್ಟರು ಹೆದರಿ ಕಂಗಾಲಾಗಿದ್ದರು. ಉತ್ತರ ಕನ್ನಡ, ಶಿವಮೊಗ್ಗ, ಸೇರಿದಂತೆ ರಾಜ್ಯದಾದ್ಯಂತ ತಿಂಗಳಿಗೆ ಕನಿಷ್ಟ 8-10 ಜಿಲ್ಲೆ ಸುತ್ತುತಿದ್ದ ಲೋಕಾಯುಕ್ತ ವೆಂಕಟಾಚಲರ ಕ್ರೀಯಾಶೀಲತೆ,
ಸೂಕ್ಷ್ಮಗ್ರಾಹಿತ್ವದಿಂದಾಗಿ ಪ್ರತಿನಿತ್ಯ ಅಧಿಕಾರಿಗಳು ಸೆರೆಯಾಗುತಿದ್ದರು.
ಎನ್. ವೆಂಕಟಾಚಲರ ಮೊದಲು, ನಂತರ ಅನೇಕ ನ್ಯಾಯಮೂರ್ತಿಗಳು ಬಂದು ಹೋಗಿದ್ದಾರೆ.ಆದರೆ ಸಂತೋಷಹೆಗ್ಗಡೆಯವರಂತೆ ಸುದ್ದಿಮಾಡುತ್ತಲೇ ಕೆಲಸಮಾಡಿದ ಇವರೇ ಇಬ್ಬರು ನ್ಯಾಯಮೂರ್ತಿಗಳನ್ನು ಬಿಟ್ಟರೆ ಬೇರೆಯಾರ ಹೆಸರೂ ನೆನಪಿಗೆ ಬಾರದಿರುವುದು ಅವರ ಶಕ್ತಿ-ಸಾಮಥ್ರ್ಯ,ಪ್ರಾಮಾಣಿಕ ಕೆಲಸಕ್ಕೆ ಸಿಕ್ಕ ಗೌರವ ಎನ್ನಲೇಬೇಕು. ಈಗ ನಿಧನರಾದ ಎನ್.ವೆಂಕಟಾಚಲ ಅನೇಕರನ್ನು ದಂಗುಬಡಿಸಿದ್ದರು, ಬಹುತೇಕರನ್ನು ಉತ್ತೇಜಿಸಿ, ಸನ್ಮಾರ್ಗಕ್ಕೆ ಪ್ರೇರೇಪಿಸಿದ್ದರು ಎನ್ನುವುದೇ ಅವರು ನಾಡಿಗೆ ನೀಡಿದ ಕಾಣಿಕೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಅನೇಕ ಗಣ್ಯರು ಮಾಜಿ ಲೋಕಾಯುಕ್ತ ಎನ್. ವೆಂಕಟಾಚಲರ ಸಾವಿಗೆ ವಿಷಾದ ವ್ಯಕ್ತಪಡಿಸಿ,ಸಂತಾಪ ಸೂಚಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *