ಸಮರ್ಥ ಲೋಕಾಯುಕ್ತರ ನಿರ್ಗಮನ,ವಿಷಾದ

ನಿವೃತ್ತ ಲೋಕಾಯುಕ್ತರಾಗಿದ್ದ ವೆಂಕಟಾಚಲ ತಮ್ಮ 90ನೇ ವಯಸ್ಸಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾಗಿದ್ದ ಎನ್. ವೆಂಕಟಾಚಲರನ್ನು 2000ದ ದಶಕದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣರ ಸರ್ಕಾರ ನೇಮಕ ಮಾಡಿತ್ತು.
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಅಸ್ಥಿತ್ವಕ್ಕೆ ಬಂದು 2ದಶಕಗಳು ಕಳೆದಿದ್ದರೂ ರಾಜ್ಯದಲ್ಲಿ ಲೋಕಾಯುಕ್ತ ಎನ್ನುವ ಸಂಸ್ಥೆಯೊಂದಿದೆ,ಅದಕ್ಕೆ ನಿವೃತ್ತ ನ್ಯಾಯಮೂರ್ತಿಗಳು ಮುಖ್ಯಸ್ಥರಾಗಿರುತ್ತಾರೆ ಎಂದು ಪ್ರಚಾರಕ್ಕೆ ಬಂದಿದ್ದೇ 2000ನೇ ಇಸ್ವಿಯ ನಂತರ. ಈ ಅವಧಿಯಲ್ಲಿ ಲೋಕಾಯುಕ್ತರಾಗಿ ಚುರುಕಿನಿಂದ ಕೆಲಸಮಾಡುತ್ತಾ ಬೃಷ್ಟರನ್ನು ಶಿಕ್ಷಿಸಿದ ಎನ್ ವೆಂಕಟಾಚಲರ ಅವಧಿಯಲ್ಲಿ ರಾಜ್ಯದ ಲೋಕಾಯುಕ್ತದ ಒಂದು ದಿವಸದ ಪ್ರಕರಣಗಳ ಸಂಖ್ಯೆ 25-30 ರಿಂದ 300 ಕ್ಕೇರಿತು. ಯಾವ ಹಂತದ ಅಧಿಕಾರಿಗಳನ್ನೂ ಏಕವಚನದಲ್ಲೇ ಏನಯ್ಯಾ ಎಂದು ಸಂಭೋದಿಸುತಿದ್ದ ವೆಂಕಟಾಚಲ ಜಿಲ್ಲೆಗಳಿಗೆ ಬರುತ್ತಾರೆಂದರೆ ಅಧಿಕಾರಿಗಳ ತೊಳ್ಳೆ ನಡುಗುತಿತ್ತು.
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಬಂದು ಬೃಷ್ಟರಿಗೆ ಬಲೆ ಬೀಸಿದ್ದ ವೆಂಕಟಾಚಲ ಕಾರವಾರಕ್ಕೆ ಬಂದಿದ್ದಾಗ ನಾವೆಲ್ಲಾ ಹೊಸ ವರದಿಗಾರರು. ಕಾರವಾರದ ಆಸ್ಫತ್ರೆ, ಸರ್ಕಾರಿ ಕಛೇರಿಗಳಿಗೆ ಮಿಂಚಿನ ವೇಗದಲ್ಲಿ ಭೇಟಿ ನೀಡಿದ್ದ ಅವರು ಅಧಿಕಾರಿಗಳ ದಫ್ತರಿಗೇ ಕೈ ಹಚ್ಚಿ ಅದ್ಯಾಕೆ? ಇದ್ಯಾಕೆ ಎಂದು ಪ್ರಶ್ನಿಸಿದ್ದರು.
ಕಾರವಾರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಗೆ ಬಂದು ಗುಡುಗಿದ ವೆಂಕಟಾಚಲರನ್ನು ನೋಡಿ ನಮಗೆಲ್ಲಾ ರೋಮಾಂಚನವಾಗಿದ್ದರೆ, ಬೃಷ್ಟರು ಹೆದರಿ ಕಂಗಾಲಾಗಿದ್ದರು. ಉತ್ತರ ಕನ್ನಡ, ಶಿವಮೊಗ್ಗ, ಸೇರಿದಂತೆ ರಾಜ್ಯದಾದ್ಯಂತ ತಿಂಗಳಿಗೆ ಕನಿಷ್ಟ 8-10 ಜಿಲ್ಲೆ ಸುತ್ತುತಿದ್ದ ಲೋಕಾಯುಕ್ತ ವೆಂಕಟಾಚಲರ ಕ್ರೀಯಾಶೀಲತೆ,
ಸೂಕ್ಷ್ಮಗ್ರಾಹಿತ್ವದಿಂದಾಗಿ ಪ್ರತಿನಿತ್ಯ ಅಧಿಕಾರಿಗಳು ಸೆರೆಯಾಗುತಿದ್ದರು.
ಎನ್. ವೆಂಕಟಾಚಲರ ಮೊದಲು, ನಂತರ ಅನೇಕ ನ್ಯಾಯಮೂರ್ತಿಗಳು ಬಂದು ಹೋಗಿದ್ದಾರೆ.ಆದರೆ ಸಂತೋಷಹೆಗ್ಗಡೆಯವರಂತೆ ಸುದ್ದಿಮಾಡುತ್ತಲೇ ಕೆಲಸಮಾಡಿದ ಇವರೇ ಇಬ್ಬರು ನ್ಯಾಯಮೂರ್ತಿಗಳನ್ನು ಬಿಟ್ಟರೆ ಬೇರೆಯಾರ ಹೆಸರೂ ನೆನಪಿಗೆ ಬಾರದಿರುವುದು ಅವರ ಶಕ್ತಿ-ಸಾಮಥ್ರ್ಯ,ಪ್ರಾಮಾಣಿಕ ಕೆಲಸಕ್ಕೆ ಸಿಕ್ಕ ಗೌರವ ಎನ್ನಲೇಬೇಕು. ಈಗ ನಿಧನರಾದ ಎನ್.ವೆಂಕಟಾಚಲ ಅನೇಕರನ್ನು ದಂಗುಬಡಿಸಿದ್ದರು, ಬಹುತೇಕರನ್ನು ಉತ್ತೇಜಿಸಿ, ಸನ್ಮಾರ್ಗಕ್ಕೆ ಪ್ರೇರೇಪಿಸಿದ್ದರು ಎನ್ನುವುದೇ ಅವರು ನಾಡಿಗೆ ನೀಡಿದ ಕಾಣಿಕೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಅನೇಕ ಗಣ್ಯರು ಮಾಜಿ ಲೋಕಾಯುಕ್ತ ಎನ್. ವೆಂಕಟಾಚಲರ ಸಾವಿಗೆ ವಿಷಾದ ವ್ಯಕ್ತಪಡಿಸಿ,ಸಂತಾಪ ಸೂಚಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *