ಬೆಳಕಿಗೆ ಬರದ ಸಂಸ್ಥೆ ಹೊರತಂದಿದ್ದು ಸಾವಿರಾರು ಪ್ರತಿಭಾವಂತರನ್ನು

ಸಿದ್ಧಾಪುರದ ನೆಲ-ಮಣ್ಣಿನ ಮಹಿಮೆಯೋ ಅಥವಾ ಇಲ್ಲಿಯ ಚಾರಿತ್ರಿಕ ಹಿನ್ನೆಲೆಯ ಮಹಿಮೆಯೋ ಇಲ್ಲಿ ಸಂಭವಿಸುವ ಪ್ರತಿ ಘಟನೆ,ವಿದ್ಯಮಾನಗಳೂ ವಿಶೇಶ.
ತೀರಾ ಹಳ್ಳಿಯಂಥ ಪಟ್ಟಣದ ಸಿದ್ಧಾಪುರದಲ್ಲಿ ಬಹಳ ವರ್ಷಗಳ ಹಿಂದಿನಿಂದ ತೋಟಗಾರಿಕಾ ತರಬೇತಿ ಸಂಸ್ಥೆಯೊಂದು ನಡೆಯುತ್ತಿದೆ. ಈ ಸಂಸ್ಥೆಯ ವ್ಯಾಪ್ತಿ ಉತ್ತರಕನ್ನಡ ಶಿವಮೊಗ್ಗ ಜಿಲ್ಲೆಗಳಿಗೆ ಸೀಮಿತವಾಗಿದೆಯಾದರೂ ಇಲ್ಲಿ ರಾಜ್ಯ ಹೊರರಾಜ್ಯಗಳ ವಿದ್ಯಾರ್ಥಿಗಳು ಕಲಿತು ಹೆಸರು ಮಾಡಿದ್ದಾರೆ.
ರಾಜ್ಯಸರ್ಕಾರದ ತೋಟಗಾರಿಕೆ ಇಲಾಖೆಯ ಜವಾಬ್ಧಾರಿಯ ಈ ಸಂಸ್ಥೆ ಪ್ರತಿವರ್ಷ 35 ರಂತೆ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡಿ ತರಬೇತಿ ನೀಡುತ್ತಿದೆ.
ಕನಿಷ್ಟ ಮೆಟ್ರಿಕ್ ಓದಿರುವ ಯಾವುದೇ ಭಾರತೀಯ ಪ್ರಜೆ ಇಲ್ಲಿ ಅರ್ಜಿ ಹಾಕಿ ಪ್ರವೇಶ ಪಡೆಯಬಹುದು ಆದರೆ ವಯೋಮಿತಿ 18 ರಿಂದ ಮೂವತ್ತು ವರ್ಷ ದಾಟುವಂತಿಲ್ಲ.
ಪ್ರತಿವರ್ಷ ಏಫ್ರಿಲ್ ನಲ್ಲಿ ಕರೆಯುವ ಪ್ರವೇಶ ಆಮಂತ್ರಣದ ಮೇರೆಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು 11ತಿಂಗಳ ವರೆಗೆ ಸ್ಟೈಪಂಡ್ ಪಡೆದು ತರಬೇತಿ ಪಡೆಯುತ್ತಾರೆ. ಹೊಸೂರಿನ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ 11 ತಿಂಗಳ ಡಿಪ್ಲೋಮಾ ತರಬೇತಿ ಪಡೆಯುವ ನಂತರ ಅವರು ಸ್ವಯಂ ಉದ್ಯೋಗ, ಸರ್ಕಾರಿ, ಅರೆಸರ್ಕಾರಿ ಕೆಲಸಗಳಿಗೆ ನೇಮಕವಾಗಬಹುದು.
ಇಲ್ಲಿಯ67 ಎಕರೆಯ ವಿಶಾಲ ಪ್ರದೇಶದಲ್ಲಿ ತರಬೇತಿ, ಪ್ರಾಯೋಗಿಕ ಅನುಭವ ಪಡೆದು ಹೊರನಡೆದವರಲ್ಲಿ ಬಹುತೇಕರು ಸಾಧಕರು, ಪ್ರಸಿದ್ಧರು ಆಗಿರುವುದು ಈ ತರಬೇತಿ ಕೇಂದ್ರದ ಹೆಗ್ಗಳಿಕೆ.
ಈ ತರಬೇತಿ ಪಡೆಯಲಿಚ್ಛಿಸುವವರು ರೈತ ಕುಟುಂಬದವರಾಗಿರಬೇಕು, ಕನಿಷ್ಟ ಮೆಟ್ರಿಕ್ ಓದಿರಬೇಕು ಎನ್ನುವ ಕಡ್ಡಾಯ ನಿಯಮ ಬಿಟ್ಟರೆ ರಾಜ್ಯದ ಯಾವುದೇ ವ್ಯಕ್ತಿ ಇಲ್ಲಿ ವಿದ್ಯಾರ್ಥಿಯಾಗಬಹುದು. ವಿಶೇಶವೆಂದರೆ ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಗಳಿಗಾಗಿಯೇ ಇರುವ ಈ ತರಬೇತಿ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಲ್ಲಿ ಅತಿ ಕಡಮೆ ಆಕಾಂಕ್ಷಿಗಳೆಂದರೆ ಉತ್ತರಕನ್ನಡ ಜಿಲ್ಲೆಯವರು.
ವಿಶಾಲ ಕ್ಯಾಂಪಸ್,ವಿಶೇಶ ವ್ಯವಸ್ಥೆ, ಎಲ್ಲಾ ಅನುಕೂಲಗಳ ನಡುವೆ ಕೂಡಾ ಸ್ಥಳಿಯರು ಕಡಿಮೆ ಆಸಕ್ತರಾಗಲು ಕಾರಣ ಈ ಸಂಸ್ಥೆ ತೆರೆಮರೆಯಲ್ಲಿರುವುದು. ರೈತರ ಮಕ್ಕಳು, ಆಸಕ್ತ ವಿದ್ಯಾರ್ಥಿಗಳು ಈ ತರಬೇತಿ ಪಡೆದರೆ ಅದು ತೋಟಗಾರಿಕೆ ಕ್ಷೇತ್ರದ ಹೆಬ್ಬಾಗಿಲು ಪ್ರವೇಶಿಸಿದಂತೆ ಪ್ರತಿವರ್ಷಕ್ಕೊಂದರಂತೆ ಡಿಪ್ಲೊಮಾ ಪಡೆದು ಇಲ್ಲಿಂದ ಹೊರಹೋದವರು ಮತ್ತೆ ಮರಳುವಾಗ ಸಾಧಕರು, ನೌಕರರು ಆಗಿ ಮರಳಿ ಬರುವ ಈ ತರಬೇತಿ ಕೇಂದ್ರ ಸ್ಥಳಿಯರಿಗೇ ದೂರವಾಗಿರುವುದು ಅಚ್ಚರಿಯ ವಿಷಯ.
ಈ ಸಂಸ್ಥೆಯ ಮಾಹಿತಿಗಾಗಿ 08389298032 ಸಂಖ್ಯೆಯನ್ನು ಸಂಪರ್ಕಿಸಬಹುದು. ತೋಟಗಾರಿಕಾ ಬೆಳೆಗಳು,ಮಾರುಕಟ್ಟೆ ಕೇಂದ್ರಗಳು, ಪೂರಕ ಪರಿಸರ ಇರುವ ಸಿದ್ದಾಪುರದ ಹೊಸೂರು ತೋಟಗಾರಿಕಾ ತರಬೇತಿ ಕೇಂದ್ರ ರಾಜ್ಯದ ಅನೇಕ ತರಬೇತಿ ಕೇಂದ್ರಗಳಿಗಿಂತ ಭಿನ್ನ ಎನ್ನುವ ಹೆಗ್ಗಳಿಕೆಯ ಸ್ಥಾನ-ಮಾನ ರಾಜ್ಯಮಟ್ಟದಲ್ಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *