ನೆಲಮೂಲದ ವಿಸ್ಮೃತಿಗೆ ವಿಶಾದ

ಬೇಡ್ಕಣಿಯಲ್ಲಿ ಮಾರುತಿ ಯಕ್ಷಗಾನ ಮಂಡಳಿಯವರಿ0ದ ಸೇವೆ ಆಟ
ಸಿದ್ದಾಪುರ. ತಾಲೂಕಿನ ಬೇಡ್ಕಣಿಯಲ್ಲಿ ದೀಪಾವಳಿಯ ವರ್ಷತೊಡಕಿನ ನಿಮಿತ್ತ ಶ್ರೀ ಹನುಮಂತ ದೇವರ ಪಲ್ಲಕ್ಕಿ ಉತ್ಸವ ನಡೆಯಿತು. ಪ್ರತಿವರ್ಷದಂತೆ ಭಕ್ತರು ದೇವರ ಸೇವೆಯಲ್ಲಿ ಪಾಲ್ಗೊಂಡು ದರ್ಶನ ಪಡೆದರು. ಅಂದು ಸಂಜೆ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಇದರ ಇಪ್ಪತ್ಮೂರನೆ ವರ್ಷದ ತಿರುಗಾಟದ ಪ್ರಾರಂಭದ ಸೇವೆ ಆಟ ಪ್ರದರ್ಶಿತವಾಯಿತು. ಸಮಾಜಮುಖಿ ಪತ್ರಿಕೆಯ ಸಂಪಾದಕ ಕನ್ನೇಶ ಕೋಲಶಿರ್ಸಿ ಚಂಡೆ ನುಡಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.
ಅವರು ಮಾತನಾಡಿ ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರಬಳಕೆಯ ಭರಾಟೆಯಲ್ಲಿ ನಮ್ಮ ನೆಲಮೂಲ ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ. ಎಲ್ಲಿಗೇ ಹೋದರು ಮತ್ತೆ ಈ ಮಣ್ಣಿನ ಸೆಳೆತಕ್ಕೆ ಸಿಗಲೇಬೇಕು. ಯಕ್ಷಗಾನ ನಮ್ಮ ಸಂಸ್ಕೃತಿಯನ್ನು ಹಸಿಯಾಗಿ ಇಡಬಲ್ಲುದು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಯಕ್ಷಗಾನ ಮಂಡಳಿಯ ಮುಖ್ಯಸ್ಥ ಲಕ್ಷö್ಮಣ ಜಿ ನಾಯ್ಕ ಬೇಡ್ಕಣಿ ತಮ್ಮ ಮಂಡಳಿಯು ನಿರಂತರ ೨೨ ವರ್ಷಗಳ ತಿರುಗಾಟ ಯಶಸ್ವಿಯಾಗಿ ಪೂರೈಸಿದ್ದು ಇಪ್ಪತ್ಮೂರನೆ ವರ್ಷದ ತಿರುಗಾಟಕ್ಕೆ ಸಿದ್ಧವಾಗಿದೆ ಎಂದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಭೋಜನ ಶಾಲೆಗೆ ಊಟಬಡಿಸಲು ಅನುಕೂಲವಾಗುವ ಎರಡು ಸ್ಟೀಲಿನ ಕೈಗಾಡಿಗಳನ್ನು ದೇಣಿಗೆಯಾಗಿ ದೇವಸ್ಥಾನದ ಅಧ್ಯಕ್ಷರಾದ ವಿ.ಎನ್.ನಾಯ್ಕ ಬೇಡ್ಕಣಿಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿ.ಎನ್.ನಾಯ್ಕ ಬೇಡ್ಕಣಿ ಕೋಟೆ ಹನುಮಂತ ದೇವಾಲಯ ಎಲ್ಲಾ ಕಲೆಗಳಿಗೂ ಅದರಲ್ಲೂ ವಿಶೇಷವಾಗಿ ಯಕ್ಷಗಾನ ಕಲೆಗೆ ಪ್ರೋತ್ಸಾಹ ನೀÃಡುತ್ತಾ ಬಂದಿದೆ. ಯಕ್ಷಗಾನ ಕರ್ನಾಟಕದ ಶ್ರೇಷ್ಠಕಲೆ. ಕನ್ನಡದ ಉತ್ತಮ ಬಳಕೆ, ಬೆಳವಣಿಗೆ ಯಕ್ಷಗಾನದಿಂದ ಆಗುತ್ತಿದೆ ಎಂದರು.
ಎಂ.ಕೆ.ನಾಯ್ಕ ಹೊಸಳ್ಳಿ ಅಧ್ಯಕ್ಷತೆವಹಿಸಿದ್ದರು. ಅವರು ಮಾತನಾಡಿ ದೇವಸ್ಥಾನಗಳು ಯಕ್ಷಗಾನ ಕಲಾವಿದರಿಗೆ ಹಾಗೂ ಮಂಡಳಿಗಳಿಗೆ ಆಶ್ರಯನೀಡಿ ಈ ಕಲೆಯ ಅಭಿÀವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಿವೆ. ಅಂತಹ ಪ್ರಯತ್ನ ಬೇಡ್ಕಣಿಯಲ್ಲೂ ಆಗಲಿ ಎಂದರು.
ಚಂದ್ರಶೇಖರ ಕುಂಬ್ರಿಗದ್ದೆ ನಿರೂಪಿಸಿದರು. ನಂತರ ವೀರ ಮಾಂಧಾತ ಚರಿತ್ರೆ ಮತ್ತು ಶರಸೇತು ಬಂಧನ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು. ಭಾಗವತರಾಗಿ ಗಣಪತಿ ಭಟ್ಟ ಭರತೋಟ, ಕೃಷ್ಣ ಮರಾಠಿ, ಮದ್ದಳೆಯಲ್ಲಿ ವಿಠ್ಠಲ ಪೂಜಾರಿ, ನಾರಾಯಣ ಗೌಡ, ಚಂಡೆಯಲ್ಲಿ ಮಂಜಯ್ಯ ಜೈನ್ ಉತ್ತಮ ಹಿಮ್ಮೇಳ ಒದಗಿಸಿದರು.
ಮಾಂಧಾತ ಚರಿತ್ರೆಯಲ್ಲಿ ಪಾತ್ರಧಾರಿಗಳಾಗಿ ವಿನಾಯಕ ನಾಯ್ಕ ಹಳ್ಳಿಬೈಲ (ಈಶ್ವರ), ಎಂ.ಟಿ.ನಾಯ್ಕ ಹಳ್ಳಿಕಾನ(ನಾರದ), ಶ್ರೀಕಾಂತ ಹೆಗಡೆ ಹೆಗ್ಗೋಡು (ಮಾಂಧಾತ)ಮಾದೇವ ನಾಯ್ಕ ಅರಲಗೋಡು(ಶನಿ), ಲಕ್ಷö್ಮಣ ಬೇಡ್ಕಣಿ( ಸವಾರ) ಜೈಕುಮಾರ ನಾಯ್ಕ (ಶಿವಯೋಗಿ)ಸದಾನಂದ ಪಟಗಾರ ಕುಮಟಾ(ಪದ್ಮ) ಕನ್ನಪ್ಪ ಮಾಸ್ತರ (ಚಂದ್ರವದನೆ) ರಾಮಕೃಷ್ಣ ಕಲಕೈ ( ದಾನವ), ಜಯರಾಮ ಹೊಸಳ್ಳಿ (ಭದ್ರ),) ಮಾರ್ಷಲ್ ಕುಮಟಾ (ಮಂತ್ರಿ), ಶರಸೇತು ಬಂಧನದಲ್ಲಿ ಕೃಷ್ಣಾ ಜಿ ಬೇಡ್ಕಣಿ (ಅರ್ಜುನ), ಸಂತೋಷ ಕೆ ನಾಯ್ಕ (ಹನುಮಂತ), ಗಿರಿಧರ ಕೆ ನಾಯ್ಕ(ವಿಷ್ಣುರೂಪ) ಪಾತ್ರ ನಿರ್ವಹಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *