ನೆಲಮೂಲದ ವಿಸ್ಮೃತಿಗೆ ವಿಶಾದ

ಬೇಡ್ಕಣಿಯಲ್ಲಿ ಮಾರುತಿ ಯಕ್ಷಗಾನ ಮಂಡಳಿಯವರಿ0ದ ಸೇವೆ ಆಟ
ಸಿದ್ದಾಪುರ. ತಾಲೂಕಿನ ಬೇಡ್ಕಣಿಯಲ್ಲಿ ದೀಪಾವಳಿಯ ವರ್ಷತೊಡಕಿನ ನಿಮಿತ್ತ ಶ್ರೀ ಹನುಮಂತ ದೇವರ ಪಲ್ಲಕ್ಕಿ ಉತ್ಸವ ನಡೆಯಿತು. ಪ್ರತಿವರ್ಷದಂತೆ ಭಕ್ತರು ದೇವರ ಸೇವೆಯಲ್ಲಿ ಪಾಲ್ಗೊಂಡು ದರ್ಶನ ಪಡೆದರು. ಅಂದು ಸಂಜೆ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಇದರ ಇಪ್ಪತ್ಮೂರನೆ ವರ್ಷದ ತಿರುಗಾಟದ ಪ್ರಾರಂಭದ ಸೇವೆ ಆಟ ಪ್ರದರ್ಶಿತವಾಯಿತು. ಸಮಾಜಮುಖಿ ಪತ್ರಿಕೆಯ ಸಂಪಾದಕ ಕನ್ನೇಶ ಕೋಲಶಿರ್ಸಿ ಚಂಡೆ ನುಡಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.
ಅವರು ಮಾತನಾಡಿ ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರಬಳಕೆಯ ಭರಾಟೆಯಲ್ಲಿ ನಮ್ಮ ನೆಲಮೂಲ ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ. ಎಲ್ಲಿಗೇ ಹೋದರು ಮತ್ತೆ ಈ ಮಣ್ಣಿನ ಸೆಳೆತಕ್ಕೆ ಸಿಗಲೇಬೇಕು. ಯಕ್ಷಗಾನ ನಮ್ಮ ಸಂಸ್ಕೃತಿಯನ್ನು ಹಸಿಯಾಗಿ ಇಡಬಲ್ಲುದು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಯಕ್ಷಗಾನ ಮಂಡಳಿಯ ಮುಖ್ಯಸ್ಥ ಲಕ್ಷö್ಮಣ ಜಿ ನಾಯ್ಕ ಬೇಡ್ಕಣಿ ತಮ್ಮ ಮಂಡಳಿಯು ನಿರಂತರ ೨೨ ವರ್ಷಗಳ ತಿರುಗಾಟ ಯಶಸ್ವಿಯಾಗಿ ಪೂರೈಸಿದ್ದು ಇಪ್ಪತ್ಮೂರನೆ ವರ್ಷದ ತಿರುಗಾಟಕ್ಕೆ ಸಿದ್ಧವಾಗಿದೆ ಎಂದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಭೋಜನ ಶಾಲೆಗೆ ಊಟಬಡಿಸಲು ಅನುಕೂಲವಾಗುವ ಎರಡು ಸ್ಟೀಲಿನ ಕೈಗಾಡಿಗಳನ್ನು ದೇಣಿಗೆಯಾಗಿ ದೇವಸ್ಥಾನದ ಅಧ್ಯಕ್ಷರಾದ ವಿ.ಎನ್.ನಾಯ್ಕ ಬೇಡ್ಕಣಿಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿ.ಎನ್.ನಾಯ್ಕ ಬೇಡ್ಕಣಿ ಕೋಟೆ ಹನುಮಂತ ದೇವಾಲಯ ಎಲ್ಲಾ ಕಲೆಗಳಿಗೂ ಅದರಲ್ಲೂ ವಿಶೇಷವಾಗಿ ಯಕ್ಷಗಾನ ಕಲೆಗೆ ಪ್ರೋತ್ಸಾಹ ನೀÃಡುತ್ತಾ ಬಂದಿದೆ. ಯಕ್ಷಗಾನ ಕರ್ನಾಟಕದ ಶ್ರೇಷ್ಠಕಲೆ. ಕನ್ನಡದ ಉತ್ತಮ ಬಳಕೆ, ಬೆಳವಣಿಗೆ ಯಕ್ಷಗಾನದಿಂದ ಆಗುತ್ತಿದೆ ಎಂದರು.
ಎಂ.ಕೆ.ನಾಯ್ಕ ಹೊಸಳ್ಳಿ ಅಧ್ಯಕ್ಷತೆವಹಿಸಿದ್ದರು. ಅವರು ಮಾತನಾಡಿ ದೇವಸ್ಥಾನಗಳು ಯಕ್ಷಗಾನ ಕಲಾವಿದರಿಗೆ ಹಾಗೂ ಮಂಡಳಿಗಳಿಗೆ ಆಶ್ರಯನೀಡಿ ಈ ಕಲೆಯ ಅಭಿÀವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಿವೆ. ಅಂತಹ ಪ್ರಯತ್ನ ಬೇಡ್ಕಣಿಯಲ್ಲೂ ಆಗಲಿ ಎಂದರು.
ಚಂದ್ರಶೇಖರ ಕುಂಬ್ರಿಗದ್ದೆ ನಿರೂಪಿಸಿದರು. ನಂತರ ವೀರ ಮಾಂಧಾತ ಚರಿತ್ರೆ ಮತ್ತು ಶರಸೇತು ಬಂಧನ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು. ಭಾಗವತರಾಗಿ ಗಣಪತಿ ಭಟ್ಟ ಭರತೋಟ, ಕೃಷ್ಣ ಮರಾಠಿ, ಮದ್ದಳೆಯಲ್ಲಿ ವಿಠ್ಠಲ ಪೂಜಾರಿ, ನಾರಾಯಣ ಗೌಡ, ಚಂಡೆಯಲ್ಲಿ ಮಂಜಯ್ಯ ಜೈನ್ ಉತ್ತಮ ಹಿಮ್ಮೇಳ ಒದಗಿಸಿದರು.
ಮಾಂಧಾತ ಚರಿತ್ರೆಯಲ್ಲಿ ಪಾತ್ರಧಾರಿಗಳಾಗಿ ವಿನಾಯಕ ನಾಯ್ಕ ಹಳ್ಳಿಬೈಲ (ಈಶ್ವರ), ಎಂ.ಟಿ.ನಾಯ್ಕ ಹಳ್ಳಿಕಾನ(ನಾರದ), ಶ್ರೀಕಾಂತ ಹೆಗಡೆ ಹೆಗ್ಗೋಡು (ಮಾಂಧಾತ)ಮಾದೇವ ನಾಯ್ಕ ಅರಲಗೋಡು(ಶನಿ), ಲಕ್ಷö್ಮಣ ಬೇಡ್ಕಣಿ( ಸವಾರ) ಜೈಕುಮಾರ ನಾಯ್ಕ (ಶಿವಯೋಗಿ)ಸದಾನಂದ ಪಟಗಾರ ಕುಮಟಾ(ಪದ್ಮ) ಕನ್ನಪ್ಪ ಮಾಸ್ತರ (ಚಂದ್ರವದನೆ) ರಾಮಕೃಷ್ಣ ಕಲಕೈ ( ದಾನವ), ಜಯರಾಮ ಹೊಸಳ್ಳಿ (ಭದ್ರ),) ಮಾರ್ಷಲ್ ಕುಮಟಾ (ಮಂತ್ರಿ), ಶರಸೇತು ಬಂಧನದಲ್ಲಿ ಕೃಷ್ಣಾ ಜಿ ಬೇಡ್ಕಣಿ (ಅರ್ಜುನ), ಸಂತೋಷ ಕೆ ನಾಯ್ಕ (ಹನುಮಂತ), ಗಿರಿಧರ ಕೆ ನಾಯ್ಕ(ವಿಷ್ಣುರೂಪ) ಪಾತ್ರ ನಿರ್ವಹಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *