ಮಳೆ ರಗಳೆ ಕಾವಂಚೂರು ತಾ.ಪಂ. ಕ್ಷೇತ್ರದಲ್ಲಿ ಭತ್ತಕ್ಕೆ ಕುತ್ತು

ಸಿದ್ಧಾಪುರ ತಾಲೂಕಿನ ಪೂರ್ವಭಾಗದ ಕಾವಂಚೂರು ತಾ.ಪಂ. ಕ್ಷೇತ್ರದಲ್ಲಿ ಭತ್ತದ ಬೆಳೆಗಾರರು ಮಳೆಯಿಂದ ಕಂಗಾಲಾದ ಪರಿಸ್ಥಿತಿ ಎದುರಾಗಿದೆ.
ಕಾವಂಚೂರು ತಾ.ಪಂ. ಕ್ಷೇತ್ರವಾದ ಶಿರಳಗಿ,ಮನ್ಮನೆ,ಕಾವಂಚೂರು ಸೇರಿದ ಬಹುತೇಕ ಕಡೆ ಭತ್ತದ ಬೆಳೆ ಕಟಾವಿಗೆ ಬಂದಿದ್ದು ಭತ್ತ ಕೊಯ್ಯದವರು ಕೊಯ್ದರೆ ಮಳೆಯಿಂದ ರಕ್ಷಣೆ ಹೇಗೆ ಎಂದು ಚಿಂತಿತರಾದರೆ, ಈಗಾಗಲೇ ಭತ್ತ ಕಟಾವು ಮಾಡಿದವರು ನಿರಂತರ ಮಳೆಗೆ ಸಿಕ್ಕ ಭತ್ತ ಮೊಳಕೆ ಬರುವ ಹಾನಿ ಎದುರಿಸುವಂತಾಗಿದೆ.
ಮಂಗಳವಾರ ಈಭಾಗಕ್ಕೆ ಭೇಟಿ ನೀಡಿದ ಪತ್ರಕರ್ತರಿಗೆ ಮಾಹಿತಿ ನೀಡಿದ ತಾ.ಪಂ.ಸದಸ್ಯ ನಾಶಿರ್ ಖಾನ್ ವಲ್ಲೀಖಾನ್ ಈ ವರ್ಷದ ಪ್ರಾರಂಭದ ಮಳೆಯಿಂದ ಬಿತ್ತಿದ ಭತ್ತ ಸಂಪೂರ್ಣ ಹಾಳಾಗಿತ್ತು ನಂತರ ಒಂದೆರಡು ಬಾರಿ ನಾಟಿ ಮಾಡಿ ಭತ್ತ ಬೆಳೆದರೆ ಈಗ ಮಳೆಯಿಂದ ತೊಂದರೆ, ಹಾನಿ ಆಗಿದೆ. ಈ ಬಗ್ಗೆ ಸಮೀಕ್ಷೆ ನಡೆಸಿ ಸರ್ಕಾರ ಭತ್ತದ ಬೆಳೆಗಾರರಿಗೆ ಪರಿಹಾರ ನೀಡದಿದ್ದರೆ ಬದುಕುವುದೇ ಕಷ್ಟ ಎಂದರು.
ಇದೇ ಸಮಯದಲ್ಲಿ ಸ್ಥಳದಲ್ಲಿದ್ದ ಅಯೂಬ್ ಖಾನ್, ರಮೇಶ್ ಗೊಂಡ ಐಗಳಕೊಪ್ಪ, ಕೆರಿಯಾ ಭೋವಿ, ಪರಶುರಾಮ ಬಡಗಿ ತಮ್ಮ ಭತ್ತದ ಬೆಳೆಯ ವ್ಯಥೆಯ ಕತೆ ಹೇಳಿದರು.
ಸಿದ್ದಾಪುರದ ಕಾವಂಚೂರು ಪಂಚಾಯತ್ ನ ನೆಜ್ಜೂರು ಬಯಲು ತಾಲೂಕಿನ ಭತ್ತ ಬೆಳೆಯುವ ದೊಡ್ಡ ಕ್ಷೇತ್ರ. ಈ ಭಾಗದಲ್ಲಿ ಮೂರು ಹಂತಗಳಲ್ಲಿ ಭತ್ತದ ಬೆಳೆ ಬಿತ್ತನೆ ಮತ್ತು ಕಟಾವು ಮಾಡಲಾಗುತ್ತದೆ.ಈ ವರ್ಷ ಮಳೆ ಈ ರೈತರ ಸಂಯಮ ಪರೀಕ್ಷಿಸುವಂತೆ ತೊಂದರೆ ನೀಡಿದೆ. ಹೀಗೇ ಆದರೆ ಭತ್ತ ಬೆಳೆಯುವುದನ್ನೇ ಬಿಡಬೇಕಾಗುತ್ತದೆ ಎಂದು ಈ ರೈತರು ಅಲವತ್ತುಕೊಂಡರೆ ಇವರಿಗೆ ಪರಿಹಾರ ಕೊಡಿಸುವ ವಿಚಾರದಲ್ಲಿ ತಾನೂ ಅಸಹಾಯಕ ಎನ್ನುತ್ತಾರೆ ನಾಶಿರ್‌ಖಾನ್.
ಭೆಳೆವಿಮೆ, ಸರ್ಕಾರದ ಸೌಲಭ್ಯ, ಪರಿಹಾರ ಇವೆಲ್ಲವೂ ಅಂಬಾರಿಯ ಆನೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಾಗಿದೆ. ಕೃಷಿ ಇಲಾಖೆ ಕೂಡಾ ಬೆಳೆವಿಮೆ ಮಾಡಿಸಿದವರನ್ನು ಬಿಟ್ಟು ಉಳಿದವರಿಗೆ ಯಾವ ಅನುಕೂಲವನ್ನೂ ಮಾಡುವ ಅವಕಾಶವಿಲ್ಲ ಎಂದಿದ್ದಾರೆ.
ನೆಜ್ಜೂರು ಭಾಗದಲ್ಲಿ ಭತ್ತದ ಬೆಳೆಗೆ ಮಳೆತೊಂದರೆ ವಿಷಯ ಗಮನಕ್ಕೆ ಬಂದಿದೆ. ನಮ್ಮ ಸಿಬ್ಬಂದಿಗಳು ಕ್ಷೇತ್ರಕ್ಕೆ ತೆರಳಿ ಮಾಹಿತಿ ಕಲೆಹಾಕುತಿದ್ದಾರೆ. ಬೆಳೆವಿಮೆ ಮಾಡಿಸಿದ ರೈತರಿಗೆ ಆ ಅನುಕೂಲ ಸಿಗಲಿದೆ. ಬೆಳೆವಿಮೆ ಪಡೆಯದವರಿಗೆ ಯಾವ ಅನುಕೂಲವೂ ದೊರೆಯುವುದಿಲ್ಲ. -ಪ್ರಶಾಂತ್ -ಕೃಷಿ ಅಧಿಕಾರಿ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *