ಸಮಸ್ಯೆ ಬಗೆಹರಿಸಲಾಗದಿದ್ದರೆ ದನ ಕಾಯಲು ಹೋಗಿ

ಸಮಸ್ಯೆ ಬಗೆಹರಿಸಲಾಗದಿದ್ದರೆ ದನ ಕಾಯಲು ಹೋಗಿ,
ತೊಂದರೆ ಪರಿಹರಿಸಲಾಗದಿದ್ದರೆ ಜಾಗ ಬಿಟ್ಟು ಹೋಗಿ
ವರ್ಷವಿಡೀ ಸಮಸ್ಯೆ ಹೇಳುತಿದ್ದರೂ ಪರಿಹಾರ ದೊರೆಯುತ್ತಿಲ್ಲ, ಜನಪ್ರತಿನಿಧಿಗಳು,
ಅಧಿಕಾರಸ್ಥರಾಗಿ ಸಮಸ್ಯೆ ಬಗೆಹರಿಸಲಾಗದಿದ್ದರೆ ಆ ಸ್ಥಾನಬಿಟ್ಟುಹೋಗಿ ಎಂದು ಆಕ್ರೋಶದಿಂದ ಪ್ರಶ್ನಿಸಿದ ಸಂದರ್ಭ ಎದುರಾದದ್ದು ಗುರುವಾರ ಇಲ್ಲಿನ ತಾ.ಪಂ.ಸಭಾಭವನದಲ್ಲಿ ನಡೆದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲರ ಸಾರ್ವಜನಿಕ ಸ್ಫಂದನ ಸಭೆಯಲ್ಲಿ.
ಇಲ್ಲಿನ ತಾಲೂಕಾ ಪಂಚಾಯತ್ ನಲ್ಲಿ ವಾ.ಕ.ರಾ.ರ.ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲರ ಅಧ್ಯಕ್ಷತೆಯಲ್ಲಿ ಕುಂದು ಕೊರತೆ ಸಮಾಲೋಚನಾ ಸಭೆ ನಡೆಯಿತು.
ಸಭೆಯಲ್ಲಿ ಸ್ಥಳಿಯರು ತಮ್ಮ ಸಮಸ್ಯೆ, ಬೇಡಿಕೆಗಳನ್ನು ಮುಂದಿಟ್ಟರು. ಕೋಡ್ಸರ,ಹೇರೂರು, ಹೆಗ್ಗರಣೆ ರಸ್ತೆಯಲ್ಲಿ ವಾಹನ ವ್ಯವಸ್ಥೆ ಸರಿಯಾಗಿಲ್ಲ ಎಂದು ಸಭೆಯ ಗಮನಕ್ಕೆ ತಂದ ಕೆಲವು ಜನರು.ಸ್ಥಳೀಯರ ತಕರಾರು,
ಅಸಮಾಧಾನಕ್ಕೆ ಸರಿಯಾದ ಉತ್ತರ, ಸ್ಫಂದನ ದೊರೆಯದ ಹಿನ್ನೆಲೆಯಲ್ಲಿ ಹೆಗ್ಗರಣೆ,ಹೇರೂರು, ಕಾನಸೂರು ಭಾಗದ ಜನರು ವಾ.ಕ.ರ.ಸಾ.ಸ. ಅಧ್ಯಕ್ಷ ವಿ.ಎಸ್. ಪಾಟೀಲ ಜೊತೆ ಸ್ಥಳಿಯ ಜನಪ್ರತಿನಿಧಿಗಳಾದ ಶಾಸಕರು,ಸಂಸದರನ್ನೂ ತರಾಟೆಗೆ ತೆಗೆದುಕೊಂಡರು.
ಈ ಸಾರ್ವಜನಿಕರು, ಒಮ್ಮೆ ಅಧಿಕಾರಿಗಳು ಮತ್ತೊಮ್ಮೆ ಜನಪ್ರತಿನಿಧಿಗಳು ಈಗ ನೀವು ಇಡೀವರ್ಷ ಸಮಸ್ಯೆ ಕೇಳಿ ಮತ್ತೂ ಅದೇ ಸಮಸ್ಯೆ ಮುಂದುವರಿಯುವುದಾದರೆ ನೀವ್ಯಾಕೆ ಆ ಸ್ಥಾನದಲ್ಲಿರಬೇಕು. ನಮ್ಮ ಸಂಸದರು,ಶಾಸಕರೂ ನಮ್ಮ ಅಹವಾಲು, ಸಮಸ್ಯೆಗಳು ತೊಂದರೆಗಳನ್ನು ಕೇಳುತ್ತಿಲ್ಲ.
ಸಾರ್ವಜನಿಕರ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲವಾದರೆ ನೀವೆಲ್ಲಾ ಯಾಕೆ ಆ ಸ್ಥಾನಗಳ ಲ್ಲಿರಬೇಕು ಎಂದು ಪ್ರಶ್ನಿಸುವ ಮೂಲಕ ಅಧ್ಯಕ್ಷರು ಅವರೊಂದಿಗಿದ್ದ ಸಭಾಸದರಿಗೂ ಮುಜುಗರ ವಾಗುವಂತೆ ತಕರಾರು ದಾಖಲಿಸಿದರು.

ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೇ ನಂ1, ಆದರೆ ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ!
ಕೆ.ಡಿ.ಪಿ.,ಸಾಮಾನ್ಯ ಸಭೆಗಳ ಬಗ್ಗೆ ಅಧಿಕಾರಿಗಳ ಅಸಡ್ಡೆ,ಕ್ರಮಕ್ಕೆ ಶಿಫಾರಸ್ಸು
ಸಿದ್ಧಾಪುರ ತಾ.ಪಂ.ನಪ್ರತಿ ಕೆ.ಡಿ.ಪಿ.ಸಭೆಗಳಲ್ಲಿ ಕಾಟಾಚಾರಕ್ಕೆ ಬರುವುದು,ವರದಿ ಓದುವುದು ಮಾಡುತ್ತಿದ್ದ ಅಧಿಕಾರಿಗಳು ಇತ್ತೀಚೆಗೆ ಸಭೆಗಳಿಗೆ ಬರುವುದನ್ನೇ ನಿಲ್ಲಿಸಿದ ದುರ್ವರ್ತನೆಯ ಹಿನ್ನೆಲೆಯಲ್ಲಿ ತಾಲೂಕಿನ ಕೆಲವು ಇಲಾಖೆಗಳ ಅಧಿಕಾರಿಗಳ ಮೇಲೆ ಕ್ರಮಕ್ಕೆ ಜಿ.ಪಂ. ಮುಖ್ಯಕಾರ್ಯದರ್ಶಿ ಗಳಿಗೆ ಬರೆದು ತಿಳಿಸಲು ಇಂದಿನ ತಾ.ಪಂ. ಮಾಸಿಕ ಕೆ.ಡಿ.ಪಿ.ಸಭೆ ಆಗ್ರಹಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *