ಸಮಸ್ಯೆ ಬಗೆಹರಿಸಲಾಗದಿದ್ದರೆ ದನ ಕಾಯಲು ಹೋಗಿ

ಸಮಸ್ಯೆ ಬಗೆಹರಿಸಲಾಗದಿದ್ದರೆ ದನ ಕಾಯಲು ಹೋಗಿ,
ತೊಂದರೆ ಪರಿಹರಿಸಲಾಗದಿದ್ದರೆ ಜಾಗ ಬಿಟ್ಟು ಹೋಗಿ
ವರ್ಷವಿಡೀ ಸಮಸ್ಯೆ ಹೇಳುತಿದ್ದರೂ ಪರಿಹಾರ ದೊರೆಯುತ್ತಿಲ್ಲ, ಜನಪ್ರತಿನಿಧಿಗಳು,
ಅಧಿಕಾರಸ್ಥರಾಗಿ ಸಮಸ್ಯೆ ಬಗೆಹರಿಸಲಾಗದಿದ್ದರೆ ಆ ಸ್ಥಾನಬಿಟ್ಟುಹೋಗಿ ಎಂದು ಆಕ್ರೋಶದಿಂದ ಪ್ರಶ್ನಿಸಿದ ಸಂದರ್ಭ ಎದುರಾದದ್ದು ಗುರುವಾರ ಇಲ್ಲಿನ ತಾ.ಪಂ.ಸಭಾಭವನದಲ್ಲಿ ನಡೆದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲರ ಸಾರ್ವಜನಿಕ ಸ್ಫಂದನ ಸಭೆಯಲ್ಲಿ.
ಇಲ್ಲಿನ ತಾಲೂಕಾ ಪಂಚಾಯತ್ ನಲ್ಲಿ ವಾ.ಕ.ರಾ.ರ.ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲರ ಅಧ್ಯಕ್ಷತೆಯಲ್ಲಿ ಕುಂದು ಕೊರತೆ ಸಮಾಲೋಚನಾ ಸಭೆ ನಡೆಯಿತು.
ಸಭೆಯಲ್ಲಿ ಸ್ಥಳಿಯರು ತಮ್ಮ ಸಮಸ್ಯೆ, ಬೇಡಿಕೆಗಳನ್ನು ಮುಂದಿಟ್ಟರು. ಕೋಡ್ಸರ,ಹೇರೂರು, ಹೆಗ್ಗರಣೆ ರಸ್ತೆಯಲ್ಲಿ ವಾಹನ ವ್ಯವಸ್ಥೆ ಸರಿಯಾಗಿಲ್ಲ ಎಂದು ಸಭೆಯ ಗಮನಕ್ಕೆ ತಂದ ಕೆಲವು ಜನರು.ಸ್ಥಳೀಯರ ತಕರಾರು,
ಅಸಮಾಧಾನಕ್ಕೆ ಸರಿಯಾದ ಉತ್ತರ, ಸ್ಫಂದನ ದೊರೆಯದ ಹಿನ್ನೆಲೆಯಲ್ಲಿ ಹೆಗ್ಗರಣೆ,ಹೇರೂರು, ಕಾನಸೂರು ಭಾಗದ ಜನರು ವಾ.ಕ.ರ.ಸಾ.ಸ. ಅಧ್ಯಕ್ಷ ವಿ.ಎಸ್. ಪಾಟೀಲ ಜೊತೆ ಸ್ಥಳಿಯ ಜನಪ್ರತಿನಿಧಿಗಳಾದ ಶಾಸಕರು,ಸಂಸದರನ್ನೂ ತರಾಟೆಗೆ ತೆಗೆದುಕೊಂಡರು.
ಈ ಸಾರ್ವಜನಿಕರು, ಒಮ್ಮೆ ಅಧಿಕಾರಿಗಳು ಮತ್ತೊಮ್ಮೆ ಜನಪ್ರತಿನಿಧಿಗಳು ಈಗ ನೀವು ಇಡೀವರ್ಷ ಸಮಸ್ಯೆ ಕೇಳಿ ಮತ್ತೂ ಅದೇ ಸಮಸ್ಯೆ ಮುಂದುವರಿಯುವುದಾದರೆ ನೀವ್ಯಾಕೆ ಆ ಸ್ಥಾನದಲ್ಲಿರಬೇಕು. ನಮ್ಮ ಸಂಸದರು,ಶಾಸಕರೂ ನಮ್ಮ ಅಹವಾಲು, ಸಮಸ್ಯೆಗಳು ತೊಂದರೆಗಳನ್ನು ಕೇಳುತ್ತಿಲ್ಲ.
ಸಾರ್ವಜನಿಕರ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲವಾದರೆ ನೀವೆಲ್ಲಾ ಯಾಕೆ ಆ ಸ್ಥಾನಗಳ ಲ್ಲಿರಬೇಕು ಎಂದು ಪ್ರಶ್ನಿಸುವ ಮೂಲಕ ಅಧ್ಯಕ್ಷರು ಅವರೊಂದಿಗಿದ್ದ ಸಭಾಸದರಿಗೂ ಮುಜುಗರ ವಾಗುವಂತೆ ತಕರಾರು ದಾಖಲಿಸಿದರು.

ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೇ ನಂ1, ಆದರೆ ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ!
ಕೆ.ಡಿ.ಪಿ.,ಸಾಮಾನ್ಯ ಸಭೆಗಳ ಬಗ್ಗೆ ಅಧಿಕಾರಿಗಳ ಅಸಡ್ಡೆ,ಕ್ರಮಕ್ಕೆ ಶಿಫಾರಸ್ಸು
ಸಿದ್ಧಾಪುರ ತಾ.ಪಂ.ನಪ್ರತಿ ಕೆ.ಡಿ.ಪಿ.ಸಭೆಗಳಲ್ಲಿ ಕಾಟಾಚಾರಕ್ಕೆ ಬರುವುದು,ವರದಿ ಓದುವುದು ಮಾಡುತ್ತಿದ್ದ ಅಧಿಕಾರಿಗಳು ಇತ್ತೀಚೆಗೆ ಸಭೆಗಳಿಗೆ ಬರುವುದನ್ನೇ ನಿಲ್ಲಿಸಿದ ದುರ್ವರ್ತನೆಯ ಹಿನ್ನೆಲೆಯಲ್ಲಿ ತಾಲೂಕಿನ ಕೆಲವು ಇಲಾಖೆಗಳ ಅಧಿಕಾರಿಗಳ ಮೇಲೆ ಕ್ರಮಕ್ಕೆ ಜಿ.ಪಂ. ಮುಖ್ಯಕಾರ್ಯದರ್ಶಿ ಗಳಿಗೆ ಬರೆದು ತಿಳಿಸಲು ಇಂದಿನ ತಾ.ಪಂ. ಮಾಸಿಕ ಕೆ.ಡಿ.ಪಿ.ಸಭೆ ಆಗ್ರಹಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *