ಹಿರಿಯರ ಸಂಸ್ಮರಣೆ. ಸಭಾಮಂದಿರ ಉದ್ಘಾಟನೆ

ಶ್ರೀ ಭುವನೇಶ್ವರಿ ತಾಳಮದ್ದಳೆ ಕೂಟ, ಕೇಶವನಾರಾಯಣ ಟ್ರಸ್ಟ್, ಅನಂತ ಯಕ್ಷಕಲಾ ಪ್ರತಿಷ್ಠಾನ ಇವುಗಳ ಸಹಯೋಗದಲ್ಲಿ ಕೇಶವನಾರಾಯಣ ದೇವಾಲಯದ ನೂತನ ಸಭಾಮಂದಿರ ಉದ್ಘಾಟನೆ ಹಾಗೂ ಹಿರಿಯರ ಸಂಸ್ಮರಣೆ ಕಾರ್ಯಕ್ರಮ ನ.10ರಂದು ಕಶಿಗೆ-ಹೇಮಗಾರಿನಲ್ಲಿ ನಡೆಯಲಿದೆ ಎಂದು ದೇವಾಲಯ ಆಡಳಿತ ಸಮಿತಿ ಕಾರ್ಯದರ್ಶಿ ಜಿ.ಕೆ.ಭಟ್ಟ ಕಶಿಗೆ ತಿಳಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರಗಳನ್ನು ನೀಡಿ ನ.10ರ ಬೆಳಿಗ್ಗೆ 10.30ಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಭಾಮಂದಿರ ಉದ್ಘಾಟಿಸುವರು. ನಂತರ ನಡೆಯುವ ಹಿರಿಯರ ಸಂಸ್ಮರಣೆ ಕಾರ್ಯಕ್ರಮವನ್ನು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ|ಎಂ.ಎ.ಹೆಗಡೆ ಉದ್ಘಾಟಿಸುವರು.
ಕೇಶವನಾರಾಯಣ ಟ್ರಸ್ಟ ಅಧ್ಯಕ್ಷ ವಿ| ಕೃಷ್ಣ ಭಟ್ಟ ಅಡವಿತೋಟ ಅಧ್ಯಕ್ಷತೆವಹಿಸಲಿದ್ದು ಅಭ್ಯಾಗತರಾಗಿ ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ, ಹಿರಿಯ ವಕೀಲ ಜಿ.ಎಸ್.ಹೆಗಡೆ ಬೆಳ್ಳೆಮಡಿಕೆ, ಶಿ.ಪ್ರ.ಸಮಿತಿ ಕಾರ್ಯದರ್ಶಿ ಕೆ.ಐ.ಹೆಗಡೆ ತಾರಗೋಡ ಪಾಲ್ಗೊಳ್ಳುವರು.
ಮಧ್ಯಾಹ್ನ 3ಕ್ಕೆ ಚಿಂತನಗೋಷ್ಠಿ ನಡೆಯಲಿದ್ದು ಜಿ.ಎಲ್.ಹೆಗಡೆ ಕುಮಟಾ ಅಧ್ಯಕ್ಷತೆವಹಿಸುವರು. ಪತ್ರಕರ್ತ ರವೀಂದ್ರ ಭಟ್ಟ ಐನಕೈ, ವಕೀಲ ಪ್ರಕಾಶ ಹೆಗಡೆ ಅಭ್ಯಾಗತರಾಗಿ ಪಾಲ್ಗೊಳ್ಳಲಿದ್ದು ಕಶಿಗೆ ಯಕ್ಷಗಾನ ಮೇಳ ವಿಷಯದ ಕುರಿತು ಕಾಶ್ಯಪ ಪರ್ಣಕುಟಿ, ಮರಗುಡಿ ಮೇಳ ವಿಷಯದ ಕುರಿತು ಟಿ.ಎಂ.ಸುಬ್ಬರಾಯ ಪ್ರಬಂಧ ಮಂಡಿಸುವರು.
ನಂತರ ಸನ್ಮಾನ ಮತ್ತು ಸಮಾರೋಪ ನಡೆಯಲಿದ್ದು ಉಮಾಕಾಂತ ಭಟ್ಟ ಕೆರೆಕೈ ಅಧ್ಯಕ್ಷತೆವಹಿಸುವರು. ಅಭ್ಯಾಗತರಾಗಿ ಡಾ|ಶಶಿಭೂಷಣ ಹೆಗಡೆ, ದಿವಾಕರ ಹೆಗಡೆ ಕೆರೆಹೊಂಡ ಪಾಲ್ಗೊಳ್ಳುವರು.
ಹಿರಿಯ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆಯವರನ್ನು ಸನ್ಮಾನಿಸಲಾಗುವದು. ಪ್ರಮೋದ ಹೆಗಡೆ ಯಲ್ಲಾಪುರ ಸಮಾರೋಪ ಮಾತುಗಳನ್ನಾಡಲಿದ್ದು ಸೀತಾರಾಮ ಭಟ್ಟ ಅಡವಿತೋಟ,ಪ್ರಕಾಶ ಹೆಗಡೆ ತೊರಮೆ ಉಪಸ್ಥಿತರಿರುವರು. ರಾತ್ರಿ 9ರಿಂದ ಕರ್ಣಾರ್ಜುನ ತಾಳಮದ್ದಳೆ ನಡೆಯುವದು ಎಂದರು.
ಭುವನೇಶ್ವರಿ ತಾಳಮದ್ದಳೆ ಕೂಟದ 31ನೇ ಚಾರ್ತುಮಾಸ್ಯದ ವಿಶೇಷ ಕಾರ್ಯಕ್ರಮವಾಗಿ ಹಿಂದಿನ ತಲೆಮಾರಿನ ಕಲಾವಿದರ ಸಂಸ್ಮರಣೆಯನ್ನು ಹಮ್ಮಿಕೊಂಡಿದ್ದು ಕಶಿಗೆ ಯಕ್ಷಗಾನ ಮೇಳವನ್ನು 1934-35ರಲ್ಲಿ ಗಣೇಶ ರಾಮ ಭಟ್ಟ ಸ್ಥಾಪಿಸಿ ಎಂಟು ವರ್ಷ ನಡೆಸಿದರು.
ಅನಂತರ ಕೇಶವ ಭಟ್ಟ 18 ವರ್ಷ ಮೇಳ ನಡೆಸಿದರು. ನಂತರ ಅವರು ಮತ್ತು ಹೇಮಗಾರ ಮಂಜುನಾಥ ಹೆಗಡೆ ಕೊಳಗಿ ಮೇಳದ ಕಲಾವಿದರಾಗಿದ್ದರು. ಮರಗುಡಿ ಮೇಳದೊಂದಿಗೂ ಕೂಡಾಟ ನಡೆದಿತ್ತು ಎಂದು ಹಿರಿಯರು ನೆನಪಿಸಿಕೊಳ್ಳುತ್ತಾರೆ. ಅವರೆಲ್ಲರನ್ನೂ ಸ್ಮರಿಸುವ ಕಾರ್ಯಕ್ರಮ ಹಿರಿಯರ ಸಂಸ್ಮರಣೆ ಎಂದು ಜಿ.ಕೆ.ಭಟ್ಟ ಕಶಿಗೆ ಹೇಳಿದರು.
sÀತ್ತದ ಬೆಳೆ ಬಹುಪಾಲು ಜೊಳ್ಳು, ಸಂಪೂರ್ಣ ಹಾನಿಗೆ ಒಳಗಾದ ರೈತ
ಈ ಬಾರಿಯ ಮಳೆಯ ಅಬ್ಬರಕ್ಕೆ ಹಲವು ರೀತಿಯಲ್ಲಿ ಸಮಸ್ಯೆಗಳನ್ನೆದುರಿಸಿದ ಕೃಷಿಕರು ಹೇಗೋ ಕಷ್ಟಪಟ್ಟು 3-4 ಬಾರಿ ಭತ್ತದ ಸಸಿ ನಾಟಿ ಮಾಡಿ ಬೆಳೆ ಕಟಾವು ಮಾಡುವ ಸಂದರ್ಭದಲ್ಲಿ ಹಲವು ರೀತಿಯ ಸಂಕಷ್ಠಗಳನ್ನ ಎದುರಿಸಬೇಕಾಗಿ ಬಂದಿದೆ.
ಹಲವು ರೈತರ ಕಟಾವು ಮಾಡಿದ ಬೆಳೆ ಮಳೆಯಲ್ಲಿ ನೆಂದಿದೆ. ಕೆಲವರದ್ದು ಸಸಿಗಳು ಬೆಳೆದಿಲ್ಲ. ಆದರೆ ಪಟ್ಟಣದ ಹೊಸೂರು ಗ್ರಾಮದ( ಸದ್ಯ ಪಟ್ಟಣದ ಇಂದಿರಾನಗರದಲ್ಲಿ ವಾಸ್ತವ್ಯ ಹೊಂದಿರುವ) ನೆಲ್ಲಿಕೊಪ್ಪ ಎನ್ನುವಲ್ಲಿ(ಸ.ನಂ.31) ನಾರಾಯಣ ಬೊಮ್ಮ ಮಡಿವಾಳ ಎನ್ನುವ ಕೃಷಿಕರ ಭತ್ತದ ಬೆಳೆಯ ಸ್ಥಿತಿ ಗಂಭೀರವಾಗಿದೆ.
ಅವರ ಭತ್ತದ ಗದ್ದೆಯ ಬೆಳೆ ಸಂಪೂರ್ಣವಾಗಿ ಜೊಳ್ಳಾಗಿ ಒಣಗತೊಡಗಿವೆ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವ ಸ್ಥಿತಿ ಅವರದ್ದಾಗಿದೆ.
ಸುಮಾರು 1 ಎಕರೆ 31 ಗುಂಟೆ ಭತ್ತದ ಗದ್ದೆ ಹೊಂದಿರುವ ನಾರಾಯಣ ಮಡಿವಾಳರು ಮಟ್ಟಳಗ ಭತ್ತದ ಬೀಜಗಳನ್ನು ಸಸಿಮಡಿ ಮಾಡಿ ನಂತರ ನಾಟಿ ಮಾಡಿದ್ದರು. ಮಳೆಯ ನೀರಿನಿಂದ ಸಸಿಗಳು ಕೊಳೆತರೂ ಮತ್ತೆ ನಾಟಿ ಮಾಡಿದ್ದರು. ಸಮರ್ಪಕವಾಗಿ ಗೊಬ್ಬರ ನೀಡಿ ಔಷಧಿಯನ್ನೂ ಸಿಂಪರಣೆ ಮಾಡಿದ್ದರು. ಉತ್ತಮ ರೀತಿಯಲ್ಲಿ ಬೆಳೆದ ಭತ್ತದ ಸಸಿಗಳು ತೆನೆಯೊಡೆದು ಕಾಳುಗಳು ಗಟ್ಟಿಯಾಗುವಾಗ ಸಂಪೂರ್ಣ ಜೊಳ್ಳಾಗಿವೆ.
ಪ್ರತಿವರ್ಷ 40ರಿಂದ 45 ಚೀಲ ಭತ್ತ ಬೆಳೆಯುತ್ತಿದ್ದ ಜಮೀನಿನಲ್ಲಿ ಈ ಬಾರಿ ಕನಿಷ್ಠ 50 ಚೀಲ ಭತ್ತ ದೊರೆಯಬಹುದು ಎನ್ನುವಷ್ಟು ಫಸಲು ಉತ್ತಮವಾಗಿದೆ. ಆದರೆ ಭತ್ತದ ತೆನೆಗಳೆಲ್ಲ ಜೊಳ್ಳಾಗಿದ್ದು, ಇನ್ನೂ ಗಟ್ಟಿಯಾಗುತ್ತಿರುವ ಕಾಳುಗಳೂ ಜೊಳ್ಳಾಗುವ ಲಕ್ಷಣ ಕಂಡುಬರುತ್ತಿದೆ. 50 ಚೀಲವಿರಲಿ, ಕನಿಷ್ಠ ಪಕ್ಷ 10 ಚೀಲ ಒಳ್ಳೆಯ ಭತ್ತ ದೊರೆಯುವ ಸಾಧ್ಯತೆಯೂ ಕಂಡುಬರುತ್ತಿಲ್ಲ. ಅವರ ಭತ್ತದ ಆ ಪ್ರದೇಶದ ಇತರ ಹಲವರ ಭತ್ತದ ಬೆಳೆಯಲ್ಲೂ ಜೊಳ್ಳಾಗಿರುವದು ಕಂಡುಬರುತ್ತಿದೆ.
ಸಸಿನಾಟಿ, ಗೊಬ್ಬರ, ಇನ್ನಿತರ ಕೃಷಿಕಾರ್ಯಗಳ ವೆಚ್ಚವೂ ನಾರಾಯಣ ಮಡಿವಾಳರಿಗೆ ದೊರೆಯುವ ಭತ್ತದಿಂದ ಗಿಟ್ಟುವಂತಿಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *