

ಅಧಿಕಾರಿಗಳಿಗೂ ಸಾರ್ವಜನಿಕರಿಗೂ ಸಂಪರ್ಕ ಕಲ್ಪಿಸಿ ಅವರ ಕುಂದು-ಕೊರತೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಯಾವ ಅಧಿಕಾರಿಗಳು ಬಾರದೇ ತಾಲೂಕಿನ ಬೇಡ್ಕಣಿಯಲ್ಲಿ ಕಾಟಾಚಾರಕ್ಕೆ ಗ್ರಾಮ ಸಭೆ ನಡೆಯಿತು.
ಸರಕಾರದ ಆದೇಶದಂತೆ ಮಿಷನ್ ಅಂತ್ಯೋದಯ ಹಾಗೂ 2020-21ರ ನಮ್ಮ ಗ್ರಾಮ ನಮ್ಮ ಯೋಜನೆ ತಯಾರಿಕೆಯ ಗ್ರಾಮ ಸಭೆಯನ್ನುತಾಲೂಕಿನ ಬೇಡ್ಕಣಿಯ ಗ್ರಾಮ ಪಂಚಾಯತ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ಬೆಳಿಗ್ಗೆ 10-30ಕ್ಕೆ ಕರೆಯಲಾದ ಸಭೆ 12-30ಕ್ಕೆ ಪ್ರಾರಂಭವಾಯಿತು. ಆದರೂ ನೋಡಲ್ ಆಫೀಸರ್ ಶಿಶು ಅಭಿವೃಧ್ಧಿ ಯೋಜನಾಧಿಕಾರಿ, ಶಿಕ್ಷಣ, ಪಶುಸಂಗೋಪನೆ, ಅರಣ್ಯ, ತೋಟಗಾರಿಕೆ ಅಧಿಕಾರಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವ ಇಲಾಖೆಯ ಅಧಿಕಾರಿಗಳೂ ಗ್ರಾಮಸಭೆ ಕಡೆ ಸುಳಿಯಲಿಲ್ಲ.
ಬೆರಳೆಣಿಕೆ ಜನರು ಸಭೆಯಲ್ಲಿದ್ದರೂ ಬಹುತೇಕರು ಪಂಚಾಯತ ಸಿಬ್ಬಂದಿಗಳೇ ಆಗಿದ್ದರು. ಅಧಿಕಾರಿಗಳು ಬರುವುದಿ¯ ್ಲ. ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ಇಲಾಖೆಗಳಿಗೆ ಹೋದರಾಯಿತು ಎಂದು ಸಾರ್ವಜನಿಕರು ಗ್ರಾಮ ಸಭೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿದ್ದಾರೆ.
ಸಭೆಯಲ್ಲಿ ಪ್ರಭಾರೆ ಪಿಡಿಓ ನಾಗೇಶ.ಎಚ್.ಪಿ ಮಾತನಾಡಿ ಮಿಷನ್ ಅಂತ್ಯೋದಯದ ಕುರಿತು ಮಾಹಿತಿ ನೀಡಿ, ಸರ್ಕಾರ ಕೂಡಲೇ ಕ್ರಿಯಾ ಯೋಜನೆ ತಯಾರಿಸುವಂತೆ ಆದೇಶಿಸಿದೆ. ಆಧ್ದರಿಂದ ಕ್ರೀಯಾ ಯೋಜನೆ ತಯಾರಿಸುವುದು ಅನಿವಾರ್ಯ. ಸಭೆಯಲ್ಲಿ ನಮ್ಮ ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಿಳಿಸಬೇಕು. ಯೋಜನೆಗಳನ್ನು ಜನರಿಗೆ ತಿಳಿಸಬೇಕು. ನೀವು ಸಹಕರಿಸಬೇಕು ಎಂದರು.
ಇದರಿಂದ ಸಮಾಧಾನವಾಗದ ಸಾರ್ವಜನಿಕರು ಹಾಗಾದರೆ ಎಲ್ಲಾ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀವು ನೀಡುವಿರಾ? ನಮ್ಮಲ್ಲಿರುವ ಕೆಲವು ಪ್ರಶ್ನೆಗಳಿಗೆ ನಿಮ್ಮಲ್ಲಿ ಉತ್ತರ ಇದೆಯಾ?ಎಂದು ಪ್ರಶ್ನಿಸಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
