ಭತ್ತದ ಬೆಳೆ ಬಹುಪಾಲು ಜೊಳ್ಳು, ಸಂಪೂರ್ಣ ಹಾನಿಗೆ ಒಳಗಾದ ರೈತ


ಈ ಬಾರಿಯ ಮಳೆಯ ಅಬ್ಬರಕ್ಕೆ ಹಲವು ರೀತಿಯಲ್ಲಿ ಸಮಸ್ಯೆಗಳನ್ನೆದುರಿಸಿದ ಕೃಷಿಕರು ಹೇಗೋ ಕಷ್ಟಪಟ್ಟು 3-4 ಬಾರಿ ಭತ್ತದ ಸಸಿ ನಾಟಿ ಮಾಡಿ ಬೆಳೆ ಕಟಾವು ಮಾಡುವ ಸಂದರ್ಭದಲ್ಲಿ ಹಲವು ರೀತಿಯ ಸಂಕಷ್ಠಗಳನ್ನ ಎದುರಿಸಬೇಕಾಗಿ ಬಂದಿದೆ.
ಹಲವು ರೈತರ ಕಟಾವು ಮಾಡಿದ ಬೆಳೆ ಮಳೆಯಲ್ಲಿ ನೆಂದಿದೆ. ಕೆಲವರದ್ದು ಸಸಿಗಳು ಬೆಳೆದಿಲ್ಲ. ಆದರೆ ಪಟ್ಟಣದ ಹೊಸೂರು ಗ್ರಾಮದ( ಸದ್ಯ ಪಟ್ಟಣದ ಇಂದಿರಾನಗರದಲ್ಲಿ ವಾಸ್ತವ್ಯ ಹೊಂದಿರುವ) ನೆಲ್ಲಿಕೊಪ್ಪ ಎನ್ನುವಲ್ಲಿ(ಸ.ನಂ.31) ನಾರಾಯಣ ಬೊಮ್ಮ ಮಡಿವಾಳ ಎನ್ನುವ ಕೃಷಿಕರ ಭತ್ತದ ಬೆಳೆಯ ಸ್ಥಿತಿ ಗಂಭೀರವಾಗಿದೆ.
ಅವರ ಭತ್ತದ ಗದ್ದೆಯ ಬೆಳೆ ಸಂಪೂರ್ಣವಾಗಿ ಜೊಳ್ಳಾಗಿ ಒಣಗತೊಡಗಿವೆ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವ ಸ್ಥಿತಿ ಅವರದ್ದಾಗಿದೆ.
ಸುಮಾರು 1 ಎಕರೆ 31 ಗುಂಟೆ ಭತ್ತದ ಗದ್ದೆ ಹೊಂದಿರುವ ನಾರಾಯಣ ಮಡಿವಾಳರು ಮಟ್ಟಳಗ ಭತ್ತದ ಬೀಜಗಳನ್ನು ಸಸಿಮಡಿ ಮಾಡಿ ನಂತರ ನಾಟಿ ಮಾಡಿದ್ದರು. ಮಳೆಯ ನೀರಿನಿಂದ ಸಸಿಗಳು ಕೊಳೆತರೂ ಮತ್ತೆ ನಾಟಿ ಮಾಡಿದ್ದರು. ಸಮರ್ಪಕವಾಗಿ ಗೊಬ್ಬರ ನೀಡಿ ಔಷಧಿಯನ್ನೂ ಸಿಂಪರಣೆ ಮಾಡಿದ್ದರು. ಉತ್ತಮ ರೀತಿಯಲ್ಲಿ ಬೆಳೆದ ಭತ್ತದ ಸಸಿಗಳು ತೆನೆಯೊಡೆದು ಕಾಳುಗಳು ಗಟ್ಟಿಯಾಗುವಾಗ ಸಂಪೂರ್ಣ ಜೊಳ್ಳಾಗಿವೆ.
ಪ್ರತಿವರ್ಷ 40ರಿಂದ 45 ಚೀಲ ಭತ್ತ ಬೆಳೆಯುತ್ತಿದ್ದ ಜಮೀನಿನಲ್ಲಿ ಈ ಬಾರಿ ಕನಿಷ್ಠ 50 ಚೀಲ ಭತ್ತ ದೊರೆಯಬಹುದು ಎನ್ನುವಷ್ಟು ಫಸಲು ಉತ್ತಮವಾಗಿದೆ. ಆದರೆ ಭತ್ತದ ತೆನೆಗಳೆಲ್ಲ ಜೊಳ್ಳಾಗಿದ್ದು, ಇನ್ನೂ ಗಟ್ಟಿಯಾಗುತ್ತಿರುವ ಕಾಳುಗಳೂ ಜೊಳ್ಳಾಗುವ ಲಕ್ಷಣ ಕಂಡುಬರುತ್ತಿದೆ. 50 ಚೀಲವಿರಲಿ, ಕನಿಷ್ಠ ಪಕ್ಷ 10 ಚೀಲ ಒಳ್ಳೆಯ ಭತ್ತ ದೊರೆಯುವ ಸಾಧ್ಯತೆಯೂ ಕಂಡುಬರುತ್ತಿಲ್ಲ. ಅವರ ಭತ್ತದ ಆ ಪ್ರದೇಶದ ಇತರ ಹಲವರ ಭತ್ತದ ಬೆಳೆಯಲ್ಲೂ ಜೊಳ್ಳಾಗಿರುವದು ಕಂಡುಬರುತ್ತಿದೆ.
ಸಸಿನಾಟಿ, ಗೊಬ್ಬರ, ಇನ್ನಿತರ ಕೃಷಿಕಾರ್ಯಗಳ ವೆಚ್ಚವೂ ನಾರಾಯಣ ಮಡಿವಾಳರಿಗೆ ದೊರೆಯುವ ಭತ್ತದಿಂದ ಗಿಟ್ಟುವಂತಿಲ್ಲ.
ಅಪಾರ ಪ್ರಮಾಣದಲ್ಲಿ ಭತ್ತದ ಕಾಳುಗಳು ಜೊಳ್ಳಾಗಿರುವದಕ್ಕೆ ಪ್ರಾಕೃತಿಕ ವಿದ್ಯಮಾನವೋ, ಇನ್ಯಾವ ಕೀಟ ಬಾಧೆ ಕಾರಣವೋ? ಆದರೆ ಕೃಷಿಯನ್ನೇ ನಂಬಿದ ರೈತರು ಈ ರೀತಿಯ ನಷ್ಠವನ್ನು ಎದುರಿಸಲಾರರು. ಬೆಳೆಯನ್ನ ನಂಬಿ ಜೀವನ ನಡೆಸುವ, ಕೃಷಿ ಕಾರ್ಯಕ್ಕೆ ಸಾಲ ಮಾಡುವ ರೈತರಿಗೆ ಬೆಳೆ ಈ ರೀತಿ ಸಂಪೂರ್ಣವಾಗಿ ಕೈಕೊಟ್ಟರೆ ಮಾಡುವದಾದರೂ ಏನು ಎನ್ನುವದು ನಾರಾಯಣ ಮಡಿವಾಳರ ಪ್ರಶ್ನೆಯಾಗಿದೆ.
ವಿಪರ್ಯಾಸದ ಸಂಗತಿಯೆಂದರೆ ಬೆಳೆವಿಮೆ ಅಥವಾ ಇನ್ನಿತರ ಪರಿಹಾರಗಳು ಕೃಷಿಕರಿಗಾಗುವ ಈ ರೀತಿಯ ಹಾನಿಗೆ ಲಭ್ಯವಾಗುತ್ತಿಲ್ಲ. ಕಣ್ಣೆದುರು ನಷ್ಠವಾಗಿದ್ದು ಕಂಡುಬಂದರೂ ನಿಯಮಗಳು ಇಂಥವನ್ನು ಪರಿಗಣಿಸದಿರುವದು ನಿಜಕ್ಕೂ ಬೆಳೆ ನಷ್ಠವಾದ ರೈತರಿಗೆ ಆಗುವ ಅನ್ಯಾಯ. ಜನಪ್ರತಿನಿಧಿಗಳು, ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಈ ರೀತಿ ಹಾನಿಗೊಳಗಾದ ರೈತರಿಗೆ ನೆರವಾಗುವಲ್ಲಿ ಜವಾಬ್ದಾರಿಯುತವಾಗಿ ಕ್ರಮ ವಹಿಸಬೇಕಿದೆ ಎನ್ನುವದು ಹಲವು ಕೃಷಿಕರ ಅಭಿಪ್ರಾಯವಾಗಿದೆ.
ನಾರಾಯಣ ಮಡಿವಾಳರ ಭತ್ತದ ಗದ್ದೆಗೆ ಕೃಷಿ ಅಧಿಕಾರಿಗಳು ಈಗಾಗಲೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ಜೊಳ್ಳಾಗುವದಕ್ಕೆ ನಿಖರ ಕಾರಣಗಳು ಕಂಡುಬಂದಿಲ್ಲ ಎಂದು ತಿಳಿದುಬಂದಿದೆ. ಅಧಿಕಾರಿಗಳು, ಸಾರ್ವಜನಿಕರು ಇಲ್ಲದೆ
ಕಾಟಾಚಾರಕ್ಕೆ
ನಡೆದ ಗ್ರಾಮ ಸಭೆ
ಅಧಿಕಾರಿಗಳಿಗೂ ಸಾರ್ವಜನಿಕರಿಗೂ ಸಂಪರ್ಕ ಕಲ್ಪಿಸಿ ಅವರ ಕುಂದು-ಕೊರತೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಯಾವ ಅಧಿಕಾರಿಗಳು ಬಾರದೇ ತಾಲೂಕಿನ ಬೇಡ್ಕಣಿಯಲ್ಲಿ ಕಾಟಾಚಾರಕ್ಕೆ ಗ್ರಾಮ ಸಭೆ ನಡೆಯಿತು.
ಸರಕಾರದ ಆದೇಶದಂತೆ ಮಿಷನ್ ಅಂತ್ಯೋದಯ ಹಾಗೂ 2020-21ರ ನಮ್ಮ ಗ್ರಾಮ ನಮ್ಮ ಯೋಜನೆ ತಯಾರಿಕೆಯ ಗ್ರಾಮ ಸಭೆಯನ್ನುತಾಲೂಕಿನ ಬೇಡ್ಕಣಿಯ ಗ್ರಾಮ ಪಂಚಾಯತ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ಬೆಳಿಗ್ಗೆ 10-30ಕ್ಕೆ ಕರೆಯಲಾದ ಸಭೆ 12-30ಕ್ಕೆ ಪ್ರಾರಂಭವಾಯಿತು. ಆದರೂ ನೋಡಲ್ ಆಫೀಸರ್ ಶಿಶು ಅಭಿವೃಧ್ಧಿ ಯೋಜನಾಧಿಕಾರಿ, ಶಿಕ್ಷಣ, ಪಶುಸಂಗೋಪನೆ, ಅರಣ್ಯ, ತೋಟಗಾರಿಕೆ ಅಧಿಕಾರಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವ ಇಲಾಖೆಯ ಅಧಿಕಾರಿಗಳೂ ಗ್ರಾಮಸಭೆ ಕಡೆ ಸುಳಿಯಲಿಲ್ಲ.
ಬೆರಳೆಣಿಕೆ ಜನರು ಸಭೆಯಲ್ಲಿದ್ದರೂ ಬಹುತೇಕರು ಪಂಚಾಯತ ಸಿಬ್ಬಂದಿಗಳೇ ಆಗಿದ್ದರು. ಅಧಿಕಾರಿಗಳು ಬರುವುದಿ¯ ್ಲ. ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ಇಲಾಖೆಗಳಿಗೆ ಹೋದರಾಯಿತು ಎಂದು ಸಾರ್ವಜನಿಕರು ಗ್ರಾಮ ಸಭೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *