ವಾ.ಕ.ರಾ.ರ.ಸಾ.ಸ. ಅಧ್ಯಕ್ಷರ ಕಾರ್ಯಕ್ರಮದಲ್ಲಿ ಹೊಸಪೀಳಿಗೆಯ ಕಾಳಜಿ!


ಸಿದ್ಧಾಪುರದ ತಾ.ಪಂ.ಸಭೆಯಲ್ಲಿ ನಡೆದ ಸಾರಿಗೆ ಸಂಸ್ಥೆ ಅಧ್ಯಕ್ಷರ ಸಮಾಲೋಚನೆ ಸಭೆಯಲ್ಲಿ ಹೊಸ ಪೀಳಿಗೆಯ ಬಗ್ಗೆ ವಿಶೇಶ ಕಾಳಜಿ ವ್ಯಕ್ತವಾದದ್ದು ವಿಶೇಶವಾಗಿತ್ತು.
ಸಭೆಯ ಪ್ರಾರಂಭದಲ್ಲೇ ಮಾತನಾಡಿದ ಅಧ್ಯಕ್ಷ ವಿ.ಎಸ್. ಪಾಟೀಲ್ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವಾಹನ ಚಾಲಕರು,ನಿರ್ವಾಹಕರು ಬಹುತೇಕ ಉತ್ತರಕರ್ನಾಟಕದವರು. ಅವರು ಸೇವೆಗೆ ಇಲ್ಲಿ ಸೇರಿ ನಂತರ ವರ್ಗಾವಣೆಯಾಗುತ್ತಾರೆ. ಹಾಗಾಗಿ ಇಲ್ಲಿ ಸದಾ ಸಿಬ್ಬಂದಿಗಳ ಕೊರತೆ ಇರುತ್ತದೆ. ಇದು ಕೂಡಾ ಸಾರಿಗೆ ಅವ್ಯವಸ್ಥೆಗೆ ಕಾರಣ ಹಾಗಾಗಿ ಈಗ ಸಾರಿಗೆ ಸಂಸ್ಥೆ ಚಾಲಕರು ನಿರ್ವಾಹಕರಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಿ ಈ ಭಾಗದವರೂ ಸಂಸ್ಥೆ ಸೇರುವಂತೆ ಮಾಡುತ್ತೇವೆ ಅದಕ್ಕಾಗಿ ತರಬೇತಿ ಸಂಸ್ಥೆ ಪ್ರಾರಂಭಿಸುತ್ತೇವೆ ಎಂದರು.
ನಂತರ ಪ್ರಾರಂಭವಾದ ಸಭೆಗೆ ಅಹವಾಲು,ತಕರಾರು ತಿಳಿಸಿದ ಅನೇಕರು ತಾಲೂಕಿನ ವಿದ್ಯಾಸಂಸ್ಥೆಗಳಿಗೆ ವಾಹನ ವ್ಯವಸ್ಥೆ ಸಮರ್ಪಕವಾಗಿಲ್ಲ. ಕಾಲೇಜು,ಶಾಲೆ ಸೇರಿದ ಬಹುತೇಕ ವಿದ್ಯಾರ್ಥಿಗಳು ಸಾರಿಗೆ ಅವ್ಯವಸ್ಥೆಯಿಂದ ನಲುಗುವಂತಾಗಿದೆ. ಈ ತೊಂದರೆಯಿಂದ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ, ಅನಾರೋಗ್ಯ ಸೇರಿದಂತೆ ಅನೇಕ ಸಮಸ್ಯೆಗಳಾಗುತ್ತಿವೆ ಎಂದು ಅಧ್ಯಕ್ಷರ ಗಮನ ಸೆಳೆದರು.
ಬಿಳಗಿ,ಶಿರಗುಣಿ,ಹೆಗ್ಗರಣಿ,ಅವರಗುಪ್ಪಾ,ಹೇರೂರು ಸೇರಿದಂತೆ ತಾಲೂಕಿನ ಅನೇಕ ವಿದ್ಯಾ ಸಂಸ್ಥೆಗಳ ಪ್ರತಿನಿಧಿಗಳು ಸಾರಿಗೆ ಅವ್ಯವಸ್ಥೆಯಿಂದ ಹೊಸಪೀಳಿಗೆಗೆ ಆಗುತ್ತಿರುವ ತೊಂದರೆ ಹೇಳಿದರು. ಈ ಸಮಸ್ಯೆಗಳಿಗೆ ಪ್ರತಿಕ್ರೀಯಿಸಿದ ವಿ.ಎಸ್.ಪಾಟೀಲ್ ಮುಂದಿನ ಎರಡು ತಿಂಗಳಲ್ಲಿ ಈ ಅವ್ಯವಸ್ಥೆ ಸರಿಪಡಿಸುವ ಭರವಸೆ ನೀಡಿದರು.
ಸಭೆಯಲ್ಲಿ ಕೇಳಿಬಂದ ಮಾತುಗಳು (ಅಹವಾಲುಗಳು)
ಈಗಿರುವ ಶೆಡ್ಯೂಲ್‍ಗಳಲ್ಲಿ ತೊಂದರೆ ಬಗೆಹರಿಸಲು ಸಾಧ್ಯವಿಲ್ಲ.
-ಶ್ರೀಧರ ಹೆಗಡೆ,ಬೈಲಳ್ಳಿ
ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಶಿರಸಿಯಿಂದ, ನಮ್ಮ ತಾಲೂಕು ಕೇಂದ್ರದಿಂದ ವಾಹನ ಅನುಕೂಲ ಇಲ್ಲ. ಸಾಗರ-ಶಿರಸಿ ಮಾರ್ಗದ ಒಂದೆರಡು ಬಸ್ ಗಳನ್ನು ಜೋಗಕ್ಕೆ ಬಿಡಿ, ಇದರಿಂದ ಪ್ರವಾಸಿಗರು,ಸ್ಥಳಿಯರಿಗೆ ಅನುಕೂಲವಾಗುತ್ತದೆ.-ಶ್ರೀಧರ ನಾಯ್ಕ, ಬಸವನಬೈಲ್
ಹಬ್ಬ-ಉತ್ಸವಗಳ ಅವಧಿಯಲ್ಲಿ ಗ್ರಾಮೀಣ ಸಾರಿಗೆ ವ್ಯವಸ್ಥೆ ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ.
-ಕೃಷ್ಣಮೂರ್ತಿ ಐಸೂರು.
ಸಿದ್ಧಾಪುರ ಬೀರಲಮಕ್ಕಿಗೆ ಸಿಟಿಬಸ್ ಮತ್ತು ಬುರುಡೆ ಜಲಪಾತಕ್ಕೆ ಬಸ್ ವ್ಯವಸ್ಥೆ ಮಾಡಿ ಇದರಿಂದ ಸ್ಥಳಿಯರೊಂದಿಗೆ ಪ್ರವಾಸಿಗರಿಗೂ ಅನುಕೂಲ -ಶ್ರೀಧರ ನಾಯ್ಕ ,ಹೆಗ್ಗೇರಿ
ಬಸ್ ನಿಲ್ದಾಣದ ಕಾಮಗಾರಿ ವಿಳಂಬವಾಗುತ್ತಿದೆ. ಡಿಪೋ ನಿರ್ಮಾಣಕ್ಕೆ ಅವಶ್ಯ ತಾಂತ್ರಿಕ ಕೆಲಸ ನಡೆಯುತ್ತಿಲ್ಲ. ಆಗಿರುವ ಕೆಲಸ ದೇಶಪಾಂಡೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನವರು ಹೇಳುತ್ತಾರೆ. ಬಿ.ಜೆ.ಪಿ.ಯವರು ನೀವೇನು ಮಾಡುತಿದ್ದೀರಿ? ತಾಳಗುಪ್ಪಾ ರೇಲ್ವೆ ಲಿಂಕ್ ಬಸ್‍ಬೇಕು. ಬನವಾಸಿ ಬಸ್ ಅದೇ ಮಾರ್ಗದಲ್ಲಿ ಹುಬ್ಬಳ್ಳಿಯವರೆಗೆ ಹೋಗುವಂತಾದರೆ ಅನುಕೂಲ.- ವಾಸುದೇವ ಬಿಳಗಿ

¨ಹಿರಿಯರ ಸಂಸ್ಮರಣೆ. ಸಭಾಮಂದಿರ ಉದ್ಘಾಟನೆ
ಶ್ರೀ ಭುವನೇಶÀ್ವರಿ ತಾಳಮದ್ದಳೆ ಕೂಟ, ಕೇಶವನಾರಾಯಣ ಟ್ರಸ್ಟ್, ಅನಂತ ಯಕ್ಷಕಲಾ ಪ್ರತಿಷ್ಠಾನ ಇವುಗಳ ಸಹಯೋಗದಲ್ಲಿ ಕೇಶವನಾರಾಯಣ ದೇವಾಲಯದ ನೂತನ ಸಭಾಮಂದಿರ ಉದ್ಘಾಟನೆ ಹಾಗೂ ಹಿರಿಯರ ಸಂಸ್ಮರಣೆ ಕಾರ್ಯಕ್ರಮ ನ.10ರಂದು ಕಶಿಗೆ-ಹೇಮಗಾರಿನಲ್ಲಿ ನಡೆಯಲಿದೆ ಎಂದು ದೇವಾಲಯ ಆಡಳಿತ ಸಮಿತಿ ಕಾರ್ಯದರ್ಶಿ ಜಿ.ಕೆ.ಭಟ್ಟ ಕಶಿಗೆ ತಿಳಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರಗಳನ್ನು ನೀಡಿ ನ.10ರ ಬೆಳಿಗ್ಗೆ 10.30ಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಭಾಮಂದಿರ ಉದ್ಘಾಟಿಸುವರು. ನಂತರ ನಡೆಯುವ ಹಿರಿಯರ ಸಂಸ್ಮರಣೆ ಕಾರ್ಯಕ್ರಮವನ್ನು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ|ಎಂ.ಎ.ಹೆಗಡೆ ಉದ್ಘಾಟಿಸುವರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *