ನಾಟಿವೈದ್ಯರನ್ನು ಗುರುತಿಸಲು ಮನವಿ

ಸಿದ್ದಾಪುರ; ತಾಲೂಕಿನ ಕಡಕೇರಿಯಲ್ಲಿ ನಬಾರ್ಡ ಕಾರವಾರ ಹಾಗೂ ಧಾನ್ ಫೌಂಡೇಶನ್ ಶಿರಸಿ ಸಹಯೋಗದಲ್ಲಿ ನಾಟಿ ಪಶು ವೈದ್ಯಕೀಯ ಪದ್ಧತಿ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಸ್ಥಳೀಯ ನಾಟಿ ವೈದ್ಯ ಗೋವಿಂದ ಜಿ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಹಲವಾರು ರೋಗಗಳನ್ನು ಗುಣ ಪಡಿಸುವ ಶಕ್ತಿ ನಾಟಿ ವೈದ್ಯಕೀಯ ಪದ್ಧತಿಗೆ ಇದೆ. ಇಂತಹ ವೈದ್ಯರನ್ನು ಗುರುತಿಸುವ ಕಾರ್ಯ ಸಮಾಜದಿಂದ ಆಗಬೇಕಿದೆ. ನಾಟಿ ಪದ್ಧತಿಯಿಂದ ಚಿಕಿತ್ಸೆ ಪಡೆದರೆ ಉತ್ತಮ ಆರೋಗ್ಯವನ್ನು ಮನೆಯಿಂದಲೇ ಪ್ರಾರಂಭಿಸಬಹುದು. ಇದಕ್ಕೆ ಎಲ್ಲರ ಪ್ರೋತ್ಸಾಹ, ಸಹಕಾರದ ಅಗತ್ಯತೆ ಇದೆ ಎಂದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅವರಗುಪ್ಪಾದ ನಾಟಿ ಪಶು ವೈದ್ಯ ರೇವಣ್ಣ ಬಂಗಾರಿ ನಾಯ್ಕ ಜಾನುವಾರುಗಳಿಗೆ ಬರುವ ರೋಗಗಳಿಗೆ ನಾಟಿ ಪದ್ಧತಿಯಲ್ಲಿ ತಕ್ಷಣದಲ್ಲಿಯೇ ನೀಡಬಹುದಾದ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು.
ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕøತ ಎಂ.ಬಿ.ನಾಯ್ಕ, ಪ್ರಗತಿ ಪರ ಕೃಷಿಕ ಜಿ.ಕೆ.ಶಿಳಗೇರ್, ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಹೇಮಾವತಿ ನಾಯ್ಕ ವೇದಿಕೆಯಲ್ಲಿದ್ದರು.
ಧಾನ್ ಫೌಂಟೇಶನ್‍ನ ಶಿರಸಿ ವಲಯ ಸಂಯೋಜಕ ಗಜಾನನ ಹೆಗಡೆ ಪ್ರಾಸ್ಥಾವಿಕವಾಗಿ ಮಾತನಾಡಿದರು. ಧಾನ್ ಫೌಂಟೇಶನ್‍ನ ಸಿದ್ದಾಪುರ ಸಂಚಾಲಕ ಜಿ.ಬಿ.ನಾಯ್ಕ ಸ್ವಾಗತಿಸಿದರು. ಶಶಿಕಲಾ ನಾಯ್ಕ ವಂದಿಸಿದರು.
ಕಲ್ಲೂರಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಕ್ಕಳ ದಿನ ಆಚರಣೆ
ಸಿದ್ದಾಪುರ ತಾಲೂಕಿನಕಲ್ಲೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಮಕ್ಕಳು ನ.14ರಂದು ಭಾರತೀಯ ಸಂಸ್ಕøತಿ ಬಿಂಬಿಸುವ ಧೋತಿ, ಸಾರಿ, ಪಂಜೆಯುಟ್ಟು ಸಂಬ್ರಮಿಸಿದರು.
ಪಾಲಕರುತಮ್ಮ ಮಕ್ಕಳಿಗೆ ಉಡುಗೆತೊಡುಗೆ ಹಾಕಿ ಖುಷಿ ಪಟ್ಟರು.ನಂತರ ಮಕ್ಕಳಿಗಾಗಿ ಮನೋರಂಜನೆ ಕಾರ್ಯಕ್ರಮಗಳ ಜೊತೆಗೆ ವಿವಿಧ ಸ್ಪರ್ಧೆಗಳು ನಡೆದವು. ನಂತರ ಸಭಾಕಾರ್ಯಕ್ರಮದಲ್ಲಿ ಮಕ್ಕಳೇ ಸಭಾಕಾರ್ಯಕ್ರಮದಎಲ್ಲಾ ಜವಾಬ್ದಾರಿಯನ್ನು ನಿರ್ವಹಿಸಿದರು..ವಿಶೇಷವೆಂದರೆ ಮಕ್ಕಳೇ ವೇದಿಕೆಯ ಅಧ್ಯಕ್ಷ, ಅತಿಥಿ ಸ್ಥಾನದಲ್ಲಿದ್ದುಸಂಭ್ರಮಿಸಿದರು.

ತೆನೆ ಹೊರಲಿರುವ ಯುವತಿ ಯಾರು ಗೊತ್ತಾ?
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಮರುಚುನಾವಣೆ ಕಾಂಗ್ರೆಸ್ ಬಿ.ಜೆ.ಪಿ.ಗಳ ಜಿದ್ದಿನ ಕಣವಾದರೂ ಈ ಪಕ್ಷಗಳೊಂದಿಗೆ ಕೆಲವರು ಸ್ಫರ್ಧಿಸಿ ಸುದ್ದಿಮಾಡುತಿದ್ದಾರೆ. ಹೀಗೆ ಚುನಾವಣೆಯ ಸ್ಫರ್ಧೆ ಕಾರಣಕ್ಕೆ ಪ್ರಸಿದ್ಧರಾದವರು ಚೈತ್ರಾಗೌಡ.
ಚೈತ್ರಾಗೌಡಾ ಸಿದ್ಧಾಪುರ ತಾಲೂಕಿನ ಗೊಣವತ್ತಿಯ ಆನಂದಗೌಡರ ಮಗಳು. ಹಿರಿಯ ಅಧಿಕಾರಿಯಾಗಿ ದಂಪತಿಗಳಿಬ್ಬರೂ ವಕೀಲರಾಗಿ ಒಮ್ಮೆ ಶಿರಸಿ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ದಿಸಿ ಹೆಸರುಮಾಡಿರುವ ಆನಂದ ಗೌಡ ಮತ್ತವರ ಕುಟುಂಬ ಸಿದ್ದಾಪುರದ ಶಿಕ್ಷಿತ ಒಕ್ಕಲಿಗರ ಪರಿವಾರ.
ಶಿಕ್ಷಣ,ಕೃಷಿ,ಸಾಮಾಜಿಕ ಚಟುವಟಿಕೆಗಳ ಮೂಲಕ ಪ್ರಸಿದ್ಧವಾಗಿರುವ ಈ ಗೊಣವತ್ತಿ ಗೌಡರ ಕುಟುಂಬದ ಮಗಳು ಚೈತ್ರಾ ಎಂ.ಬಿ.ಎ. ಪದಿವಿಧರೆ.ಜನತಾದಳ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದ ಪ್ರಮುಖ ಸಂಘ,ಸಂಸ್ಥೆಗಳಲ್ಲಿ ಕೆಲಸಮಾಡಿರುವ ಚೈತ್ರಾ ಡಿ.5 ರಂದು ನಡೆಯಲಿರುವ ಯಲ್ಲಾಪುರ ಕ್ಷೇತ್ರದಲ್ಲಿ ಜಾ.ದಳದ ಅಭ್ಯರ್ಥಿ.
ನ.18 ರಂದು ನಾಮಪತ್ರ ಸಲ್ಲಿಸಲಿರುವ ಚೈತ್ರಾಗೌಡ ಶ್ರೀಮಂತರು, ಪ್ರಮುಖ ಪಕ್ಷಗಳು, ಪ್ರಭಾವಿಗಳು,ಪ್ರಮುಖರೆದುರು ಮಹಿಳೆ,ಯುವತಿ ಹೊಸಸ್ಫರ್ಧಿಯಾಗಿ ಕಣಕ್ಕಿಳಿದಿರುವ ಇವರ ವಾಸ್ತವ್ಯ,ಶಿಕ್ಷಣ ಶಿರಸಿಯಲ್ಲಾದರೂ ಮೂಲತ: ಸಿದ್ಧಾಪುರದವರಾಗಿ ಯಲ್ಲಾಪುರದ ಅಭ್ಯರ್ಥಿಯಾಗಿರುವುದು ವಿಶೇಶ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *